ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ
Team Udayavani, Aug 17, 2017, 3:20 PM IST
ಶಿಕಾರಿಪುರ: ರಾಜ್ಯದೆಲ್ಲೆಡೆ ಬರ ತಾಂಡವವಾಡುತ್ತಿರುವುದರಿಂದ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ ನಡೆಸುವ ಮೂಲಕ ಶಾಸಕ ಬಿ.ವೈ. ರಾಘವೇಂದ್ರ ತಮ್ಮ 44 ನೇ ಜನ್ಮದಿನವನ್ನು ಅತ್ಯಂತ ಸರಳವಾಗಿ ಆಚರಿಸಿಕೊಂಡರು.
ಬುಧವಾರ ಬೆಳಗ್ಗೆ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ಸನ್ನಿಧಿಗೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಪರ್ಜನ್ಯ ಹೋಮದ ಸಂಕಲ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತಾಲೂಕಿನಿಂದ ಹಾಗೂ ಬೇರೆ ಜೆಲ್ಲೆಗಳಿಂದ ಶುಭಾಷಯ ಕೋರಲು ಆಗಮಿಸಿದ ತಮ್ಮ
ಅಭಿಮಾನಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಭೀಕರವಾದ ಬರಗಾಲವು ತಾಂಡವವಾಡುತ್ತಿದ್ದು ರೈತರು, ಶ್ರೀಸಾಮಾನ್ಯರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಮಳೆಗಾಗಿ ಪ್ರಾರ್ಥನೆ ಮಾಡಿ ಪರ್ಜನ್ಯ ಹೋಮ ನಡೆಸುತ್ತಿದ್ದೇನೆ. ಅಲ್ಲದೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಪೂಜೆ- ಪುನಸ್ಕಾರಗಳು ನಡೆಯುತ್ತಿವೆ. ದೇವರ ದಯೆಯಿಂದ ನಾಡಿನಲ್ಲಿ ಮಳೆ ಬೆಳೆ ಸಮೃದ್ಧಿಯಾಗಬೇಕು. ಅಲ್ಲದೇ ರೈತರ ಬದುಕು ಹಸನಾಗಬೇಕು ಎಂದರು.
ತಾಲೂಕಿನಲ್ಲಿ ಶಾಶ್ವತ ನೀರಾವರಿ ವ್ಯವಸ್ಥೆಗಾಗಿ ಯೋಜನೆಗಳ ನೀಲನಕ್ಷೆ ಸಿದ್ಧವಾಗಿದ್ದು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಹಾಗೂ ಸಂಬಂಧಿಸಿದ
ಇಲಾಖೆಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದರು ಅರ್ಚಕರಾದ ಉಮೇಶ್ ಭಟ್, ಗಣಪತಿ ಭಟ್, ಪ್ರದೀಪ್ ಕುಲಕರ್ಣಿ, ಪ್ರಸನ್ನ ಭಟ್, ಶಿವಮೊಗ್ಗ ಹರೀಶ್ ಜೊಯ್ಸ ಅವರ ನೇತೃತ್ವದಲ್ಲಿ ಪರ್ಜನ್ಯ ಹೋಮ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಸಹೋದರಿರಾದ ಪದ್ಮಾವತಿ, ಅರುಣಾದೇವಿ, ಉಮಾದೇವಿ, ಸಹೋದರ ಬಿ.ವೈ. ವಿಜೇಂದ್ರ, ಜಿಲ್ಲಾ ಜಾಗೃತಿ ಸಮಿತಿಯ ಕೆ.ಎಸ್. ಗುರುಮೂರ್ತಿ, ಎಂ.ಬಿ. ಚನ್ನವೀರಪ್ಪ, ಪುರಸಭೆ ಅಧ್ಯಕ್ಷೆ ರತ್ನಮ್ಮ, ಮಾಜಿ ಅಧ್ಯಕ್ಷೆ ರೂಪಕಲಾ ಹೆಗಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು