ಜೋಗ ಅಭಿವೃದ್ಧಿಗೆ ಯೋಜನೆ: ಡಿಸಿ
Team Udayavani, Sep 29, 2020, 5:42 PM IST
ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ವಿಶ್ವದರ್ಜೆಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ
ಶಿವಕುಮಾರ್ ತಿಳಿಸಿದರು. ತಾಲೂಕಿನ ಜೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಜೋಗ ಜಲಪಾತವನ್ನು ಸರ್ವ ಋತು ಪ್ರವಾಸಿ ತಾಣವಾಗಿ ಆಭಿವೃದ್ಧಿಪಡಿಸಿದರೆ ವರ್ಷಪೂರ್ತಿ ಪ್ರವಾಸಿಗರಿಗೆ ಪ್ರಕೃತಿಯ ನೈಜ ಸೌಂದರ್ಯ ಸವಿಯಲು ಅವಕಾಶವಾಗುತ್ತದೆ. ವಿಶ್ವದೆಲ್ಲೆಡೆಯಿಂದಪ್ರವಾಸ ಪ್ರಿಯರು ಜೋಗದ ವೀಕ್ಷಣೆಗೆ ಬರಲು ಅನುಕೂಲವಾಗುತ್ತದೆ. ಈ ವಿಚಾರವನ್ನು ಪ್ರಧಾನ ಕೇಂದ್ರವಾಗಿರಿಸಿ ನೀಲ ನಕ್ಷೆ ತಯಾರು ಮಾಡಲಾಗುತ್ತಿದೆ. ಸರ್ಕಾರ ಜಲಪಾತ ಪ್ರದೇಶದ ಅಭಿಬೃದ್ಧಿಗೆ ಈಗಾಗಲೇ 120 ಕೋಟಿ ರೂ. ಅನುದಾನವನ್ನು ನೀಡಿದೆ. ಅನುದಾನಗಳನ್ನು ಸಮರ್ಪಕವಾಗಿ ಬಳಸಿ, ಜನೋಪಯೋಗಿ ಕಾರ್ಯಕ್ಕೆ ವಿನಿಯೋಗ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಸ್.ಎಚ್. ರಾಮಕೃಷ್ಣ, ಕೆ.ಆರ್. ಶಿವಕುಮಾರ್, ಲಕ್ಷ್ಮೀನಾರಾಯಣ, ಸದಸ್ಯ ಕೆ.ಸಿ. ಹರೀಶ್ ಗೌಡ, ಜೆಎಂಎ ಮೇಲ್ವಿಚಾರಕ ಸರ್ಜಂಟ್ ನಿಸಾರ್, ಮಯೂರ ವ್ಯವಸ್ಥಾಪಕ ವಿಜಯೇಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ