ನೋಟು ಅಪನಗದೀಕರಣ: ತಗ್ಗಿದ ಎಟಿಎಂ ಬಳಕೆ


Team Udayavani, Nov 8, 2017, 5:25 PM IST

08-27.jpg

ಶಿವಮೊಗ್ಗ: ಕೇಂದ್ರ ಸರ್ಕಾರ 500 ರೂ. ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟು ಅಮಾನ್ಯಿಕರಣಗೊಳಿಸಿ ನ. 8 ಕ್ಕೆ ಭರ್ತಿ ಒಂದು ವರ್ಷ. ನೋಟು ಅಮಾನ್ಯಿಕರಣದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ನಗದು ರಹಿತ ವ್ಯವಹಾರ ಜಿಲ್ಲೆಯಲ್ಲಿ ಶೇ. 30 ರಿಂದ 35 ರಷ್ಟು ಹೆಚ್ಚಳವಾಗಿದೆ! ಇದೇ ವೇಳೆ ಎಟಿಎಂ ಬಳಕೆ ಕಡಿಮೆಯಾಗುತ್ತಿದೆ ಎಂಬುದು ಗಮನಾರ್ಹ.

ನೋಟು ಅಮಾನ್ಯಿಕರಣಗೊಂಡ ಬಳಿಕ ಆರಂಭದಲ್ಲಿ ಜನತೆ ಹಾಗೂ ವ್ಯಾಪಾರಿಗಳು ತೊಂದರೆಗೆ ಸಿಲುಕಿದ್ದರಾದರೂ ಕ್ರಮೇಣ ಸುಧಾರಣೆ ಕಂಡು ಬರುತ್ತಿದೆ. ಜನರು ಆನ್‌ಲೈನ್‌ ವ್ಯವಹಾರದತ್ತ ಗಮನ ಜಾಸ್ತಿ ಹರಿಸಿದ್ದಾರೆ. ಜಿಲ್ಲೆಯಲ್ಲಿ ನಗದು
ರಹಿತ ವ್ಯವಹಾರ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗತೊಡಗಿದೆ. ಗಮನಿಸಬೇಕಾದ ಅಂಶವೇನೆಂದರೆ 45-50 ವಯೋಮಾನದೊಳಗಿನವರು ನಗದು ರಹಿತ ವ್ಯವಹಾರದಲ್ಲಿ ಹೆಚ್ಚಾಗಿ ಆಸಕ್ತಿ ತೋರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಇದರಿಂದ ಪಾರದರ್ಶಕ ವ್ಯವಹಾರ ಸಾಧ್ಯವಾಗಲಿದೆ ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಳವಾಗಲಿದೆ.

ಎಟಿಎಂ ಬಳಕೆ ಕುಸಿತ: ನೋಟು ಅಮಾನ್ಯಿಕರಣದ ಬಳಿಕ ಎಟಿಎಂ ಬಳಕೆಯಲ್ಲಿ ಕುಸಿತ ಕಾಣಿಸಿದೆ. ಶೇ. 40 ರಿಂದ 45 ರಷ್ಟು ಗ್ರಾಹಕರು ಎಟಿಎಂ ಬಳಕೆ ಮಾಡುವುದನ್ನು ಕಡಿಮೆ ಮಾಡಿದ್ದಾರೆ ಎಂದು ಲೀಡ್‌ ಬ್ಯಾಂಕ್‌ ವಿಭಾಗೀಯ ವ್ಯವಸ್ಥಾಪರಾದ ಸಾಲೋಮನ್‌ ಮೆನೆಜಸ್‌ ಹೇಳುತ್ತಾರೆ. ನಗದು ಪಡೆಯಲು ಗ್ರಾಹಕರು ಬ್ಯಾಂಕುಗಳಿಗೆ ಹಾಗೂ ಎಟಿಎಂ ಕೇಂದ್ರಕ್ಕೆ ಎಡತಾಕದೆ, ಆನ್‌ಲೈನ್‌, ಇಂಟರ್ನೆಟ್‌, ಮೊಬೈಲ್‌ ಆ್ಯಪ್‌ ಬಳಸಿ ನಗದು ರಹಿತ ವ್ಯವಹಾರ ಮಾಡತೊಡಗಿದ್ದಾರೆ. ಆದರೆ ಇದುವರೆಗೆ
ಎಟಿಎಂ ಕೇಂದ್ರಗಳನ್ನು ಕಡಿಮೆ ಮಾಡಿಲ್ಲ. ಹಿಂದಿನಂತೆ ಎಲ್ಲ ಎಟಿಎಂಗಳು ಕೂಡ ಕಾರ್ಯನಿರ್ವಹಿಸುತ್ತಿವೆ. ಎಟಿಎಂ ಕೇಂದ್ರಗಳನ್ನು ಕಡಿತ ಮಾಡುವ ಉದ್ದೇಶ ಕೂಡ ಇಲ್ಲ. ಆರ್‌ಬಿಐನಿಂದ ಕೂಡ ಅಂತಹ ಯಾವುದೇ ಸುತ್ತೋಲೆ ಬಂದಿಲ್ಲ ಎನ್ನುತ್ತಾರೆ.

ಸದ್ಯದ ಪರಿಸ್ಥಿತಿಯಲ್ಲಿ ಎಟಿಎಂಗಳಿಲ್ಲದೆ ಜನ ಜೀವನ ಸಾಧ್ಯವಿಲ್ಲ. ಇನ್ನು ನೋಟು ಅಮಾನ್ಯಿಕರಣಗೊಂಡಿದ್ದ ಸಂದರ್ಭದಲ್ಲಿ ಜನರಿಗೆ ಕೆಲವು ದಿನ ತೊಂದರೆಯಾಗಿತ್ತು ನಿಜ. ಇದೀಗ ಸಾಕಷ್ಟು ಸುಧಾರಣೆಯಾಗಿದೆ. ಮುಂದಿನ ಒಂದು ವರ್ಷದಲ್ಲಿ ಎಲ್ಲವೂ ಒಂದು ಹಂತಕ್ಕೆ ಬರುತ್ತದೆ ಎಂದವರು ವಿಶ್ವಾಸ ವ್ಯಕ್ತಪಡಿಸುತ್ತಾರೆ. ನಗದು ರಹಿತ ವ್ಯವಹಾರಕ್ಕೆ ಹೆಚ್ಚಾಗಿ ನಡೆಯಬೇಕು ಎಂಬ ಉದ್ದೇಶದಿಂದ ಹಿಂದಿನಂತೆ ಎಟಿಎಂ ಕೇಂದ್ರಗಳಿಗೆ ಹೆಚ್ಚಾಗಿ ಹಣ ಪೂರೈಕೆ ಮಾಡುತ್ತಿಲ್ಲ ಎಂದು ಬ್ಯಾಂಕ್‌ ಅಧಿಕಾರಿಗಳೇ ತಿಳಿಸುತ್ತಾರೆ.

ಅರಿವು ಮೂಡಿಸುವ ಕಾರ್ಯಕ್ರಮ:
ನಗದು ರಹಿತ ವ್ಯವಹಾರ ಕುರಿತು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಬಾರ್ಡ್‌, ವಿವಿಧ ಬ್ಯಾಂಕುಗಳ ಸಹಕಾರದಲ್ಲಿ ಹಣಕಾಸು ಮಾಹಿತಿ ನೀಡುವ ತಂತ್ರಜ್ಞರು ನೀಡುತ್ತಾ ಬಂದಿದ್ದಾರೆ. ನಗದು ರಹಿತ ವ್ಯವಹಾರ ಹೆಚ್ಚಾಗಿ ನಡೆಯಬೇಕು. ಇದು ಸರ್ಕಾರದ ಉದ್ದೇಶ ಎನ್ನುತ್ತಾರೆ ಸಾಲೋಮನ್‌ ಮೆನೆಜಸ್‌. 100 ರೂ. ಹಾಗೂ 200 ರೂ. ಮುಖಬೆಲೆಯ ನೋಟುಗಳ ಕೊರತೆ ಇದೆ. 200 ರೂ. ಮುಖಬೆಲೆಯ ನೋಟು ನೂತನವಾಗಿ ಮುದ್ರಣಗೊಳ್ಳುತ್ತಿದೆ. ಕ್ರಮೇಣ ಗ್ರಾಹಕರಿಗೆ ದೊರಕಲಿದೆ. 100 ರೂ. ಮುಖಬೆಲೆಯ ನೋಟುಗಳ ಬದಲಾವಣೆ ಸಾಧ್ಯತೆ ಇದೆ. ಹೀಗಾಗಿ ಹೊಸದಾಗಿ ಪೂರೈಕೆಯಾಗುತ್ತಿಲ್ಲ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.