ಮೂರು ತಿಂಗಳಿಗೊಮ್ಮೆ ಜನಸಂಪರ್ಕ ಸಭೆ

ಹೊರವರ್ತುಲ ರಸ್ತೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ

Team Udayavani, May 27, 2019, 10:41 AM IST

sm-tdy-2..

ಸಾಗರ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಹಾಲಪ್ಪ ನಗರದ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಸಾಗರ: ನಗರದ ವಿವಿಧೆಡೆ ಕುಂದುಕೊರತೆ ನಿವಾರಣಾ ಕೇಂದ್ರಗಳ ಸ್ಥಾಪನೆ, ಮೂರು ತಿಂಗಳಿಗೊಮ್ಮೆ 31 ವಾರ್ಡ್‌ನಲ್ಲೂ ಜನಸಂಪರ್ಕ ಸಭೆ ಮೊದಲಾದ ಭರವಸೆಗಳನ್ನುಳ್ಳ ಬಿಜೆಪಿ ಪ್ರಣಾಳಿಕೆಯನ್ನು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಎಚ್. ಹಾಲಪ್ಪ ನಗರದ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಭಾನುವಾರ ಬಿಡುಗಡೆಗೊಳಿಸಿದರು.

ಬಿಜೆಪಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಒಂದಷ್ಟು ಅಂಶಗಳನ್ನು ಪ್ರಣಾಳಿಕೆ ರೂಪದಲ್ಲಿ ಜನರ ಎದುರು ಇಡುತ್ತಿದೆ. ಭ್ರಷ್ಟಾಚಾರರಹಿತ ಜನಸ್ನೇಹಿ ಆಡಳಿತ, ಗುಣಮಟ್ಟದ ಕಾಮಗಾರಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಗಣಪತಿ ಕೆರೆ ಸರ್ವಾಂಗೀಣ ಅಭಿವೃದ್ಧಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಸುಸಜ್ಜಿತ ಟ್ಯಾಗೋರ್‌ ಕಲ್ಚರಲ್ ಕಾಂಪ್ಲೆಕ್ಸ್‌ ರಂಗಮಂದಿರ ನಿರ್ಮಾಣದ ಕನಸು ನಮ್ಮದು. ಹೊರವರ್ತುಲ ರಸ್ತೆ ನಿರ್ಮಾಣ ಕುರಿತು ಚಿಂತನೆ ನಡೆಸಲಾಗಿದ್ದು, ಈಗಾಗಲೇ ಈ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾಗರ ನಗರ ಜನರ ಬಹುಕಾಲದ ಬೇಡಿಕೆಯಾಗಿರುವ ಬಿಎಚ್ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಎಲ್ಲ ಬಡಾವಣೆ ಮತ್ತು ರಸ್ತೆಗಳಿಗೆ ನಾಮಫಲಕ ಅಳವಡಿಕೆ, ಬೀದಿದೀಪ ಮತ್ತು ಕುಡಿಯುವ ನೀರಿನ, ನೈರ್ಮಲ್ಯ ಕುರಿತು ಹೆಚ್ಚಿನ ನಿಗಾ ವಹಿಸುವುದು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ, ಯೋಗ ಚಟುವಟಿಕೆಗಳನ್ನು ನಡೆಸುವುದು, ಅವಶಕ್ಯತೆ ಇರುವ ಕಡೆಗಳಲ್ಲಿ ರೈಲ್ವೆ ಓವರ್‌ ಮತ್ತು ಅಂಡರ್‌ ಬ್ರಿಡ್ಜ್ ನಿರ್ಮಾಣ, ಹಾಲಿ ಇರುವ ಕ್ರೀಡಾಂಗಣ ಮೇಲ್ದರ್ಜೆಗೆ ಏರಿಸುವುದು, ಹೊಸ ಕ್ರೀಡಾಂಗಣ ನಿರ್ಮಾಣ, ನಗರದ ವಿವಿಧೆಡೆ ಡಿಜಿಟಲ್ ಗ್ರಂಥಾಲಯ ನಿರ್ಮಾಣ, ಎಲ್ಲ ಸಂಘ-ಸಂಸ್ಥೆಗಳು ಮತ್ತು ಸಮುದಾಯಗಳಿಗೆ ಆದ್ಯತೆ ಮೇಲೆ ನಿವೇಶನ ಹಂಚಿಕೆ ಅಗತ್ಯ ಇರುವ ಕಡೆಗಳಲ್ಲಿ ವಾಹನ ಪಾರ್ಕಿಂಗ್‌ ವ್ಯವಸ್ಥೆ, ಅರ್ಹರಿಗೆ ಆಶ್ರಯ ನಿವೇಶನ ಹಂಚಿಕೆ, ಅಗತ್ಯ ಇರುವ ಕಡೆಗಳಲ್ಲಿ ಬಸ್‌ ತಂಗುದಾಣ ನಿರ್ಮಾಣ, ಗಣಪತಿ ಕೆರೆ ಕೆಳಭಾಗದಲ್ಲಿ ಕೆಆರ್‌ಎಸ್‌ ಮಾದರಿಯ ಉದ್ಯಾನವನ ನಿರ್ಮಾಣ, ಸುಸಜ್ಜಿತ ಗೋಶಾಲೆ, ಸರ್ಕಾರಿ ಆಸ್ಪತ್ರೆಯ ಸರ್ವತೋಮುಖ ಅಭಿವೃದ್ಧಿಗೆ ಆರೋಗ್ಯ ಸಾಗರ ಯೋಜನೆ, ಮಹಿಳೆಯರಿಗೆ ಸ್ವಯಂ ಉದ್ಯೋಗ ಹೀಗೆ ಅನೇಕ ಯೋಜನೆಗಳನ್ನು ನಗರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೊದಲ ಮೂರೂವರೆ ವರ್ಷದಲ್ಲಿ ಜಾರಿಗೆ ತರಲಾಗುತ್ತದೆ. ಒಂದೊಮ್ಮೆ ನಾವು ನೀಡಿದ ಭರವಸೆ ಈಡೇರಿಸದೆ ಹೋದಲ್ಲಿ ಜನರು ನಮ್ಮನ್ನು ಹಿಡಿದು ಪ್ರಶ್ನಿಸಬಹುದು ಎಂದರು.

ಸ್ಮಶಾನ ಒತ್ತುವರಿ: ನಗರದ ಯಳವರಸಿ ಸರ್ವೇ ನಂ. 14ರಲ್ಲಿ 10 ಎಕರೆ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಿಡಲಾಗಿತ್ತು. 8 ಎಕರೆ ಹಿಂದೂ ರುದ್ರಭೂಮಿ ಹಾಗೂ 2 ಎಕರೆ ಕ್ರಿಶ್ಚಿಯನ್‌ ರುದ್ರಭೂಮಿಗೆ ಜಮೀನು ಮೀಸಲಿಡಲಾಗಿತ್ತು. ನಗರ ಬ್ಲಾಕ್‌ ಕಾಂಗ್ರೆಸ್‌ರ ಮಾವ 8 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ರಬ್ಬರ್‌ ಸೇರಿದಂತೆ ಬೇರೆಬೇರೆ ಬೆಳೆಯನ್ನು ಬೆಳೆಯುತ್ತಿದ್ದಾರೆ. ಈತನಕ ಅಧಿಕಾರಿಗಳು, ನಗರಸಭೆ ಆಡಳಿತ ಇದರ ಬಗ್ಗೆ ಗಮನ ಹರಿಸಿಲ್ಲ. ಇಲ್ಲಿಯವರೆಗೆ ಎಲ್ಲರನ್ನೂ ಖರೀದಿ ಮಾಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದ್ದಾರೆ ಎಂದರು. ಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಸನ್ನ ಕೆರೆಕೈ, ನಗರ ಅಧ್ಯಕ್ಷ ಆರ್‌. ಶ್ರೀನಿವಾಸ್‌, ಜಿಲ್ಲಾ ಕಾರ್ಯದರ್ಶಿ ಟಿ.ಡಿ. ಮೇಘರಾಜ್‌, ನಗರಸಭೆ ಚುನಾವಣೆ ಉಸ್ತುವಾರಿ ಸಂತೋಷ್‌ ಶೇಟ್, ಪ್ರಮುಖರಾದ ಕೆ.ಜಿ. ಸಂತೋಷ್‌, ನಾರಾಯಣ, ಅರುಣ ಸೂರನಗದ್ದೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.