ಸರ್ಕಾರ ರೈತರ ಕಷ್ಟ ಅರ್ಥ ಮಾಡಿಕೊಳ್ಳಲಿ


Team Udayavani, Nov 10, 2020, 7:30 PM IST

ಸರ್ಕಾರ ರೈತರ ಕಷ್ಟ ಅರ್ಥ ಮಾಡಿಕೊಳ್ಳಲಿ

ತೀರ್ಥಹಳ್ಳಿ: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ರೈತರ ಕಷ್ಟದ ಬಗ್ಗೆ ಚಿಂತನೆ ಮಾಡುತ್ತಿಲ್ಲ. ಈ ಮರಣ ಶಾಸನದಿಂದ ರೈತರು ನೆಮ್ಮದಿಯಿಂದ ನಿದ್ರೆ ಮಾಡುವಂತಿಲ್ಲ. ಇಂತಹ ಸರ್ಕಾರಗಳು ಇರಬಾರದು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಕಸ್ತೂರಿ ರಂಗನ್‌ ವರದಿ ವಿರೋಧಿಸಿ ಹಿರಿಯ ಸಹಕಾರಿ ಮುಖಂಡ ಆರ್‌.ಎಂ.ಮಂಜುನಾಥ ಗೌಡರ ನೇತೃತ್ವದಲ್ಲಿ ನಡೆದ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗಿನ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ರೈತಪರ ಮುಖ್ಯಮಂತ್ರಿಯಿದ್ದಿದ್ದರೆ ಅದು ಬಂಗಾರಪ್ಪ, ಸಿದ್ದರಾಮಯ್ಯ ಮಾತ್ರ. ಯಡಿಯೂರಪ್ಪನವರೇನಿದ್ದರೂ ಮಠಗಳ ಪರ ಎಂದು ಲೇವಡಿ ಮಾಡಿದರು .

ಯಡಿಯೂರಪ್ಪ ಡೋಂಗಿ ರೈತ. ಪ್ರವಾಹ ಬಂದಾಗ ಶಿಕಾರಿಪುರದಲ್ಲಿ ಠಿಕಾಣಿ ಹೂಡಿದ್ದರೆ, ಇತ್ತ ಇವರ ಮಂತ್ರಿಮಂಡಲದ ಪ್ರಭಾವಿ ಮಂತ್ರಿ ಗೋವಿಂದ ಕಾರಜೋಳ ನನಗೆ ವಯಸ್ಸಾಗಿದೆ. ಕೋವಿಡ್ ಬರುತ್ತದೆ ಎಂದು ಹೇಳುತ್ತಾ ಉಪಚುನಾವಣೆಯಲ್ಲಿ ಕೈಬೀಸುತ್ತಾರೆ.ವಯಸ್ಸಾದರೆ ರಾಜೀನಾಮೆ ನೀಡಿ ಯುವಕರಿಗೆ ಅವಕಾಶ ಮಾಡಿಕೊಡಲಿ. ಕೇರಳದಲ್ಲಿ ತರಕಾರಿಗೆ ಬೆಂಬಲ ಬೆಲೆ ಕೊಡುತ್ತಿದ್ದಾರೆ. ಆದರೆ ನಮ್ಮಲ್ಲಿ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ದುಡ್ಡಿಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಕೆ.ಎಲ್‌. ಅಶೋಕ್‌ ಮಾತನಾಡಿ, ಪಶ್ಚಿಮ ಘಟ್ಟ, ಮಲೆನಾಡು ಬಿಕ್ಕಟ್ಟಿನತ್ತ ಸಾಗುತ್ತಿದೆ. ಬಡವರು, ರೈತರು ಅಸುರಕ್ಷಿತರಾಗಿದ್ದಾರೆ. ಯಾವಾಗ ಯಾವ ಯೋಜನೆ ಜಾರಿಯಾಗುತ್ತದೆ ಎಂಬ ಆತಂಕ ಕಾಡುತ್ತಿದೆ. ಮಲೆನಾಡಿನ ಶಾಸಕರು-ಸಂಸದರಿಗೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದರು.

ಆರ್‌.ಎಂ. ಮಂಜುನಾಥ ಗೌಡ ಮಾತನಾಡಿ, ಕಸ್ತೂರಿ ರಂಗನ್‌ ವರದಿ ರೈತರಿಗೆ ಮಾರಕವಾಗಿದೆ. ಬಿದರಗೋಡು ರಾಮಮಂದಿರದಿಂದ ಆರಂಭ ಮಾಡಿದ ಪಾದಯಾತ್ರೆ ತೀರ್ಥಹಳ್ಳಿ ರಾಮೇಶ್ವರನ ಕ್ಷೇತ್ರಕ್ಕೆ ಬಂದು ಅಂತ್ಯವಾಗಿದೆ. ಇದು ಇಲ್ಲಿಗೇ ನಿಲ್ಲುವುದಿಲ್ಲ. ಈ ಪಾದಯಾತ್ರೆ ಮನವಿ ಅರ್ಪಿಸುವುದಕ್ಕೆ ಮಾತ್ರ ಸೀಮಿತವಲ್ಲ. ಜನರನ್ನು ಜಾಗೃತಿಗೊಳಿಸುವಂತಹ ಹೋರಾಟ ಮತ್ತು ಮಾಹಿತಿ ಕೊಡುವ ಕಾರ್ಯಗಾರವಾಗಿತ್ತು. ಆ ದಿಸೆಯಲ್ಲೇ ಹೋರಾಟ ಮುಂದುವರಿಯುತ್ತದೆ ಎಂದರು.

ಡಿಸಿಸಿ ಬ್ಯಾಂಕ್‌ ಲಾಭದಲ್ಲಿರುವುದು ನನ್ನ ತಪಸ್ಸು ಹಾಗೂ ಸಾಧನೆ. ರೈತರು, ಖಾಸಗಿ ಲೇವಾದೇವಿ ಹಾಗೂ ಮಂಡಿಗಳಿಗೆ ಹೋಗಬಾರದು ಎನ್ನುವ ಕಾರಣಕ್ಕೆ ಸಹಕಾರಿ ಕ್ಷೇತ್ರದಿಂದಲೇ ಸಾಲ ದೊರಕುವಂತೆ ಮಾಡಲು ಡಿಸಿಸಿ ಬ್ಯಾಂಕ್‌ ಅಧ್ಯಕ್ಷನಾಗಬೇಕೆಂದು ಕನಸು ಕಂಡೆ. ಹತ್ತು ವರ್ಷಗಳ ನಂತರ ನಾನು ಡಿಸಿಸಿ ಬ್ಯಾಂಕ್‌ ಅಧ್ಯಕ್ಷನಾಗಲು ಸಾಧ್ಯವಾಯಿತು. ಅಂದು ಒಬ್ಬೊಬ್ಬ ರೈತನಿಗೆ ಐದು ಸಾವಿರ ರೂ. ಸಾಲ ನೀಡಲಾಗುತ್ತಿತ್ತು. ಅಂದು ಡಿಸಿಸಿ ಬ್ಯಾಂಕ್‌ 21 ಕೋಟಿ ಸಾಲವನ್ನು 6 ಸಾವಿರ ರೈತರಿಗೆ ನೀಡುತ್ತಿತ್ತು. ಇಂದು ನಾಲ್ಕು ಸಾವಿರ ಡಿಸಿಸಿ ಬ್ಯಾಂಕ್‌ ಗ್ರಾಹಕರಿದ್ದಾರೆ ಎಂದರು.

ಮಲೆನಾಡು ಥೈಲ್ಯಾಂಡ್‌ ಆಗಬಾರದು. ಮಲೆನಾಡು ಮಳೆನಾಡಾಗಿ ತೀರ್ಥಹಳ್ಳಿಯ ಅದ್ಭುತ ಸಂಸ್ಕೃತಿಯನ್ನು ಬೆಳೆಸುವಂತಾಗಬೇಕು. ಜೈ ಶ್ರೀರಾಮ್‌ ಎಂದ ಕೂಡಲೇ ಸಂಸ್ಕೃತಿಯಲ್ಲ. ಕೋಮುವಾದದ ಹೆಸರಿನಲ್ಲಿ ದೇಶ ಆಳುವ ದಿನ ಮುಗಿದು ಹೋಯಿತು ಎಂದರು.

ಸಮಾರೋಪ ಸಮಾರಂಭದಲ್ಲಿ, ಕಲ್ಕುಳಿ ವಿಠಲ ಹೆಗ್ಡೆ, ಹಿರಿಯ ಸಹಕಾರಿ ಎಚ್‌.ಎನ್‌. ವಿಜಯದೇವ್‌, ಪ್ರಗತಿಪರ ಹೋರಾಟಗಾರ ಕಲ್ಲಾಳ ಶ್ರೀಧರ್‌, ರಾಜ್ಯ ಜನಶಕ್ತಿ ಪ್ರಧಾನ ಕಾರ್ಯದರ್ಶಿ ಕೆ.ಎಲ್‌. ಅಶೋಕ್‌, ಎಪಿಎಂಸಿ ಅಧ್ಯಕ್ಷ ದುಗ್ಗಪ್ಪ ಗೌಡ, ಜೆಡಿಎಸ್‌ ತಾಲೂಕು ಅಧ್ಯಕ್ಷ ಸುಂದರೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.