ಬಹುಮತ ಬರದಿದ್ರೂ ಸರ್ಕಾರ ರಚಿಸಲು ಯಡಿಯೂರಪ್ಪನವರಿಂದ ಮಾತ್ರ ಸಾಧ್ಯ: ಶಾಸಕ ಅರಗ ಜ್ಞಾನೇಂದ್ರ
Team Udayavani, Jul 25, 2021, 8:19 PM IST
ತೀರ್ಥಹಳ್ಳಿ : ಕೆಲವು ಮಾಧ್ಯಮಗಳಲ್ಲಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬರುತ್ತಿದೆ. ಸದ್ಯಕ್ಕೆ ಈ ವಿಷಯ ಪ್ರಸ್ತುತ ಅಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ನಾನು ಅತ್ಯಂತ ಸಂತೋಷ ಪಡುತ್ತೇನೆ ಎಂದು ಶಾಸಕ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವಾಗಲಿ, ಮಂತ್ರಿ ಸ್ಥಾನವಾಗಲಿ ಖಾಲಿ ಇಲ್ಲ. ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಅತ್ಯಂತ ಸಮರ್ಥವಾಗಿ ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರು ಕೋವಿಡ್ ಸಮಯದಲ್ಲಿ, ಪ್ರವಾಹ ಸಂದರ್ಭದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದುವರೆಗೂ ಯಾವುದೇ ಮುಖ್ಯಮಂತ್ರಿ ಮಾಡದಂತಹ ಕೆಲಸವನ್ನು ಯಡಿಯೂರಪ್ಪ ಮಾಡಿದ್ದಾರೆ. ಅಲ್ಲದೇ ಬಹುಮತ ಬರದಿದ್ದರೂ ಸರ್ಕಾರ ರಚನೆ ಮಾಡುವ ಕೆಲಸವನ್ನು ಯಡಿಯೂರಪ್ಪನಂತವರು ಮಾತ್ರ ಮಾಡಬಹುದು. ಯಡಿಯೂರಪ್ಪ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ