ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ಅಗತ್ಯ; ಡೋಂಗ್ರೆ
ಜನರ ಬಗ್ಗೆ ಕಾಳಜಿ ಇಲ್ಲದವರು ಸರಕಾರ ನಡೆಸುತ್ತಿದ್ದಾರೆ.
Team Udayavani, Jul 25, 2022, 6:34 PM IST
ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಕಾರ್ಮಿಕ ವರ್ಗ ಹೈರಾಣಾಗಿದೆ. ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಈ ಸಮಾವೇಶ ಒಂದು ವೇದಿಕೆಯಾಗಿದ್ದು, ಬೇಡಿಕೆ ಈಡೇರಿಕೆಗೆ ದೀರ್ಘವಾದ ಕಠಿಣ ಹೋರಾಟ ಅತ್ಯಗತ್ಯ ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ. ಡೋಂಗ್ರೆ ಹೇಳಿದರು.
ನಗರದ ಕೋರ್ಟ್ ಸರ್ಕಲ್ನಲ್ಲಿರುವ ಭೋವಿ ಭವನದಲ್ಲಿ ಭಾನುವಾರ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ಆಯೋಜಿಸಲಾಗಿದ್ದ ಬಿಸಿಯೂಟ ತಯಾರಕರ ರಾಜ್ಯ ಸಂಘಟನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ದುಡಿಯುವ ವರ್ಗದ ಯೋಗಕ್ಷೇಮ ನೋಡಿಕೊಳ್ಳಬೇಕು. ಆದರೆ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರ ವಿಷಯ ಸೇರಿದಂತೆ ಹಲವು ವಿಚಾರಗಳನ್ನು ನಮ್ಮ ಮುಂದಿಟ್ಟು ನಾವುಗಳೇ ಹೊಡೆದಾಡುವಂತೆ ಸರ್ಕಾರ ಮಾಡುತ್ತಿದೆ. ಹೀಗಾಗಿ ಮುಂದಿನ ಹೋರಾಟಕ್ಕೆ ಸಂಕಲ್ಪ ಮಾಡಿಕೊಳ್ಳಬೇಕಾದ ದಿನ ಇದಾಗಬೇಕು ಎಂದರು.
ಜವಾಬ್ದಾರಿಯೇ ಇಲ್ಲದವನ ಕೈಗೆ ಮನೆ ಯಜಮಾನಿಕೆ ಕೊಟ್ಟಂತೆ, ಜನರ ಬಗ್ಗೆ ಕಾಳಜಿ ಇಲ್ಲದವರು ಸರಕಾರ ನಡೆಸುತ್ತಿದ್ದಾರೆ. ಇಂದು ದೇಶದ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಉದ್ಯೋಗ ಕೊಡಿ ಎಂದರೆ ಉದ್ಯೋಗ ಕಿತ್ತುಕೊಳ್ಳುತ್ತಾರೆ, ವೇತನ ಹೆಚ್ಚಳ ಮಾಡಿ ಎಂದರೆ ಬೆಲೆ ಏರಿಕೆ ಮಾಡುತ್ತಾರೆ. ಇಂತಹ ಸರ್ಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.
ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅವರಗೆರೆ ಚಂದ್ರು ಮಾತನಾಡಿ, ಈಗಿನ ಶಿಕ್ಷಣ ಸಚಿವರು ಮನಷ್ಯತ್ವದ ವಿರೋಧಿಯಾಗಿದ್ದಾರೆ. ಅವರು ಬಿಸಿಯೂಟ ನೌಕರರ ವಿರೋಧಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಎಐಟಿಯುಸಿ ರಾಜ್ಯ ಅಧ್ಯಕ್ಷ ಹೊನ್ನಪ್ಪ ಮರೆಮ್ಮಾನವರ್ ಮಾತನಾಡಿ, ರಾಜ್ಯ ಸರ್ಕಾರ ಬಿಸಿಯೂಟ ತಯಾರಕರನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆ ಈಡೇರಿಕೆಗೆ ಉಗ್ರ ಹೋರಾಟ ನಡೆಸಬೇಕಾಗಿದೆ ಎಂದರು.
ರಾಜ್ಯದಲ್ಲಿ ಈಗಾಗಲೇ ಬಿಡುಗಡೆಗೊಳಿಸಲಾಗಿರುವ ಬಿಸಿಯೂಟ ತಯಾರಕರು ಸೇರಿದಂತೆ ಮುಂದೆ ನಿವೃತ್ತಿ ಹೊಂದುವವರಿಗೂ ಅನ್ವಯವಾಗುವಂತೆ 1.50 ಲಕ್ಷ ಇಡುಗಂಟು ಹಾಗೂ ನಿವೃತ್ತಿಯಾದವರಿಗೆ ಮಾಸಿಕ 3 ಸಾವಿರ ರೂ. ನಿವೃತ್ತಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಸಮಾವೇಶಕ್ಕೂ ಮೊದಲು ನಗರದಲ್ಲಿ ಬಿಸಿಯೂಟ ತಯಾರಕರ ಮೆರವಣಿಗೆ ನಡೆಯಿತು. ಸಮುದಾಯ ಭವನದ ಮುಂಭಾಗದಲ್ಲಿ ರಾಜ್ಯ ಸಮಿತಿ ಕಾರ್ಯದರ್ಶಿ ಎಂ.ಜಯಮ್ಮ ಧ್ವಜಾರೋಹಣ ನೆರವೇರಿಸಿದರು. ಕಾರ್ಮಿಕ ಸಂಘದ ಅಧ್ಯಕ್ಷ ಎಚ್.ಜಿ.ಉಮೇಶ್, ಎಐಟಿಯುಸಿ ಖಜಾಂಚಿ ರುದ್ರಮ್ಮ ಬೆಳಲಗೆರೆ, ಎಐಟಿಯುಸಿ ಜಿಲ್ಲಾಧ್ಯಕ್ಷೆ ಜಿ.ಜಿ.ಅಕ್ಕಮ್ಮ, ಉಪಾಧ್ಯಕ್ಷೆ ಶೈಲಜಾ, ಕಲಾವಿದ ಐರಣಿ ಚಂದ್ರು, ಪರಮೇಶ್ವರ ಕೆ. ಹೊಸಕೊಪ್ಪ, ಕಲ್ಪನಾ ಯಾದಗಿರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ