ಅತ್ಯಾಚಾರ ನಡೆಸಿದ ಯುವಕನ ಮೇಲಿನ ದೂರು ವಾಪಸ್ ಪಡೆಯುವಂತೆ ಧಮ್ಕಿ
ದೂರು ದಾಖಲಾದರೂ ಸಹ ಅತ್ಯಾಚಾರ ಆರೋಪಿ ವಿದೇಶಕ್ಕೆ ಹಾರಿದ್ದಾನೆ !
Team Udayavani, Jun 14, 2022, 11:07 AM IST
Representative Image used
ಹೊಳೆಹೊನ್ನೂರು: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಯುವಕನ ಮೇಲಿನ ದೂರು ವಾಪಸ್ ಪಡೆಯುವಂತೆ ಧಮ್ಕಿ ಹಾಕುತ್ತಿರುವ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅದೇ ಗ್ರಾಮದ ಯುವಕ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿತ್ತು.
ಅತ್ಯಾಚಾರ ನಡೆದ ಬಳಿಕ ಯುವಕ ಈ ವಿಚಾರವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಸಿದ್ದಾನೆ. ಆದರೆ ಅಪ್ರಾಪ್ತೆಯು ತನ್ನ ಅಜ್ಜಿಯ ಬಳಿ ಘಟನೆ ಬಗ್ಗೆ ಹೇಳಿಕೊಂಡಿದ್ದಾಳೆ. ಈ ಕುರಿತು ಆಕೆಯ ಪೋಷಕರು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ನಂತರ ಬಾಲಕಿ ಮಹಿಳಾ ಮತ್ತು ಮಕ್ಕಳ ಘಟಕದಲ್ಲಿ 10 ದಿನಗಳ ಕಾಲ ರಕ್ಷಣೆಯಲ್ಲಿದ್ದಳು. ಬಳಿಕ ಬಾಲಕಿಯನ್ನು ಪೋಷಕರು ತಮ್ಮ ಮನೆಗೆ ಕರೆದುಕೊಂಡು ಬಂದಿದ್ದರು.ಇತ್ತ ದೂರು ದಾಖಲಾಗುತ್ತಿದ್ದಂತೆ ಅತ್ಯಾಚಾರ ಎಸಗಿದ ಆರೋಪಿ ತನ್ನ ತಂದೆಯ ಜೊತೆ ಆಫ್ರಿಕಾದ ಕ್ಯಾಮರೂನ್ಗೆ ಹಾರಿದ್ದಾನೆ. ಈಗ ಅಲ್ಲಿಂದಲೇ ಬಾಲಕಿಗೆ ವಾಟ್ಸ್ ಆ್ಯಪ್ ಕರೆ ಮೂಲಕ ದೂರು ವಾಪಸ್ ಪಡೆಯುವಂತೆ ಧಮ್ಕಿ ಹಾಕುತ್ತಿದ್ದಾನಂತೆ.
ಅದರೆ ದೂರು ದಾಖಲಾದರೂ ಸಹ ಅತ್ಯಾಚಾರ ಆರೋಪಿ ವಿದೇಶಕ್ಕೆ ತೆರಳಿದ್ದು ಹೇಗೆ ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ ಈಗ ಧಮ್ಕಿ ಹಾಕಿದ ಕುರಿತು ಪೊಲೀಸರಿಗೆ ತಿಳಿಸಿದರೆ, ಮತ್ತೆ ದೂರು ನೀಡಿ ಎಂದು ಹೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನೊಂದ ಕುಟುಂಬದವರು ಎಸ್ಪಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ