ಕೊರೊನಾ ಅಪಾಯ ಭತ್ಯೆ ನೀಡಲು ಒತ್ತಾಯ
Team Udayavani, Nov 30, 2021, 5:11 PM IST
ಶಿವಮೊಗ್ಗ: ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯ ಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವೀಧರರು ಮತ್ತು ಇಂಟರ್ನಲ್ಗಳಿಗೆ ಸ್ಪ್ರೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಸಾಂಕ್ರಾಮಿಕ ರೋಗದ ನಿರ್ವಹಣೆ ಸಂದರ್ಭದಲ್ಲಿ ಸ್ಥಾನಿಕ ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಸೋಂಕಿಗೆ ಒಳಗಾಗುವ ಅಪಾಯವಿದ್ದರೂ ಕೆಲಸ ಮಾಡಿದ್ದೇವೆ. ಸ್ನಾತಕೋತ್ತರ ಪದವಿಧರರು ಕನಿಷ್ಠ ಕ್ಲಿನಿಕಲ್ ಮತ್ತು ಇತರೆ ಕೌಶಲ್ಯ ಕಲಿಯದೇ ಅರ್ಧದಷ್ಟು ಕೋರ್ಸ್ ಅವಧಿಯನ್ನು ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಎಲ್ಲ ಸ್ಥಾನಿಕ ವೈದ್ಯರಿಗೆ ತಿಂಗಳಿಗೆ 10 ಸಾವಿರ ರೂ. ಕೋವಿಡ್ ಭತ್ಯೆ ಘೋಷಿಸಿದೆ. ಘೋಷಣೆಯಾಗಿ 6 ತಿಂಗಳು ಕಳೆದರೂ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಇಂದಿಗೂ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಬಗೆಗಿನ ನಿರ್ಲಕ್ಷÂಕ್ಕೆ ಇದು ಸಾಕ್ಷಿ ಎಮದು ಪ್ರತಿಭಟನಾಕಾರರು ದೂರಿದರು.
ಸ್ಥಾನಿಕ ವೈದ್ಯರ ಶೈಕ್ಷಣಿಕ ಶುಲ್ಕವನ್ನು 30 ಸಾವಿರದಿಂದ 1.2 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಇದು ಸುಮಾರು ಶೇ.400 ರಷ್ಟು ಹೆಚ್ಚಳವಾಗಿದೆ. ಯಾವುದೇ ರಿಯಾಯಿತಿ ಇಲ್ಲದೇ ಸಂಪೂರ್ಣ ಮೊತ್ತ ಪಾವತಿಸಬೇಕಿರುವುದರಿಂದ ತೊಂದರೆಯಾಗಿದೆ ಎಂದು ದೂರಿದರು.
ಈ ಹಿಂದೆ ಪ್ರತಿಭಟನೆ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಭರವಸೆಯ ಮೇರೆಗೆ ಮುಷ್ಕರ ಕೈಬಿಡಲಾಗಿತ್ತು. ಆದರೆ, ಇದುವರೆಗೂ ಭರವಸೆ ಈಡೇರಿಸಿಲ್ಲ. ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ ಕೋವಿಡ್ ಅಪಾಯಭತ್ಯೆ ಪ್ಯಾಕೇಜ್ ನಿಂದ ಸ್ಥಾನಿಕ ವೈದ್ಯರನ್ನು ಹೊರಗಿಡಲಾಗಿದೆ ಎಂದು ಆರೋಪಿಸಿದರು.
ಕೂಡಲೇ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸ್ಥಾನಿಕ ವೈದ್ಯರ ಸಂಘದ ಅಧ್ಯಕ್ಷ ಡಾ| ನವೀನ್ ಪ್ರಸಾದ್, ಪ್ರಮುಖರಾದ ಡಾ| ನಮ್ರತಾ, ಡಾ| ಅವಿನಾಶ್, ಡಾ| ರಾಹುಲ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು