ಯೋಧರ ಮೇಲಿನ ದಾಳಿಗೆ ಆಕ್ರೋಶ
Team Udayavani, Feb 18, 2019, 11:17 AM IST
ಶಿವಮೊಗ್ಗ: ಜಮ್ಮು- ಕಾಶ್ಮೀರದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗೋಪಿ ವೃತ್ತದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ
ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಉಗ್ರರ ದುಷ್ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭಯೋತ್ಪಾದಕ ಸಂಘಟನೆಗಳಿಗೆ ಹಾಗೂ ಭಯೋತ್ಪಾದನಾ ಚಟುವಟಿಕಗಳಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದಂತ ರಾಷ್ಟ್ರಗಳ ವಿರುದ್ಧ ಕಠಿಣ ನಿಲುವನ್ನು ಕೈಗೊಳ್ಳಬೇಕು. ಈ ಹಿಂದೆ ಸರ್ಜಿಕಲ್ ದಾಳಿ ಮಾಡಿದಂತೆ ಮತ್ತೂಮ್ಮೆ ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡಬೇಕು. ಆ ಮೂಲಕ ಮುಂದೆ ಈ ರೀತಿಯ ಘಟನೆಗಳು ಆಗದಂತೆ ಎಚ್ಚರ ವಹಿಸುವ ಜೊತೆಗೆ, ಹುತಾತ್ಮರಾದ ಯೋಧರ ಕುಟುಂಬಗಳಿಗೆ ಸೂಕ್ತ ನೆರವು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಉಪಮೇಯರ್ ಚನ್ನಬಸಪ್ಪ, ಜಿಪಂ ಸದಸ್ಯ ವೀರಭದ್ರಪ್ಪ ಪೂಜಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’