ಶಿವಮೊಗ್ಗದಲ್ಲಿ ರೌಡಿಗಳ ಪರೇಡ್‌

ಮನೆಗಳಿಗೆ ತೆರಳಿ ಪರಿಶೀಲನೆ ಕೂಡ ಮಾಡಲಾಗುವುದು

Team Udayavani, Jul 4, 2022, 6:23 PM IST

ಶಿವಮೊಗ್ಗದಲ್ಲಿ ರೌಡಿಗಳ ಪರೇಡ್‌

ಶಿವಮೊಗ್ಗ: ಆಷಾಢ ಮಾಸದ ನಂತರ ಹಬ್ಬಗಳ ಸಾಲು ಶುರುವಾಗಲಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ರೌಡಿಗಳ ಪರೇಡ್‌ನ‌ಡೆಸಿದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್‌) ಮೈದಾನದಲ್ಲಿ ಭಾನುವಾರ ಶಿವಮೊಗ್ಗ ಪೊಲೀಸ್‌ ಉಪ ವಿಭಾಗ ವ್ಯಾಪ್ತಿಯ ದೊಡ್ಡಪೇಟೆ, ಕೋಟೆ, ವಿನೋಬನಗರ, ಜಯನಗರ, ತುಂಗಾ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ 800 ರೌಡಿಗಳಲ್ಲಿ 175 ಜನರನ್ನು ಕರೆದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮಿಪ್ರಸಾದ್‌ ಅವರು ಖಡಕ್‌ ಎಚ್ಚರಿಕೆ ನೀಡಿದರು.

ಪರೇಡ್‌ನ‌ಲ್ಲಿ ಪಾಲ್ಗೊಂಡಿದ್ದ 175 ರೌಡಿಗಳ ಬಗ್ಗೆ ಮಾಹಿತಿ ಪಡೆದ ಎಸ್‌ಪಿ, ಪ್ರತಿಯೊಬ್ಬ ರೌಡಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಪರೇಡ್‌ನ‌ಲ್ಲಿ ಪಾಲ್ಗೊಂಡ ಕೆಲವರು ಈಗಾಗಲೇ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಅಂತಹವರ ಪಟ್ಟಿಯನ್ನು ಸಹ ಸಿದ್ಧಪಡಿಸಲಾಗಿದೆ. ಡಿಸೆಂಬರ್‌ವರೆಗೆ ಅವರ ಮೇಲೆ ತೀವ್ರ ನಿಗಾ ಇಡಲಾಗುವುದು. ಇವರು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡದಿದ್ದರೆ ರೌಡಿಶೀಟ್‌ನಿಂದ ಹೊರಗಿಡಲಾಗುವುದು ಎಂದರು.

ರೌಡಿ ಪರೇಡ್‌ನ‌ಲ್ಲಿರುವ ಕೆಲವರಲ್ಲಿ ಗಾಂಜಾ ಸೇವನೆ ಮಾಡುವ ಬಗ್ಗೆ ಶಂಕೆ ಇದೆ. ಅಂತಹವರ ಮೇಲೆಯೂ ಕಣ್ಣಿಡಲಾಗಿದೆ. ಹಳಬರಿಗಿಂತ ಹೊಸಬರು ಸಣ್ಣ ಪ್ರಮಾಣದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿಕೊಂಡಿದ್ದಾರೆ. ಅಂತವರ ಮಾಹಿತಿ ಸಿಕ್ಕಿದೆ.

ಈಗಾಗಲೇ ಗಾಂಜಾ ನಿಗ್ರಹಿಸುವುದಕ್ಕಾಗಿ ಜಿಲ್ಲೆಯಲ್ಲಿ ನಾನಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ರೌಡಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ನಿರಂತರ ನಿಗಾ ಇಡಲಾಗುವುದು. ಅವರು ಯಾರೊಂದಿಗೆ ಸೇರುತ್ತಾರೆ. ಯಾವ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂಬಿತ್ಯಾದಿ ಮಾಹಿತಿಗಳನ್ನು ಕಲೆ ಹಾಕಲಾಗುವುದು. ಮನೆಗಳಿಗೆ ತೆರಳಿ ಪರಿಶೀಲನೆ ಕೂಡ ಮಾಡಲಾಗುವುದು. ಈ ವೇಳೆ ಯಾವುದೇ ಸುಳಿವು ಸಿಕ್ಕರೆ ಅಂತಹವರು ಪಟ್ಟಿಯಲ್ಲೇ ಉಳಿದುಕೊಳ್ಳಲಿದ್ದಾರೆ ಎಂದು ಹೇಳಿದರು. ಇದೇ ವೇಳೆ ಕಾನೂನು ಬಾಹಿರ ಚಟುವಟಿಕೆಗಳಿಂದ ಆಚೆ ಬಾರದ ವ್ಯಕ್ತಿಗಳನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ 9 ಮಂದಿಯ ಲಿಸ್ಟ್‌ ರೆಡಿಯಾಗಿದೆ ಎಂದರು. ಕಾನೂನು ಮೀರಿ ವರ್ತಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಪರೇಡ್‌ ವೇಳೆ ಆಯಾ ಪೊಲೀಸ್‌ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಸಾಲು- ಸಾಲು ಹಬ್ಬಗಳು ಬರಲಿದ್ದು, ರೌಡಿಗಳ ಮೇಲೆ ನಿಗಾ ಇಡಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ. ಬ್ರಕೀದ್‌ ಹಿನ್ನೆಲೆಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಸಾಧ್ಯತೆ ಇರುವುದರಿಂದ ಅಂತಹವರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವರ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ. ಕಡೇಕಲ್‌ ಹಬೀಬ್‌ ಎಂಬಾತನ ವಿರುದ್ಧ ಗೂಂಡಾ ಕಾಯ್ದೆ ಹಾಕಲು ಶಿಫಾರಸು ಮಾಡಲಾಗಿದೆ. ಜಿಲ್ಲಾದ್ಯಂತ 1400 ರೌಡಿಗಳಿದ್ದು, ಶಿವಮೊಗ್ಗ ಉಪ ವಿಭಾಗದಲ್ಲಿಯೇ 800 ಜನರಿದ್ದಾರೆ.
ಬಿ.ಎಂ.ಲಕ್ಷ್ಮಿಪ್ರಸಾದ್‌, ಎಸ್‌ಪಿ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.