![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕ್ವಾರಂಟೈನ್ ವಿರೋಧಿಸಿ ಅಧಿಕಾರಿಗಳೊಂದಿಗೆ ವಾಗ್ವಾದ
Team Udayavani, May 24, 2020, 1:30 PM IST
![ಕ್ವಾರಂಟೈನ್ ವಿರೋಧಿಸಿ ಅಧಿಕಾರಿಗಳೊಂದಿಗೆ ವಾಗ್ವಾದ](https://www.udayavani.com/wp-content/uploads/2020/05/shiv-quar-620x351.jpg)
ಮಹಾರಾಷ್ಟ್ರದಿಂದ ಬಂದವರ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಅಧಿಕಾರಿಗಳೊಂದಿಗೆ ಹುಣಸೆಕಟ್ಟೆ ಗ್ರಾಮಸ್ಥರು ವಾಗ್ವಾದ ನಡೆಸಿದರು.
ಭದ್ರಾವತಿ: ಶುಕ್ರವಾರ ಮಹಾರಾಷ್ಟ್ರದಿಂದ ಭದ್ರಾವತಿಗೆ ಬಂದ ನಾಲ್ಕು ಮಕ್ಕಳು ಸೇರಿದಂತೆ 18 ಜನರನ್ನು ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಬಾಲಕಿಯರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ವಿರೋಧಿಸಿ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದ ನಡೆಸಿದರು.
ಅವರನ್ನು ತಾಲೂಕಿನ ಯಾವ ಭಾಗದ ಹಾಸ್ಟೆಲ್ನಲ್ಲಿ ಕ್ವಾರಂಟೈನ್ನಲ್ಲಿಡುವುದು ಎಂಬ ಬಗ್ಗೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಕೋವಿಡ್ ಅಧಿಕಾರಿಗಳು ಶುಕ್ರವಾರ ಸಂಜೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಆ 18 ಜನರನ್ನು ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಬಳಿಯಿರುವ ಸರ್ಕಾರಿ ಬಾಲಕಿಯರ ವಸತಿಗೃಹದಲ್ಲಿರಿಸಲು ನಿರ್ಧರಿಸಿತು.
ಪ್ರತಿಭಟನೆ: ಮಹಾರಾಷ್ಟ್ರದಿಂದ ಬಂದಿರುವ 18 ಜನರನ್ನು ಹುಣಸೆಕಟ್ಟೆಯಲ್ಲಿನ ಸರ್ಕಾರಿ ಬಾಲಕಿಯರ ವಸತಿಗೃಹದಲ್ಲಿರಿಸಲು ಅವರನ್ನುಕರೆತರಲಾಗುತ್ತಿದೆ ಎಂಬ ವಿಷಯ ತಿಳಿದ ಆ ಗ್ರಾಮದ ಹಲವರು, ರಾತ್ರಿ 8 ಗಂಟೆಗೆ ಸರ್ಕಾರಿ ಬಾಲಕಿಯರ ವಸತಿಗೃಹದ ಬಳಿ ಜಮಾಯಿಸಿ ಕ್ವಾರಂಟೈನ್ಗೆ ಇಡಲ್ಪಡುವ ಜನರನ್ನು ಹೊತ್ತ ವಾಹನ ಅಲ್ಲಿಗೆ ಬರುತ್ತಿದ್ದಂತೆ ತಮ್ಮ ಗ್ರಾಮದ ಯಾವುದೇ ಸ್ಥಳದಲ್ಲಿ ಯಾರನ್ನೂ ಕ್ವಾರಂಟೈನ್ನಲ್ಲಿಡಬಾರದೆಂದು ರಸ್ತೆಗೆ ಅಡ್ಡವಾಗಿ ಮಲಗಿ ಕ್ವಾರಂಟೈನ್ಗೆ ವಿರೋಧಿಸಿದರು. ಇದಕ್ಕೆ ಅಲ್ಲಿನ ಕೆಲವು ಚುನಾಯಿತ ಪ್ರತಿನಿಧಿಗಳೂ ಬೆಂಬಲವಾಗಿ ನಿಂತು ಬೇರೆಡೆ ಕ್ವಾಂರಂಟೈನ್ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಲು ಮುಂದಾದರು. ಆದರೆ ತಹಶೀಲ್ದಾರ್ ಶಿವಕುಮಾರ್ ಹಾಗೂ ಅವರ ತಂಡದ ಅಧಿಕಾರಿಗಳು ತಡರಾತ್ರಿ 11ರವರೆಗೆ ಅಲ್ಲಿನ ಜನರ ಹಾಗೂ ಚುನಾಯಿತ ಪ್ರತಿನಿಧಿಗಳ ಬಳಿ ಮಾತಾಡಿ ಅವರ ಮನವೊಲಿಸಿ ಮಹಾರಾಷ್ಟ್ರದಿಂದ ಬಂದಿರುವ 18 ಜನರನ್ನು ಹುಣಸೆಕಟ್ಟೆಯಲ್ಲಿನ ಸರ್ಕಾರಿ ಬಾಲಕಿಯರ ವಸತಿಗೃಹದಲ್ಲಿರಿಸುವಲ್ಲಿ ಯಶಸ್ವಿಯಾದರು.
ನಗರಸಭೆ ಆಯುಕ್ತ ಮನೋಹರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ತಮ್ಮಣ್ಣ ಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ, ಹಿರಿಯ ಸಹಾಯಕ ಸಿಬ್ಬಂದಿ ನೀಲೇಶ್ರಾಜ್, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.