ಅಡಿಕೆ ಧಾರಣೆ ದಿಢೀರ್ ಕುಸಿತ; ಕೇಂದ್ರದ ಗಮನಕ್ಕೆ ತರಲು ಬಿಎಸ್‌ವೈ ಭರವಸೆ


Team Udayavani, Feb 28, 2024, 5:27 PM IST

ಅಡಕೆ ಧಾರಣೆಯ ದಿಢೀರ್ ಕುಸಿತ; ಕೇಂದ್ರದ ಗಮನಕ್ಕೆ ತರಲು ಬಿಎಸ್‌ವೈ ಭರವಸೆ

ಸಾಗರ: ದಿಢೀರನೆ ಕುಸಿದಿರುವ ಅಡಕೆ ಬೆಲೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತಂದು, ಕಳ್ಳಸಾಗಾಣಿಕೆ ಅಡಕೆ ಕುರಿತು ತಕ್ಷಣ ಕ್ರಮ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಸಂಬಂಧಿಸಿದವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಧುರೀಣ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ತಾಲೂಕಿನ ಅಡಕೆ ಪರಿಷ್ಕರಣ ಹಾಗೂ ಮಾರಾಟ ಸಹಕಾರ ಸಂಘದ ನಿಯೋಗ ಶಿಕಾರಿಪುರದ ಬಿಎಸ್‌ವೈ ಅವರ ಸ್ವಗೃಹದಲ್ಲಿ ಬುಧವಾರ ಸಂವಾದ ನಡೆಸಿದ ಸಂದರ್ಭದಲ್ಲಿ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು ಭರವಸೆ ನೀಡಿ, ತಕ್ಷಣವೇ ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿ ಕೇಂದ್ರದ ಸಚಿವರೊಂದಿಗೆ ಮಾತನಾಡಿ ವಶಪಡಿಸಿಕೊಳ್ಳಲಾದ ಕಳ್ಳಸಾಗಾಣಿಕೆ ಅಡಕೆಯನ್ನು ಬಳಕೆಗೆ ಸಿಗದಂತೆ ಮಾಡಬೇಕು ಎಂಬ ವಾದವನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಹಾಗೂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ನಿಯೋಗ, ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಯ ಧಾರಣೆ ಈ ತಿಂಗಳಲ್ಲಿ ಏಕಾಏಕಿ ಐದಾರು ಸಾವಿರ ರೂ.ಗಳಷ್ಟು ಕುಸಿತ ಕಂಡಿದೆ. ಇನ್ನೂ ಆರೆಂಟು ಸಾವಿರ ರೂ. ಇಳಿತವಾದರೂ ಅಚ್ಚರಿಯಿಲ್ಲ ಎಂದು ವ್ಯಾಪಾರೀ ವಲಯವೇ ಅಂದಾಜು ಮಾಡುತ್ತಿದೆ. ಇದು ಅಡಕೆ ಬೆಳೆಗಾರ ವಲಯ ಹಾಗೂ ಅವಲಂಬಿತ ಕ್ಷೇತ್ರಗಳ ಜನರನ್ನು ಆತಂಕಿತರನ್ನಾಗಿ ಮಾಡಿದೆ.

ಕ್ಷೇತ್ರತಜ್ಞರ ಅಧ್ಯಯನ ಪ್ರಕಾರ ಭಾರತಕ್ಕೆ ಬರ್ಮಾ ದೇಶದಿಂದ ಅಡಕೆ ಕಳ್ಳಸಾಗಾಣಿಕೆ ರೂಪದಲ್ಲಿ ಒಂದೇ ಒಂದು ಪೈಸೆಯ ತೆರಿಗೆಯನ್ನು ಪಾವತಿಸದೆ ಬರುತ್ತಿರುವ ವಿದ್ಯಮಾನ ಈ ಕುಸಿತಕ್ಕೆ ಮುಖ್ಯ ಕಾರಣ ಎಂದು ನಿಯೋಗ ವಿವರಿಸಿತು.

ಬಿಳಿ ಅರ್ಥಾತ್ ಚಾಲಿ ಅಡಕೆ ಅಜಮಾಸು 25ಸಾವಿರ ರೂ.ನಲ್ಲಿ ಭಾರತದ ಮಾರುಕಟ್ಟೆಗೆ ಬರ್ಮಾದಿಂದ ಬಿಕರಿಯಾಗುತ್ತಿದೆ. ಇದರಿಂದ 37 ಸಾವಿರದ ಸರಾಸರಿಯಲ್ಲಿದ್ದ ಚಾಲಿ ಅಡಕೆ ಕ್ವಿಂಟಾಲ್ ಬೆಲೆ 3೦ ಸಾವಿರದ ಅಂದಾಜಿಗೆ ಕುಸಿದಿದೆ. ಕೆಂಪಡಿಕೆಯಲ್ಲೂ ದರ ಕುಸಿತ ಕಾಣಿಸಿದ್ದು, ಈವರೆಗೆ 49-50 ಸಾವಿರ ರೂ.ಗಳ ದರ ಹೊಂದಿದ ಕೆಂಪಡಿಕೆ ಬೆಲೆ ಈಗ 42-43ಸಾವಿರಕ್ಕೆ ಬಂದಿದೆ. ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕುಗಳ ಸಾಂಪ್ರದಾಯಿಕ ಬೆಳೆಗಾರರಲ್ಲಿ ಶೇ. 80ರಷ್ಟು ಜನ ಸಣ್ಣ ಬೆಳೆಗಾರರು. ಅವರು 10 ಗುಂಟೆ, 20 ಗುಂಟೆ, ಪರಮಾಧಿಕ ಎಂದರೆ ಒಂದೆಕರೆ ಹೊಂದಿದವರಾಗಿರುವ ಕಾರಣ ಅಡಕೆ ಬೆಲೆ ಕುಸಿತದ ನೇರ ಪರಿಣಾಮ ಅವರ ಬದುಕಿನಲ್ಲಾಗುತ್ತದೆ. ಅದರ ಜೊತೆಗೆ ಈ ಭಾಗದ ಅಷ್ಟೂ ವಲಯಗಳು ಅಡಕೆ ಬೆಲೆ ಜೊತೆ ನೇರ ಸಂಬಂಧ ಹೊಂದಿವೆ.

ವ್ಯಾಪಾರಿಗಳು, ನಿರ್ಮಾಣ ರಂಗ, ಸಾಮಾಜಿಕ ಚಟುವಟಿಕೆಗಳಲ್ಲೆಲ್ಲ ಅಡಕೆ ಬೆಲೆಯ ಕುಸಿತ ಪ್ರಭಾವ ಬೀರುತ್ತದೆ. ಈಗಿನ ಬೆಳವಣಿಗೆ ಈ ಭಾಗದ ಜನರ ಬದುಕನ್ನು ಅಲ್ಲೋಲಕಲ್ಲೋಲ ಮಾಡುತ್ತದೆ ಎಂದು ವಿವರಿಸಲಾಯಿತು.

ಮಲೆನಾಡು ಭಾಗದಲ್ಲಿ ಅಡಕೆ ಕೊಯ್ಲು ಡಿಸೆಂಬರ್‌ನಿಂದ ಆರಂಭವಾಗಿ ಫೆಬ್ರವರಿ ಹಂತದಲ್ಲಿ ಮುಕ್ತಾಯವಾಗಿ ಇಳುವರಿ ರೈತನ ಕೈ ಸೇರುತ್ತದೆ. ಕೃಷಿ ಸಾಲ ತೀರಿಸುವುದು, ಮದುವೆ ಮುಂಜಿ ನಿಯೋಜನೆ ಸೇರಿದಂತೆ ರೈತನ ಪ್ರತಿ ಚಟುವಟಿಕೆಗಳಿಗೆ ಈ ಕಾಲದಲ್ಲಿ ಮಾಡುವ ಅಡಕೆ ಬಿಕರಿಯಿಂದ ಸಿಗುವ ಆದಾಯ ಆಧಾರವಾಗಿರುತ್ತದೆ. ಆದರೆ ಈ ಬಾರಿ ರೈತನ ಅಡಕೆ ಮಾರುಕಟ್ಟೆಗೆ ಬರುವಂತಹ ಈ ಕಾಲಘಟ್ಟದಲ್ಲಿ ಆಗಿರುವ ತೀವ್ರ ದರ ಕುಸಿತ ತಾವು ಪ್ರೀತಿಸುವ ಅಡಕೆ ಬೆಳೆಗಾರ ಮತದಾರ ಬಾಂಧವರ ಬದುಕಲ್ಲಿ ಆಘಾತ ಉಂಟುಮಾಡಿದೆ.

ಈ ಹಿನ್ನೆಲೆಯಲ್ಲಿ ಅಡಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತಾಗಬೇಕು. ತೆರಿಗೆ ರಹಿತವಾಗಿ ಒಳನುಗ್ಗುತ್ತಿರುವ ಅಡಕೆಗೆ ಪ್ರತಿಬಂಧಕ ಕ್ರಮವನ್ನು ಅಧಿಕಾರಿ ವರ್ಗ ಕೈಗೊಳ್ಳುವಂತೆ ಮಾಡಬೇಕು. ಬೇನಾಮಿಯಾಗಿ ಬಂದ ಅಡಕೆ ಮಾಲನ್ನು ಬಳಕೆಯಿಂದ ಹೊರಗಿಡಬೇಕು. ಆ ಮೂಲಕ ಅಡಕೆಯ ಬೆಲೆಯ ಹಿಂಜರಿಕೆಯನ್ನು ತಡೆದು ಬೆಳೆಗಾರರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಬೇಕು ಎಂದು ನಿಯೋಗ ವಿನಂತಿಸಿತು.

ನಿಯೋಗದಲ್ಲಿ ಅಡಕೆ ಪರಿಷ್ಕರಣ ಹಾಗೂ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಬಿ.ಎ. ಇಂದೂಧರ, ಉಪಾಧ್ಯಕ್ಷ ಕೆ.ಎಸ್. ಸುಬ್ರಾವ್, ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಕೆ.ಎಂ.ಸೂರ್ಯನಾರಾಯಣ, ನಿರ್ದೇಶಕರಾದ ಎಚ್.ಕೆ.ರಾಘವೇಂದ್ರ, ಎಚ್.ಎಂ. ಓಮಕೇಶ, ಎಚ್.ಬಿ. ಕಲ್ಯಾಣಪ್ಪಗೌಡ, ಕೆ.ಎಸ್. ಭಾಸ್ಕರಭಟ್, ವೈ.ಎನ್. ಸುರೇಶ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.