5 ಹೊಸ ನಾಡಕಚೇರಿ ಸ್ಥಾಪನೆಗೆ ಪ್ರಸ್ತಾವನೆ


Team Udayavani, Jul 31, 2017, 11:55 AM IST

31-SHIV-2.jpg

ಸಾಗರ: ರೈತ ವರ್ಗ ದಾಖಲೆ, ಅರ್ಜಿ ಸಲ್ಲಿಕೆಗೆ ಹತ್ತಾರು ಕಿಮೀ ಅಲೆದಾಡುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ತಾಲೂಕಿನ ಐದು ಭಾಗಗಳಲ್ಲಿ ಹೊಸದಾಗಿ ನಾಡಕಚೇರಿಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ನಗರದ ಸಾಮರ್ಥ್ಯಸೌಧದಲ್ಲಿ ಕರೆಯಲಾಗಿದ್ದ ತ್ತೈಮಾಸಿಕ ಅಭಿವೃದ್ಧಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಹೆಗ್ಗೊಡಿನಲ್ಲಿ ನೆಮ್ಮದಿ ಕೇಂದ್ರ ಸ್ಥಾಪನೆಯ ಪ್ರಕ್ರಿಯೆ ನಡೆದಿದೆ. ಈ ತರಹದ ಅರ್ಜಿ ಸ್ವೀಕಾರ ಕೇಂದ್ರಗಳನ್ನು ಗ್ರಾಪಂಗಳು ಅವಕಾಶ ಕೊಟ್ಟರೆ ಆಯಾ ಪಂಚಾಯತ್‌ ಕಟ್ಟಡದಲ್ಲಿಯೇ ನಿರ್ವಹಿಸಬಹುದು. ಈ ನಿಟ್ಟಿನಲ್ಲಿ ಸಮನ್ವಯದಿಂದ ಕೆಲಸ ಮಾಡಿ ಎಂದು ಸೂಚಿಸಿದರು.

ತಾಲೂಕು ಕಚೇರಿಗೆ ಸಲ್ಲಿಕೆಯಾದ 4088 ಬಿಪಿಎಲ್‌ ಅರ್ಜಿ ಸಂಬಂಧ 1,500 ಅರ್ಜಿಗಳು ವಿಲೇ ಮಾಡಿ ಕಂಪ್ಯೂಟರ್‌ ದಾಖಲೀಕರಣ ನಡೆಸಲಾಗಿದೆ. ಮುಂದಿನ 15 ದಿನಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳು ಕೂ ಗಣಕೀಕರಣಗೊಳ್ಳುತ್ತವೆ ಎಂದು ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರ್‌ ತಿಳಿಸಿದರು.

ಕಾಗೋಡು ಗಮನ ಸೆಳೆದ ಜಿಪಂ ಸದಸ್ಯ ರಾಜಶೇಖರ ಗಾಳಿಪುರ, ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತರ ವೇತನ ಆರೂವರೆ ಸಾವಿರ ರೂ. ಗಳಷ್ಟೇ. ಆದರೆ ಅವರ ಮಕ್ಕಳು ಹಿಂದುಳಿದ ವರ್ಗದವರ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆಯಲು ಬೇಕಾಗುವ ಆದಾಯ ಪ್ರಮಾಣ ಪತ್ರ ಪಡೆಯಲು ಈ ಆದಾಯ ತೊಡಕಾಗುತ್ತದೆ. ಆರೂವರೆ ಸಾವಿರ ರೂ. ಸಂಬಳ ಇಂದಿನ ಸಮಾಜದಲ್ಲಿ ಏನೇನೂ ಅಲ್ಲ. ಅವರು ಬಡತನದ ರೇಖೆಗಿಂತ ಕೆಳಗೇ ಬರುತ್ತದೆ. ಆದರೆ ಕಾರ್ಯಕರ್ತೆಯರೆಂಬ ಪಟ್ಟ ಅವರಿಗೆ ಸೌಲಭ್ಯ ಸಿಗದಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಪರಿಹಾರ
ಹುಡುಕಿಕೊಡಬೇಕು ಎಂದು ವಿನಂತಿಸಿದರು.

ಶಿಕ್ಷಕರ ವಿಚಾರ ಪ್ರಸ್ತಾಪಿಸಿದ ತಾಪಂ ಅಧ್ಯಕ್ಷ ಬಿ.ಎಚ್‌. ಮಲ್ಲಿಕಾರ್ಜುನ ಹಕ್ರೆ, ತಾಲೂಕಿನಲ್ಲಿ 20 ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರು ಬಿಟ್ಟಿರುವ ಸಾಕಷ್ಟು ಸಂಖ್ಯೆಯ ಶಿಕ್ಷಕರಿದ್ದಾರೆ. ಹೆಗ್ಗೊàಡು ಹೊನ್ನೇಸರದ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 216 ವಿದ್ಯಾರ್ಥಿಗಳಿದ್ದಾರೆ. 200 ಮಕ್ಕಳಿದ್ದರೆ ದೈಹಿಕ ಶಿಕ್ಷಕರನ್ನು ಕಡ್ಡಾಯವಾಗಿ ಒದಗಿಸಬೇಕು ಎಂಬ ನಿಯಮವಿದೆ. ಅದರ ಸಮರ್ಪಕ ಪಾಲನೆಯಾಗುತ್ತಿಲ್ಲ ಎಂದು ದೂರಿದರು. 

ಜೂನ್‌ ಮತ್ತು ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭವಿಷ್ಯ ಉಜ್ವಲವಾಗಿರುವುದಿಲ್ಲ. ಹೀಗಾದಾಗ ನಮ್ಮ ತಾಲೂಕು ಬರಗಾಲಪೀಡಿತ ಎಂದು ಘೋಷಣೆಯಾಗುವ ಸಾಧ್ಯತೆ ಇದೆ. ಕೃಷಿ ಉತ್ಪನ್ನಗಳನ್ನು ಬಾಡಿಗೆ ಕೊಡುವ ಯೋಜನೆಯ  ಗುತ್ತಿಗೆದಾರರು ತಾಳಗುಪ್ಪ, ಆವಿನಹಳ್ಳಿಯಲ್ಲಿ ಹಿಂದೆ ಸರಿದಿದ್ದಾರೆ. ಎರಡೂ ಕಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಟನೆ ಇದನ್ನು ತೆಎಗೆದುಕೊಂಡಿತ್ತು. ಈ ಬಗ್ಗೆ ಪರ್ಯಾಯಗಳ ಬಗ್ಗೆ ಗಂಭೀರವಾಗಿ ಚಿಂತಿಸಲಾಗುತ್ತದೆ ಎಂದು ಕಾಗೋಡು ತಿಳಿಸಿದರು.

ತೋಟಗಾರಿಕೆ ಇಲಾಖೆ ವಿತರಣೆ ಮಾಡುವ ಕಾಳು ಮೆಣಸಿನ ಗಿಡ ಕಳಪೆಯಾಗಿರುವ ಬಗ್ಗೆ ಮಾತನಾಡಿದ ತಾಪಂ ಉಪಾಧ್ಯಕ್ಷ ಕೆ.ಎಚ್‌. ಪರಶುರಾಮ್‌, ಕಾಳುಮೆಣಸಿನ ಗಿಡ ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ. ಒಂದೂವರೆ ಲಕ್ಷ ಗಿಡಗಳನ್ನು ತಯಾರಿಸಲಾಗಿದೆ ಎಂದು ಹೇಳಲಾಗುತ್ತಿದ್ದರೂ ನರ್ಸರಿಯಲ್ಲಿ 10 ಸಾವಿರ ಗಿಡ ಕೂಡ ಇಲ್ಲ. ಖಾಸಗಿಯವರಲ್ಲಿ 7 ರೂ.ಗೆ ಆರೋಗ್ಯವಂತ ಗಿಡ ಸಿಕ್ಕರೆ, ಒಂದು ಪ್ಯಾಕ್‌ನಲ್ಲಿ ನಾಲ್ಕು ಕಡ್ಡಿಗಳನ್ನು ಹೊಂದಿರುವ ಇಲಾಖಾ ಪ್ಯಾಕ್‌ಗೆ 16 ರೂ. ವೆಚ್ಚ ಕೇಳಲಾಗುತ್ತಿದೆ. ಕೋಟ್ಯಂತರ ರೂಪಾಯಿ ಪಾಲಿ ಹೌಸ್‌ ಮೊದಲಾದ ಸೌಲಭ್ಯ ಕೊಡಲಾಗಿದ್ದರೂ ರೈತರಿಗೆ ಅನುಕೂಲವಾಗಿಲ್ಲ ಎಂದು ದೂರಿದರು.

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ದೊಡ್ಡಮಟ್ಟದ ಗೋಲ್‌ಮಾಲ್‌ ನಡೆಯುತ್ತಿರುವ ಬಗ್ಗೆ ತಾಪಂ ಅಧ್ಯಕ್ಷ ಹಕ್ರೆ, ಸಾಗರ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಪಡವಗೋಡು ಸುಬ್ರಾವ್‌ ಇನ್ನಿತರರು ಎತ್ತಿದ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿದ ಕಾಗೋಡು, ಇದು ಈಗ ನನ್ನ ಗಮನಕ್ಕೆ ಬಂದಿದೆ. ಕಳೆದ ವರ್ಷ ನಮ್ಮ ತಾಲೂಕಿನಲ್ಲಿ 98 ಲಕ್ಷ ರೂ. ರೈತರು ವಿಮೆ ಪಾವತಿ ಮಾಡಿದ್ದು, ಕೇವಲ ನಾಲ್ಕು ಗ್ರಾಪಂಗೆ 63 ಲಕ್ಷ ರೂ. ಪರಿಹಾರ ಬಂದಿದೆ. ವಿಮೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶ, ವಿಮಾ ನಿಯಮಗಳು, ರೈತರಿಗಾದ ವಂಚನೆ ಕುರಿತಾಗಿ ಸಮಗ್ರ ಚರ್ಚೆ ನಡೆಸಿ ನನಗೆ ವರದಿ ಕೊಡಿ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಕಲ್ಲಪ್ಪ ಅವರಿಗೆ ಸೂಚನೆ ನೀಡಿದರು.

ಜಿಪಂ ಸದಸ್ಯರಾದ ಕಾಗೋಡು ಅಣ್ಣಪ್ಪ, ಅನಿತಾ ಕುಮಾರಿ ಇನ್ನಿತರರು ಇದ್ದರು. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.