ಅನ್ಯಧರ್ಮೀಯರ ವ್ಯಾಪಾರ ನಿಷೇಧ ಬ್ಯಾನರ್ ತಾಲೂಕು ಆಡಳಿತ ಹಾಕಿಲ್ಲ: ತಹಶೀಲ್ದಾರ್ ಸ್ಪಷ್ಟನೆ
ನಮ್ಮ ಸಮುದಾಯದವರು ಹರಾಜಿನಲ್ಲಿ ಭಾಗವಹಿಸಿಲ್ಲ: ಮುಸ್ಲಿಂ ವ್ಯಾಪಾರಿ
Team Udayavani, Apr 1, 2022, 1:05 PM IST
ಸಾಗರ: ಇಲ್ಲಿಯ ಮಹಾಗಣಪತಿ ದೇವರ ಜಾತ್ರೆಯು ಏಪ್ರಿಲ್ 2ರಿಂದ 8ರವರೆಗೆ ನಡೆಯಲಿದ್ದು, ಕೆಲವೆಡೆ ಅಳವಡಿಸಲಾಗಿದ್ದ ‘ಹಿಂದೂಯೇತರ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ’ಎಂಬ ಬ್ಯಾನರ್ಗಳನ್ನು ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ತೆರವುಗೊಳಿಸಿಲಾಗಿದೆ.
ಬ್ಯಾನರ್ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಗಣಪತಿ ಜಾತ್ರೆಯಲ್ಲಿ ಹಿಂದೂಯೇತರ ಧರ್ಮಿಯರು ವ್ಯಾಪಾರ ನಡೆಸುವಂತಿಲ್ಲ ಎಂದು ತಾಲೂಕು ಆಡಳಿತ ಯಾವುದೇ ಬ್ಯಾನರ್ ಹಾಕಿಲ್ಲ. ಬೇರೆಯವರು ಅಳವಡಿಸಿದ್ದು, ಈ ರೀತಿ ಸಂದೇಶವಿರುವ ಬ್ಯಾನರನ್ನು ತಾಲೂಕು ಆಡಳಿತದ ವತಿಯಿಂದ ತೆರವುಗೊಳಿಸಲಾಗಿದೆ. ತಾಲೂಕು ಆಡಳಿತ ಅಂತಹ ಯಾವುದೇ ನಿರ್ಬಂಧ ಹೇರಿಲ್ಲ ಎಂದು ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಕೌಟುಂಬಿಕ ಕಲಹ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ
ಈ ನಡುವೆ ಹಿಂದೂಯೇತರ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಅಧಿಕೃತವಾಗಿ ತಾಲೂಕು ಆಡಳಿತ ಹೇಳದೇ ಇದ್ದರೂ ಸ್ಥಳೀಯ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಮುದಾಯದವರು ಈ ಬಾರಿ ಜಾತ್ರೆಯ ಮಳಿಗೆ ಹರಾಜಿನಲ್ಲಿ ಪಾಲ್ಗೊಂಡಿಲ್ಲ ಎಂದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ