ವೃದ್ಧ ನಾಪತ್ತಯಾಗಿದ್ದಾರೆಂದು ದೂರು ನೀಡಿದರೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದರು!


Team Udayavani, Jul 31, 2020, 10:49 AM IST

ವೃದ್ಧ ನಾಪತ್ತಯಾಗಿದ್ದಾರೆಂದು ದೂರು ನೀಡಿದರೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದರು!

ಶಿವಮೊಗ್ಗ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ವೃದ್ಧ ನಾಪತ್ತೆಯಾದಾಗ ಹುಡುಕಾಡಿದ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ನೀಡಿದ ಉತ್ತರ “ಅವರು ಎರಡು ದಿನದ ಹಿಂದೆಯೇ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯೂ ಆಗಿದೆ” ಎಂದು! ಈ ಘಟನೆ ನಡೆದಿದ್ದು ಶಿವಮೊಗ್ಗದಲ್ಲಿ.

ಏನಿದು ಘಟನೆ

ಉಸಿರಾಟದ ತೊಂದರೆಯಿದ್ದ ಹಿನ್ನೆಲೆಯಲ್ಲಿ‌ ಮಹಾದೇವಪ್ಪ ಎಂಬ ವೃದ್ಧರನ್ನ ಕುಟುಂಬದವರು ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಕೋವಿಡ್ ಟೆಸ್ಟ್ ನಲ್ಲಿ ಇವರಿಗೆ ಕೋವಿಡ್ ಸೋಂಕು ದೃಢವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಈ ಮಾಹಿತಿಯನ್ನು ಅಧಿಕಾರಿಗಳು ಮಹಾದೇವಪ್ಪ ಅವರ ಕುಟುಂಬಕ್ಕೆ ತಿಳಿಸಿರಲಿಲ್ಲ.

ನಂತರ ವಿಷಯ ತಿಳಿದು ಮೆಗ್ಗಾನ್ ಆಸ್ಪತ್ರೆಗೆ ಆಗಮಿಸಿದ ಕುಟುಂಬಿಕರು ಮಹಾದೇವಪ್ಪ ಬಗ್ಗೆ ವಿಚಾರಿಸಿದರೆ, ಆಸ್ಪತ್ರೆ ಸಿಬ್ಬಂದಿ ಮಾತ್ರ ಈ ಹೆಸರಿನವರು ಯಾರೂ ಇಲ್ಲ ಎಂದು ಕಳುಹಿಸಿದ್ದರು.

ಇದರಿಂದ ಕಂಗಾಲಾದ ಮಹಾದೇವಪ್ಪ ಕುಟುಂಬದವರು ವೃದ್ಧನಿಗಾಗಿ ಬಹಳಷ್ಟು ಹುಡುಕಾಡಿದರು. ಶಿಕಾರಿಪುರ ಆಸ್ಪತ್ರೆಯಲ್ಲಿ ಕೇಳಿದರೆ ಮೆಗ್ಗಾನ್ ಗೆ ಕರೆದುಕೊಂಡು ಹೋಗಿದ್ದಾರೆ ಎನ್ನುತ್ತಾರೆ, ಮೆಗ್ಗಾನ್ ಗೆ ಹೋದರೆ ಇಲ್ಲಿ ಯಾರೂ ಇಲ್ಲ ಎನ್ನುತ್ತಾರೆ. ಹೀಗೆ ಮೂರ್ನಾಲ್ಕು ದಿನ ಮೆಗ್ಗಾನ್ ಆಸ್ಪತ್ರೆಗೆ ಅಲೆದಾಡಿದರೂ ಯಾವುದೇ ಮಾಹಿತಿ ಸಿಗದಿದ್ದಾಗ ಕುಟುಂಬದವರು ಪೊಲೀಸರ ಮೊರೆ ಹೋಗಿದ್ದಾರೆ,

ಮೃತ ವೃದ್ಧನ ಕುಟುಂಬದವರು ನಾಪತ್ತೆ ಪ್ರಕರಣ ದಾಖಲಿಸಲು ಹೋದಾಗ ಎರಡು ದಿನದ ಹಿಂದೆ ವೃದ್ಧರು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯೂ ನಡೆದಿದೆ ಎಂದು ತಿಳಿದುಬಂದಿದೆ.

ಇದರಿಂದ ಆಕ್ರೋಶಗೊಂಡ ಕುಟುಂಬಿಕರು ಪ್ರಶ್ನಿಸಿದಾಗ, ಮಹಾದೇವಪ್ಪ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಾಗ ಅವರ ಜೊತೆ ಆಸ್ಪತ್ರೆಯಲ್ಲಿ‌ ಯಾರೂ ಇರಲಿಲ್ಲ. ಹೀಗಾಗಿ ಅವರನ್ನು ನಾವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದೆವು. ಬಳಿಕ ಅವರ ಕುಟುಂಬದವರಿಗೆ ಹುಡುಕಾಟ‌ ನಡೆಸಿದರೂ ಸಿಕ್ಕಿರಲಿಲ್ಲ. ಹಾಗಾಗಿ ಅವರ ವಿರುದ್ಧ ಅಂದೇ ದೂರು ದಾಖಲಿಸಿದ್ದೇವೆ. ಎರಡು ದಿನದ ಹಿಂದೆ ಸೋಂಕಿನಿಂದ 90 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅವರೇ ಮಹಾದೇವಪ್ಪನವರಾ ಅಥವಾ ಬೇರೆಯವರಾ ಎಂಬುದನ್ನು ಪರಿಶೀಲಿಸುತ್ತೇವೆ ಎನ್ನುತ್ತಿದ್ದಾರೆ ಆರೋಗ್ಯ ಅಧಿಕಾರಿಗಳು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.