ಸರ್ಕಾರಿ ಶಾಲಾ ಜಾಗ ಕಬಳಿಸಲು ವ್ಯವಸ್ಥಿತ ಹುನ್ನಾರ?
ಸನ್ಯಾಸಿ ಕೋಡಮಗ್ಗಿ ಗ್ರಾಮದಲ್ಲಿ ಬೆಳಕಿಗೆ ಬಂದ ಘಟನೆ
Team Udayavani, May 2, 2022, 2:28 PM IST
ಹೊಳೆಹೊನ್ನೂರು: ಸರ್ಕಾರಿ ಶಾಲೆಯ ಜಾಗ ಕಬಳಿಸಲು ಗ್ರಾಪಂ ವ್ಯವಸ್ಥಿತ ಹುನ್ನಾರ ನಡೆಸುತ್ತಿರುವ ಘಟನೆ ಭದ್ರಾವತಿ ತಾಲೂಕಿನ ಸನ್ಯಾಸಿ ಕೋಡಮಗ್ಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಸಮೀಪದ ಸನ್ಯಾಸಿ ಕೋಡಮಗ್ಗಿ ಗ್ರಾಮದ ಸರ್ವೇ ನಂ. 58 ರಲ್ಲಿ 6 ಎಕರೆ 12 ಗುಂಟೆ ಜಮೀನು ಗ್ರಾಮದ ಆಂಜನೇಯ ಸ್ವಾಮಿ ಮತ್ತು ತಿರುಮಲ ದೇವರ ಹೆಸರಿಗೆ ಖಾತೆ ಇದೆ. ಈ ಜಾಗವನ್ನು ಸುಮಾರು ನಲವತ್ತು ವರ್ಷಗಳ ಹಿಂದೆ ಅಂದರೆ 1984-85 ರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ 2 ಎಕರೆ 10 ಗುಂಟೆ ಜಾಗವನ್ನು ಮೀಸಲಿಟ್ಟು, ಗ್ರಾಪಂನಲ್ಲಿ ದಾಖಲೆ ಮಾಡಿ ಶಾಲಾ ಕಟ್ಟಡವನ್ನು ನಿರ್ಮಿಸಲಾಯಿತು. ಮುಂದುವರಿದು 1990-91ರಲ್ಲಿ ಪ್ರೌಢಶಾಲೆ ಮಂಜೂರಾಗಿ ಇದೇ 2 ಎಕರೆ 10 ಗುಂಟೆ ಜಾಗದಲ್ಲಿಯೇ ನಿರ್ಮಾಣ ಮಾಡಲಾಯಿತು.
ಪ್ರಸ್ತುತ ಈ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಉರ್ದು ಶಾಲೆಗಳು ನಡೆಯುತ್ತವೆ. ಜೊತೆಗೆ ಬಿಸಿ ಊಟದ ಎರಡು ಕಟ್ಟಡಗಳು ಇವೆ. ಇತ್ತೀಚೆಗೆ ಸಮುದಾಯ ಭವನ ನಿರ್ಮಾಣಕ್ಕೆಂದು 30×40 ವಿಸ್ತಿರ್ಣದ ಜಾಗವನ್ನು ನೀಡಿದ್ದು ಅದೂ ಕೂಡ ನಿರ್ಮಾಣ ಹಂತದಲ್ಲಿದೆ. ಈಗಿರುವಾಗ ಒಟ್ಟು ಜಾಗದ ಅರ್ದಕ್ಕಿಂತಲೂ ಹೆಚ್ಚು ಕಟ್ಟಡಗಳೇ ತುಂಬಿ ಹೋಗಿವೆ. ಸುಮಾರು 450 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದು ಅವರಿಗೆ ಸರಿಯಾದ ಆಟದ ಮೈದಾನ ಲಭ್ಯವಾಗುತ್ತಿಲ್ಲ. ಜೊತೆಗೆ ಇಡೀ ಶಾಲಾ ಕಟ್ಟಡ ತಗ್ಗು ಪ್ರದೇಶದಲ್ಲಿದ್ದು ಮಳೆಗಾಲ ಆರಂಭವಾದರೆ ಮೈದಾನವೆಲ್ಲಾ ನೀರು ನಿಂತು ಹೊಂಡದಂತಾಗುತ್ತದೆ. ಅಲ್ಲದೆ ನೀರು ಹೆಚ್ಚಾಗಿ ಶಾಲಾ ಕೊಠಡಿಯೊಳಗೆ ನುಗ್ಗುತ್ತದೆ. ಇದರಿಂದ ಮಕ್ಕಳಿಗೆ ತುಂಬಾ ತೊಂದರೆಯಾಗುವುದನ್ನು ಕಂಡು ಕಳೆದ ಬಾರಿಯ ಗ್ರಾಪಂ ಆಡಳಿತ ಮಂಡಳಿ ಕೊಠಡಿಗಳ ಮುಂಬಾಗದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡಿದೆ.
ಇಷ್ಟೆಲ್ಲಾ ಸಮಸ್ಯೆಗಳಿರುವ ಒಂದು ಸರ್ಕಾರಿ ಶಾಲೆಯನ್ನು ಉನ್ನತೀಕರಿಸುವ ಜವಾಬ್ದಾರಿ ಹೊಂದಬೇಕಾದ ಗ್ರಾಪಂ ಶಾಲೆಯ ಜಾಗವನ್ನೇ ಕಬಳಿಸಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಸನ್ಯಾಸಿ ಕೊಡಮಗ್ಗಿ ಗ್ರಾಪಂ ಮಾಜಿ ಉಪಾಧ್ಯಕ್ಷ ಸುರೇಶ್ ಬಿ. ಆರೋಪಿಸಿದರು.
ಸರ್ಕಾರಿ ಶಾಲೆಗಳು ಅಳಿವಿನಂಚಿನಲ್ಲಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಜಮೀನನ್ನು ಅತಿಕ್ರಮಿಸುವುದು ಸರಿಯಾದ ಕ್ರಮವಲ್ಲ. ಆದರೂ ಗ್ರಾಮೀಣಭಿವೃದ್ಧಿ ಸಚಿವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಧಿಕಾರಿಗಳು ಮತ್ತು ಉಪವಿಭಾಗಾಧಿ ಕಾರಿಗಳು ಹಾಗೂ ತಹಶೀಲ್ದಾರ್ ಅವರು ಗ್ರಾಪಂ ಕಟ್ಟಡಕ್ಕೆ ನಿವೇಶನ ಮಂಜೂರು ಮಾಡಲು ಆದೇಶಿಸಲು ಮುಂದಾಗುತ್ತಿರುವುದರ ವಿರುದ್ಧ ಈಗಾಗಲೇ ನ್ಯಾಯಾಲಯದ ಮೊರೆ ಹೋಗಲಾಗಿದೆ. ಮುಂದಿನ ದಿನಗಳಲ್ಲಿ ನ್ಯಾಯಾಲಯದಿಂದ ಶಾಲೆಯ ಪರವಾಗಿ ತೀರ್ಪು ಲಭಿಸುವುದು ಎಂಬ ನಂಬಿಕೆ ಇದೆ ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಎಂ.ವಿ. ಕಿರಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ