ಮರಳು ಕ್ವಾರಿ ಒದಗಿಸಲು ಸೂಚನೆ
Team Udayavani, May 12, 2020, 7:42 AM IST
ಶಿವಮೊಗ್ಗ: ಸರ್ಕಾರದ ವತಿಯಿಂದ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ, ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆಯ ವಿವಿಧ ಯೋಜನೆಗಳಿಗೆ ಅಗತ್ಯವಾಗಿರುವ ಮರಳು ಸರಬರಾಜು ಮಾಡಲು ನಿಯಮಾನುಸಾರ ಹಾಗೂ ಅವರು ಬಯಸಿದಲ್ಲಿ ಪ್ರತ್ಯೇಕ ಮರಳು ಕ್ವಾರಿಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಶ್ರೀಮತಿ ರಷ್ಮಿ ಅವರಿಗೆ ಸೂಚಿಸಿದರು.
ಮರಳು ಮತ್ತು ಗಣಿಗಾರಿಕೆ ಕುರಿತ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಕಾಮಗಾರಿಗಳ ಉಪಯೋಗಕ್ಕೆ ತೀರ್ಥಹಳ್ಳಿ ತಾಲೂಕಿನ ಬುಕ್ಲಾಪುರ ಮತ್ತು ಶಿವಮೊಗ್ಗ ತಾಲೂಕಿನ ಹೊಳಲೂರು ಭಾಗಗಳಲ್ಲಿ ಮರಳು ಪರವಾನಗಿ ನೀಡಬೇಕೆಂದು ತುಂಗಾ ಮೇಲ್ದಂಡೆ ಯೋಜನೆ ಅಭಿಯಂತರರು ಕೋರಿದ್ದು, ಅವರ ಕೋರಿಕೆಯಂತೆ ಮರಳು ಕ್ವಾರಿ ಒದಗಿಸುವಂತೆಯೂ ಸೂಚಿಸಿದರು.
ಕ್ವಾರಿಗಳಿಂದ ಮರಳನ್ನು ತೆಗೆದು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ಮರಳು ದಾಸ್ತಾನು ಮಾಡಲು ಸ್ಟಾಕ್ ಯಾರ್ಡ್ ಮಾಡುವುದಕ್ಕೆ ಅನುಮತಿ ನೀಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಅಲ್ಲದೇ ಕೋವಿಡ್ ಹಾವಳಿಯಿಂದಾಗಿ ಬಗ್ಗೊಡಿಗೆ ಗ್ರಾಮದಲ್ಲಿ ಮರಳು ಕ್ವಾರೆಯನ್ನು ನಿಲ್ಲಿಸುವಂತೆ ನಾಲೂರು ಗ್ರಾಪಂಯಿಂದ ನೀಡಿರುವ ಮನವಿಯು ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿದ್ದು, ಕೋರಿಕೆಯು ಪುರಸ್ಕೃತವಲ್ಲ ಎಂದರು. ಮುಂಡುವಳ್ಳಿ, ಮಳಲೂರು ಮತ್ತು ಅರೇಹಳ್ಳಿ ಗ್ರಾಮ ಮರಳು ಬ್ಲಾಕ್ ಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಸೇರಿದ ಗಡಿ ಗ್ರಾಮ ಬಳಸಿಕೊಂಡು ಶಿವಮೊಗ್ಗ ಜಿಲ್ಲೆಗೆ ಮರಳು ಸಾಕಾಣಿಕೆ ವಾಹನಗಳು ಪ್ರವೇಶಿಸಬೇಕಾಗಿದ್ದು, ಪರವಾನಗಿಯಲ್ಲಿ ಸದರಿ ಗ್ರಾಮಗಳ ಹೆಸರುಗಳು ಬಾರದಿರುವುದರಿಂದ ಚಿಕ್ಕಮಗಳೂರು ಪೊಲೀಸರು ಪರವಾನಗಿ ಇದ್ದರೂ ವಾಹನಗಳನ್ನು ಜಪ್ತಿ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿವೆ. ಈ ಬಗ್ಗೆ ಚಿಕ್ಕಮಗಳೂರು ಡಿಸಿ ಜತೆ ಸಮಾಲೋಚನೆ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಉಪ ವಿಭಾಗಾಧಿಕಾರಿ ಕೃಷ್ಣಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ