ಶಿರಾಳಕೊಪ್ಪ ಬಸ್‌ ನಿಲ್ದಾಣದಲ್ಲಿ ಹಂದಿ- ನಾಯಿ ಕಾಟ!


Team Udayavani, Jul 23, 2018, 5:42 PM IST

shiv.jpg

ಶಿರಾಳಕೊಪ್ಪ: ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ಸುಂದರವಾದ ಬಸ್‌ ನಿಲ್ದಾಣವನ್ನು ಪ್ರಯಾಣಿಕರಿಗೆಂದು ಕಟ್ಟಿಸಲಾಗುತ್ತದೆ. ಆದರೆ ಇಲ್ಲಿನ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗಿಂತ ಹೆಚ್ಚಾಗಿ ಹಂದಿ, ನಾಯಿ ಮತ್ತು ದನಗಳ ಕಾಟ ಹೆಚ್ಚಾಗಿ ಪ್ರಯಾಣಿಕರಿಗೆ ಮತ್ತು ವ್ಯಾಪಾರಿಗಳಿಗೆ ತೀವ್ರ ತಲೆನೋವಾಗಿ ಪರಿಣಿಮಿಸಿದೆ.

ದಿನದ 24 ಗಂಟೆ ಹಂದಿ- ನಾಯಿಗಳು ಬಸ್‌ ನಿಲ್ದಾಣದಲ್ಲಿ ಇರುತ್ತವೆ. ಆದರೆ ಸಂಜೆಯಾಗುತ್ತಿದ್ದಂತೆ ತಂಡೋಪ ತಂಡವಾಗಿ ಹಂದಿ, ನಾಯಿ,ದನಗಳು ಬಸ್‌ ನಿಲ್ದಾಣದೊಳಗೆ ಆಗಮಿಸಿ ಪ್ರಯಾಣಿಕರಿಗೆ ತೀವ್ರ ಕಿರಿಕಿರಿ ಮಾಡುವುದರ ಜೊತೆಗೆ ಅಂಗಡಿಗಳ ಮೇಲೆ ದಾಳಿ ಮಾಡುತ್ತವೆ.
 
ಬಸ್‌ ನಿಲ್ದಾಣದಲ್ಲಿ ಬಸ್‌ಗಳು ಬಂದು ನಿಂತ ತಕ್ಷಣ ಹಂದಿಗಳು ಬಸ್‌ ಕೆಳಗಡೆ ಮಲಗಿಕೊಂಡು ಬಸ್‌ ಸಂಚಾರಕ್ಕೆ ತೀವ್ರ ಅಡತಡೆ ಉಂಟು ಮಾಡುತ್ತಿವೆ. ಪ್ರಯಾಣಿಕರು ತಮ್ಮ ಬ್ಯಾಗ್‌ಗಳನ್ನು ಇಟು ಸ್ವಲ್ಪ ಮೈಮರೆತರೆ ಬ್ಯಾಗ್‌ಗಳನ್ನೂ ಎಳೆದುಕೊಂಡು ಹೋಗುತ್ತವೆ. ಅಂಗಡಿ ಮಾಲೀಕರು ವ್ಯಾಪಾರ ಬಿಟ್ಟು ಕೋಲು ಹಿಡಿದು ಹಂದಿ, ನಾಯಿ ಮತ್ತು ದನಗಳನ್ನು ಕಾಯುವುದೇ ದೊಡ್ಡ ಕೆಲಸವಾಗಿ ಪರಿಣಮಿಸಿದೆ.
 
ವ್ಯಾಪಾರಿಗಳು ಸ್ವಲ್ಪ ಯಾಮಾರಿದರೂ ಹಂದಿ- ನಾಯಿಗಳು ಒಳನುಗ್ಗುತ್ತವೆ. ದನಗಳು ಬಾಯಿ ಹಾಕಿ ಸಿಕ್ಕಿದ್ದನ್ನು ಎಳೆದು ಹಾಳು ಮಾಡುವುದರ ಜೊತೆಗೆ ಕೆಲವು ಬಾರಿ ಬಾಟಲಿಗಳನ್ನು ಕೆಡವಿ ವ್ಯಾಪಾರಿಗಳಿಗೆ ನಷ್ಟ ಉಂಟು ಮಾಡುತ್ತಿವೆ. ಜೊತೆಗೆ ಅಂಗಡಿಗಳ ಮುಂದೆ ಮಲಮೂತ್ರ ವಿಸರ್ಜನೆ ಮಾಡಿ ದುರ್ವಾಸನೆ ಉಂಟು ಮಾಡಿ ಗ್ರಾಹಕರು ಅಂಗಡಿಗಳಿಗೆ ಬರಲು ಅಸಹ್ಯ ಪಟ್ಟುಕೊಳ್ಳುತ್ತಾರೆ. ಬಸ್‌ ನಿಲ್ದಾಣದಲ್ಲಿ ಕುಳಿತಂತಹ ಪ್ರಯಾಣಿಕರು ಮತ್ತು ನಾಗರಿಕರು ಪಪಂಗೆ ಹಿಡಿಶಾಪ ಹಾಕುತ್ತಾರೆ.
 
ಬಸ್‌ ನಿಲ್ದಾಣದ ಅಂಗಡಿ ಮಾಲಿಕ ನೂರುಲ್ಲಾ ಈ ಕುರಿತು ಮಾತನಾಡಿ, ಬಸ್‌ ನಿಲ್ದಾಣದಲ್ಲಿ ದುಬಾರಿಯಾದ 10 ಸಾವಿರಕ್ಕೂ ಹೆಚ್ಚು ಬಾಡಿಗೆ ಕಟ್ಟುತ್ತಿರುವ ನಾವು ವ್ಯಾಪಾರ ಮಾಡಿ ಬಾಡಿಗೆ ಕಟ್ಟುವುದೇ ಕಷ್ಟವಾಗಿದೆ. ಈ ಮಧ್ಯೆ ನಾಯಿ, ಹಂದಿ, ದನಗಳ ಕಾಟದಿಂದ ನಮ್ಮ ವ್ಯಾಪಾರಕ್ಕೆ ತೀವ್ರವಾಗಿ ಹಿನ್ನಡೆ ಆಗುತ್ತಿದ್ದು ಪಪಂ ಗಮನಕ್ಕೆ ಬಂದರು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು. 

ಇನ್ನೊಬ್ಬ ಅಂಗಡಿ ಮಾಲೀಕ ಶಿವಕುಮಾರ ಮಾತನಾಡಿ, ದಿನ ನಿತ್ಯ ವ್ಯಾಪಾರ ಮಾಡಿ ಆಯಾಸ ಪಡುವ ನಾವು ಹಂದಿ, ನಾಯಿ,ದನಗಳ ಕಾಟದಿಂದ ರೋಸಿ ಹೋಗಿದ್ದೇವೆ. ನಮ್ಮ ಆರೋಗ್ಯದ ಮೇಲೆ ತೀವ್ರ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಗೆಯೇ ಬಸ್‌ ನಿಲ್ದಾಣದಲ್ಲಿ ಹಾಕಿರುವ ಕುಡಿಯುವ ನೀರಿನ ಟ್ಯಾಂಕ್‌ ಸೋರುತ್ತಿದ್ದು ಸುತ್ತಮುತ್ತಲಿನ ಅಂಗಡಿಗಳಿಗೆ ನೀರು ನುಗ್ಗುತ್ತಿದೆ. ಅಂಗಡಿಯಲ್ಲಿ ಕೆಳಗಡೆ ಇಟ್ಟ ಎಲ್ಲಾ ವಸ್ತುಗಳು ಹಾಳಾಗುತ್ತಿವೆ ಎಂದು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. 

ಪ್ರತಿದಿನ ಪ್ರಯಾಣಿಸುವ ಉದ್ಯೋಗಿ ಎಸ್‌. ರಮೇಶ ಮಾತನಾಡಿ, ಬಸ್‌ ನಿಲ್ದಾಣದಲ್ಲಿ ಪಪಂ ಸ್ವತ್ಛತೆ ಬಗ್ಗೆ ಗಮನ ಹರಿಸಬೇಕಿದೆ. ಬಸ್‌ ನಿಲ್ದಾಣದಲ್ಲಿ ಕಸ ಮತ್ತು ಎಲೆ ಅಡಕೆ ಉಗಿಯುವ ತೊಟ್ಟಿಗಳು ಗಬ್ಬೆದ್ದು ನಾರುತ್ತಿವೆ. ಪಪಂ ಕಾರ್ಯವೈಖರಿ ಕುರಿತು ಗಮನ ಹರಿಸಿ ಸ್ವತ್ಛತೆ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆ ಬಗೆಹರಿಸುವಂತಾಗಲಿ ಎಂದಿದ್ದಾರೆ.
 
ಬಸ್‌ ನಿಲ್ದಾಣ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಸುರೇಶ ಸ್ವಾಮಿ ಮಾತನಾಡಿ, ಈ ಸಮಸ್ಯೆಗಳು ಒಂದು ದಿನದ ಮಾತಲ್ಲ. ದಿನ ನಿತ್ಯ ವ್ಯಾಪಾರ ಮಾಡುವ ನಮಗೆ ತೊಂದರೆಯಾಗುತ್ತಿದ್ದು ಪಪಂ ಮುಖ್ಯಾಧಿಕಾರಿ ತಕ್ಷಣ ಗಮನ ಹರಿಸಬೇಕು ಎಂದು ವಿನಂತಿಸಿದ್ದಾರೆ.

„ಸಂತೋಷ ಕುಲಕರ್ಣಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.