ಓಲೈಕೆ ರಾಜಕಾರಣ ಸಲ್ಲ: ಸೂಲಿಬೆಲೆ


Team Udayavani, Jan 29, 2018, 3:28 PM IST

29-34.jpg

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಗಳು ಜಾತಿ, ಧರ್ಮದ ನಡುವೆ ಒಡಕು ಉಂಟು ಮಾಡುವ ಮೂಲಕ ಅಧಿಕಾರಕ್ಕೆ ಬರಬಹುದು ಎಂಬ ಭ್ರಮೆಯಲ್ಲಿ ಇರುವಂತಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಸಂಸ್ಕಾರ ಭಾರತಿ ವತಿಯಿಂದ ಆಯೋಜಿಸಿದ್ದ ಭಾರತ ಮಾತಾ ಪೂಜನ್‌ ಕಾರ್ಯಕ್ರಮದಲ್ಲಿ ಭಾರತದ ಆಂತರಿಕ ಸವಾಲುಗಳು  ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು. ಜಾತಿ ಜನಗಣತಿ ನಡೆಸುವ ಮೂಲಕ ಯಾವ ಜನರ ಓಲೈಕೆ ಮಾಡಿದರೆ ಅಧಿಕಾರಕ್ಕೆ ಮತ್ತೆ ಬರಬಹುದು ಎಂಬ ಕೆಟ್ಟ ಅಲೋಚನೆ ಮಾಡಿರುವುದು ದುರದೃಷ್ಟಕರ. ಕೆಟ್ಟ
ಕುತಂತ್ರ ರಾಜಕಾರಣದ ನೆಲೆಯಲ್ಲಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ನಿರ್ಧರಿಸಿದಂತಿದೆ ಎಂದು ದೂರಿದರು. 
ಸಾರ್ವಜನಿಕರಲ್ಲಿ ಧಾರ್ಮಿಕ ಹಾಗೂ ಭಾವನಾತ್ಮಕವಾಗಿ ಗೊಂದಲ ಮೂಡಿಸುವ ರಾಜಕಾರಣಿಗಳೇ ದೇಶದ ಸಮಸ್ಯೆ. ಚುನಾವಣೆಗೂ ಆರು ತಿಂಗಳ ಮೊದಲು ಯಾವುದೇ ಜಾತಿ, ಧರ್ಮದ ವಿಚಾರವಿರುವುದಿಲ್ಲ. ಆದರೆ ಚುನಾವಣೆ ಹತ್ತಿರವಾದಂತೆ ಹಿಂದೂ, ಮುಸ್ಲಿಂ ವಿಚಾರ ನೆನಪಾಗುವ ಮೂಲಕ ಕೋಮು ಭಾವನೆ ಕೆರಳಿಸುವ ಕೆಲಸ ಮಾಡುತ್ತಿರುವುದು ದುರದೃಷ್ಟಕರ
ಸಂಗತಿ ಎಂದರು. 

ಇದೀಗ ಅಲ್ಪಸಂಖ್ಯಾತರ ಮೇಲಿನ ಕೇಸ್‌ ವಾಪಾಸ್‌ ಪಡೆದು ಜಾತಿಗಳ ಓಲೈಕೆ ಮಾಡುತ್ತಿದ್ದಾರೆ. ಕೋಮು ಸಾಮರಸ್ಯ
ಕದಡುವ ಕೆಲಸ ಫಲಿಸುವುದಿಲ್ಲ ಎಂದು ರಾಜಕಾರಣಿಗಳಿಗೆ ಮನವರಿಕೆ ಮಾಡಿಕೊಟ್ಟರೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ತಿಳಿಸಿದರು. ದೇಶದಲ್ಲಿ 30 ರಾಜ್ಯಗಳಿದ್ದರೆ 3 ಸಾವಿರ ಜಾತಿಗಳ ಉದಯವಾಗಿವೆ. ಗುಜರಾತ್‌ ಚುನಾವಣೆ ವೇಳೆಯಲ್ಲಿ ಜಾತಿಯ ವಿಷ ಬೀಜ ಬೆಳೆಯುವಂತೆ ವಾತಾವರಣ ನಿರ್ಮಾಣವಾಗಿದ್ದು ಎಚ್ಚರಿಕೆಯ ಗಂಟೆ ಎಂದು
ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಸ್ತಾಪಿಸಿದ್ದರು. ಇಂತಹ ಜಾತಿಯತೆ ಬಗ್ಗೆ ಇಡೀ ದೇಶವೇ ಒಗ್ಗಟ್ಟಾಗಿ
ವಿರೋಧಿಸಬೇಕಿದೆ ಎಂದರು.

ರಜಪೂತ, ಪಟೇಲ್‌ ಹೀಗೆ ದೇಶದ ಎಲ್ಲ ಕಡೆಗಳಲ್ಲಿಯೂ ಆಯಾ ಪ್ರಾಂತ್ಯದ ಜಾತಿ ವಿಷಬೀಜ ಬಿತ್ತುವ ಕೆಲಸ ದುಷ್ಟ
ಸಂಘಟಿತ ಶಕ್ತಿಗಳು ನಡೆಸುತ್ತಿವೆ. ರಾಜ್ಯದಲ್ಲಿಯೂ ವೀರಶೈವ ಮತ್ತು ಲಿಂಗಾಯತ ಸೇರಿದಂತೆ ಜಾತಿ ಜಾತಿಗಳ
ನಡುವೆ ಒಡಕುಂಟು ಮಾಡುವ ಪ್ರಯತ್ನ ನಡೆದಿದೆ. ಶ್ರೇಷ್ಠ ಪರಂಪರೆ ಹೊಂದಿದ್ದ ಭಾರತ ದೇಶ ದಿಕ್ಕು ತಪ್ಪಲು
ಜಾತಿಗಳ ಒಡಕೇ ಮುಖ್ಯ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು. ರಾಜಕೀಯ ಇತಿಹಾಸದಲ್ಲಿ ಜಾತಿಯ
ಹೆಸರು ಉಲ್ಲೇಖೀಸದೇ ವಿಕಾಸವಾದದ ವಿಚಾರಧಾರೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ಚುನಾವಣೆಯಲ್ಲಿ ಮತ ಕೇಳುತ್ತಾ ಬಂದಿದ್ದಾರೆ. ಜಾತಿ ವಿಚಾರ ಹೊರತುಪಡಿಸಿ ವಿಕಾಸದ ಹಾದಿಯಲ್ಲೂ ಮುನ್ನಡೆಯಬಹುದು ಎಂಬ ಬಾಗಿಲು ತೆರೆದಿಟ್ಟಿದ್ದಾರೆ.
ಉಳಿದ ರಾಜಕಾರಣಿಗಳು ಇದನ್ನು ಅನುಸರಿಸುವ ಸಾಧ್ಯತೆ ತೆರೆದಿಟ್ಟಿದ್ದಾರೆ ಎಂದರು. ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಕಾರ ಭಾರತಿ ಅಧ್ಯಕ್ಷ ಹೊಸಹಳ್ಳಿ ವೆಂಕಟರಾಮ್‌ ಅಧ್ಯಕ್ಷತೆ ವಹಿಸಿದ್ದರು.
ಭೂಪಾಳಂ ವಿಜಯ್‌ಕುಮಾರ್‌, ಅರುಣ್‌ ಇದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.