ಕುಡಿವ ನೀರಿನ ಯೋಜನೆಗೆ ಆದ್ಯತೆ ನೀಡಿ


Team Udayavani, Sep 1, 2017, 2:26 PM IST

01-DVVV-3.jpg

ಶಿವಮೊಗ್ಗ: ಕುಡಿಯುವ ನೀರಿನ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಗುರುವಾರ ನಡೆದ ತಾಲೂಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಕೇಳಿಬಂತು.

ತಾಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸದಸ್ಯ ಗಿರೀಶ್‌ ಮಾತನಾಡಿ, ವಿವಿಧ ಶೀರ್ಷಿಕೆಯಡಿ ಕೊಳವೆ ಬಾವಿ ಕೊರೆಸಲಾಗಿದೆ. ಆದರೆ ಇದುವರೆಗು ವಿದ್ಯುತ್‌ ಸಂಪರ್ಕ ನೀಡಿಲ್ಲ. ಪೈಪ್‌ಲೈನ್‌ ಕಾಮಗಾರಿ ಸರಿಯಾಗಿ ನಡೆಸಿಲ್ಲ ಎಂದು ಆರೋಪಿಸಿದರು. ನೀರು ಸರಬರಾಜು ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೊಮ್ಮನಾಳು ಗ್ರಾಮದಲ್ಲಿ ತರಾತುರಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಗಿದೆ. ಉದ್ಘಾಟಿಸಿದ 3 ದಿನಗಳಲ್ಲಿಯೇ
ಹಾಳಾಗಿದೆ ಎಂದು ದೂರಿದರು.

ಇದಕ್ಕೆ ಉತ್ತರಿಸಿದ ನೀರು ಸರಬರಾಜು ಇಲಾಖೆಯ ಮುಖ್ಯ ಇಂಜಿನಿಯರ್‌ ಹರೀಶ್‌, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಹೀಗಾಗಿ ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಂತಹ ಕಡೆಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿದರೆ ಅದನ್ನು ಸರ್ಕಾರಕ್ಕೆ ಕಳಿಸಿ ಅನುಮೋದನೆ ಪಡೆಯಲಾಗುತ್ತದೆ ಎಂದರು. ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವಾಗ ಹಾಗೂ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವಾಗ ತಮ್ಮ ಗಮನಕ್ಕೂ ತರುತ್ತಿಲ್ಲ. ಇದರಿಂದಾಗಿ ಅರ್ಹರಿಗೆ ಸೌಲಭ್ಯ ಕೊಡಿಸಲು
ಸಾಧ್ಯವಾಗುತ್ತಿಲ್ಲ ಎಂದು ತಾಪಂನ ಕೆಲ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದಿಂದಲೇ ನೇರವಾಗಿ ಫಲಾನುಭವಿಗಳ ಅಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ನಾವೇನು ಜನಪ್ರತಿನಿಧಿಗಳು ಅಲ್ಲವೇ? ಕ್ಷೇತ್ರದ ಜನತೆ ಪ್ರಶ್ನೆ ಮಾಡುತ್ತಾರೆ. ಏನು ಉತ್ತರ ಕೊಡಬೇಕು ? ಎಂದು ಪ್ರಶ್ನಿಸಿದರು. ಕೋಳಿ, ದನ, ಕುರಿ ಸಾಕಣೆ ಮಾಡುವಂತಹ ಫಲಾನುಭವಿಗಳಿಗೂ ಒಂದು ಸೌಲಭ್ಯ ಕೊಡಸಲು ಆಗುತ್ತಿಲ್ಲ. ಎಲ್ಲವನ್ನು ಶಾಸಕರ ನೇತೃತ್ವದ ಸಮಿತಿ, ಸರ್ಕಾರದ ಮಟ್ಟದಲ್ಲಿ ಮಾಡುವುದಾದರೆ ನಮಗೇನು
ಕೆಲಸ. ಇಲ್ಲಿ ಬಿಸ್ಕೆಟ್‌ ತಿಂದು, ಚಹ ಕುಡಿದು ಹೋಗಲು ಬರಬೇಕೆ ? ಫೋನ್‌ ಮಾಡಿದರೆ ಅಧಿಕಾರಿಗಳು ಕೂಡ ದೂರವಾಣಿ ಕರೆ ಸ್ವೀಕರಿಸಿ ಸರಿಯಾದ ಉತ್ತರ ನೀಡುತ್ತಿಲ್ಲ. ಕೆಲವು ಯೋಜನೆಳ ಕುರಿತು ಮಾಹಿತಿ ಇಲ್ಲವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ವೈದ್ಯರಿಲ್ಲ: ಆಯನೂರು ಗ್ರಾಮದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಸೇವೆ ನೀಡುವುದಾಗಿ ಹೇಳಲಾಗಿದೆ. ಆದರೆ ಅಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರೇ ಇರುವುದಿಲ್ಲ. ಶಸ್ತ್ರ ಚಿಕಿತ್ಸಾ ಕೊಠಡಿ ಇದ್ದರೂ ಪ್ರಯೋಜನ ಸಿಗುತ್ತಿಲ್ಲ ಎಂದು ಅಲ್ಲಿನ ಗ್ರಾಪಂ ಅಧ್ಯಕ್ಷರು ಆರೋಪಿಸಿದರು. ಇದಕ್ಕೆ ಉತ್ತರಿಸಿದ ತಾಲೂಕು ವೈದ್ಯಾಧಿಕಾರಿ ಅಲ್ಲಿದ್ದ ವೈದ್ಯರು ವರ್ಗಾವಣೆಯಾಗಿದ್ದಾರೆ. ಹೀಗಾಗಿ ವೈದ್ಯರ ಕೊರತೆ ಇತ್ತು. ಈಗ ಹಾರನಹಳ್ಳಿ ಹಾಗೂ ಚೋರಡಿ ಆಸ್ಪತ್ರೆಯ ವೈದ್ಯರನ್ನು ರಾತ್ರಿ ಪಾಳಿಗೆ ನಿಯೋಜನೆ ಮಾಡಲಾಗಿದೆ ಎಂದು ಉತ್ತರಿಸಿದರು.

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ಕೇಂದ್ರ ಆರಂಭಿಸಲು ಸರ್ಕಾರ ಆಸಕ್ತವಾಗಿದೆ. ಆದರೆ ಅರವಳಿಕೆ ತಜ್ಞರಲಭ್ಯತೆ ಇಲ್ಲ. ತಜ್ಞರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಜಾಹೀರಾತು ನೀಡಲಾಗಿತ್ತಾದರೂ ವೈದ್ಯರು ಬಂದಿಲ್ಲ ಎಂದರು.  ಲೂಕಿನಲ್ಲಿ ಡೆಂಘೀ ಪ್ರಕರಣಗಳು  ಹೆಚ್ಚುತ್ತಿದ್ದು ಸ್ವತ್ಛತೆ ಇಲ್ಲವಾಗಿದೆ. ಫಾಗಿಂಗ್‌ ಕಾರ್ಯ ನಡೆಸುತ್ತಿಲ್ಲ ಎಂಬ ಸದಸ್ಯರ ಆರೋಪಕ್ಕೆ ಉತ್ತರಿಸಿದ ತಾಲೂಕು ವೈದ್ಯಾಧಿಕಾರಿ ಡಾ| ದಿನೇಶ್‌, ಇಲಾಖೆಯಲ್ಲಿ ಒಂದೇ ಒಂದು ಫಾಗಿಂಗ್‌ ಯತ್ರವಿದೆ. ಹೀಗಾಗಿ ಸಣ್ಣ ಸಣ್ಣ ಗ್ರಾಮಗಳಲ್ಲಿ ಫಾಗಿಂಗ್‌ ಮಾಡಲು ಸಾಧ್ಯವಿಲ್ಲ.

ಗ್ರಾಪಂಗಳಲ್ಲಿ ಫಾಗಿಂಗ್‌ ಯಂತ್ರ ಖರೀದಿಸಿದರೆ ಅದಕ್ಕೆ ಬೇಕಾದ ರಾಸಾಯನಿಕ ಪೂರೈಸುವುದಾಗಿ ಹೇಳಿದರು. ಸಭೆಯಲ್ಲಿ ತೋಟಗಾರಿಕೆ, ಹೈನುಗಾರಿಕೆ, ಕೃಷಿ ಮೊದಲಾದ ಇಲಾಖೆಗಳ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಉಪಾಧ್ಯಕ್ಷೆ ನಿರ್ಮಲಾ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಮುನಿರತ್ನ , ಇಒ ಸದಾಶಿವ, ಸಹಾಯಕ ಲೆಕ್ಕಾಧಿಕಾರಿ ಶಿವಾನಂದರಾವ್‌ ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.