ಸಂಸದೆ ಸಾಧ್ವಿ ವಿರುದ್ಧ ದೂರು: ಉದ್ಯಮಿಗೆ ನೇರವಾಗಿ ಬಂದು ದೂರು ನೀಡಲು ಪೊಲೀಸರಿಂದ ನೋಟಿಸ್
Team Udayavani, Dec 28, 2022, 8:56 AM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹಿಂಜಾವೇ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಪ್ರಚೋದನಕಾರಿ ರೀತಿ ಮಾತಾನಾಡಿದ್ದ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ವಿರುದ್ಧ ದೂರು ನೀಡಿದ್ದ ದೆಹಲಿಯಲ್ಲಿರುವ ಉದ್ಯಮಿಗೆ ಕೋಟೆ ಪೊಲೀಸರು ನೇರವಾಗಿ ಬಂದು ದೂರು ನೀಡಿ ಎಂದು ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಹಿಂಜಾವೇ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಅವರು ಲವ್ ಜಿಹಾದ್ನ ಬಗ್ಗೆ ಮಾತನಾಡುತ್ತಾ ಮನೆಯಲ್ಲಿರುವ ತರಕಾರಿ ಹೆಚ್ಚುವ ಚಾಕುವನ್ನು ಹೆಚ್ಚು ಚೂಪಾಗಿಟ್ಟಿರಿ ಎಂದು ಹೇಳಿಕೆ ನೀಡಿದ್ದರು. ಇದು ಪ್ರಚೋದನಕಾರಿ ಮಾತು ಎಂದು ಸ್ವಾಧ್ವಿ ವಿರುದ್ಧ ಉದ್ಯಮಿ ತೆಹಸೀನ್ ಪೂನಾವಾಲಾ ಟ್ವೀಟ್ ಮೂಲಕ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆಯಾಗಿ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಸ್ವೀಕರಿಸಿರುವುದರಿಂದ, ಅದನ್ನು ಕಳುಹಿಸುವ ವ್ಯಕ್ತಿಯ ದೃಢೀಕರಣವನ್ನು ಪರಿಶೀಲಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್ನ ಲಲಿತಾ ಕುಮಾರಿ ತೀರ್ಪಿನ ಪ್ರಕಾರ, ಸ್ವೀಕರಿಸಿದ ಮಾಹಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಪ್ರಾಥಮಿಕ ತನಿಖೆ ನಡೆಸಲು ಅಥವಾ ಎಫ್ಐಆರ್ ದಾಖಲಿಸಲು ಸೆಕ್ಷನ್ 154 ರ ಅಡಿಯಲ್ಲಿ ದೂರುದಾರ ನೇರವಾಗಿ ಬಂದು ದೂರು ದಾಖಲಿಸಬೇಕು. ದೂರುದಾರ ತೆಹಸೀನ್ ಪೂನಾವಾಲಾ ಇಂದು ಬೆಳಗ್ಗೆ (ಡಿ.28 ರಂದು) 11 ಗಂಟೆಯ ಒಳಗೆ ಠಾಣೆಗೆ ಬಂದು ದೂರು ದಾಖಲಿಸಿ ಎಂದು ನೋಟಿಸ್ ಕಳುಹಿಸಿದ್ದಾರೆ.
I have filed a complaint against #PragyaThakur ji (MP) for the hate speech that she delivered on 25.12.2022 at Shivamogga with the SP shri G.K Mithun Kumar.
Requesting Shivamogga police to kindly register an FIR u/s 153-A, 153-B,268,295-A,298,504,508 (IPC).@CMOkamoto @BSBommai pic.twitter.com/KxNXpYUHS5— Tehseen Poonawalla Official 🇮🇳 (@tehseenp) December 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ