ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಅಮರಣಾಂತರ ಉಪವಾಸ ಸತ್ಯಾಗ್ರಹ ಎಚ್ಚರಿಕೆ: ಯತಿರಾಜ್
Team Udayavani, Oct 25, 2021, 6:05 PM IST
ತೀರ್ಥಹಳ್ಳಿ : ಪಟ್ಟಣದಲ್ಲಿ ಅಕ್ರಮ ಮರಳುಗಾರಿಗೆ ಹೆಚ್ಚಾಗಿದೆ ಎಂದು ಆರೋಪಿಸಿ ಪಟ್ಟಣ ಪಂಚಾಯಿತಿ ಸದಸ್ಯ ಯತಿರಾಜ್ (ನವೀನ) ಎಂಬುವರು ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣಕ್ಕೆ ಹೊಂದಿಕೊಂಡಿರುವ ಬೆಟ್ಟಮಕ್ಕಿ ಹೊದಲ ರಸ್ತೆಯಲ್ಲಿ ಕಿತ್ತಿನ ಗದ್ದೆ ,ನಂದ್ರೋಳ್ಳಿ,ಶಿರುಪತಿ ಸಂಕದಹೊಳೆ ಮುಂತಾದ ಭಾಗಗಳಲ್ಲಿ ನಾಡ್ತಿ ಸೇತುವೆ ಮತ್ತು ಸಂಕದಹೊಳೆ ಸೇತುವೆ ಪಕ್ಕಾ ನಡೆಯುವ ಭಾರಿ ಪ್ರಮಾಣದ ಅಕ್ರಮ ಮರಳು ಮಾಫಿಯಾವನ್ನು ತಡೆಗಟ್ಟಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಈ ನಡೆಸಿದ್ದಾರೆ.
ಸೋಮವಾರ ತಹಶೀಲ್ದಾರ್ ಕಚೇರಿ ಎದುರು ಪಟ್ಟಣ ಪಂಚಾಯಿತಿ.ಸದಸ್ಯ ಯತಿರಾಜ್ ( ನವೀನ್) ಮತ್ತು ಅವರೊಂದಿಗೆ ಅನೇಕ ಯುವಕರು ಸೇರಿಕೊಂಡು ಪ್ರತಿಭಟನೆ ನಡೆಸಿದ್ದು. ಹಗಲು ಹೊತ್ತೇ ರಾಜಾರೋಷವಾಗಿ ನಾಡ್ತಿ ಹಳ್ಳ ಮತ್ತು ಕುಶಾವತಿ ನದಿದಡದಲ್ಲಿ ಸಂಗ್ರಹವಾಗಿರುವ ಮರಳನ್ನು ಜೆಸಿಬಿ ಯಂತ್ರಗಳನ್ನು ಬಳಸಿ ಅಕ್ರಮವಾಗಿ ಮರಳನ್ನು ತೆಗೆದು ಶಿವಮೊಗ್ಗಕ್ಕೆ ಲಾರಿಗಳಲ್ಲಿ ತುಂಬಿ ರಾಜರೊಷವಾಗಿ ಕಳುಹಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಇದರ ಸಂಪೂರ್ಣ ಮಾಹಿತಿಯೊಂದಿಗೆ ಮನವಿಯನ್ನು ತೀರ್ಥಹಳ್ಳಿ ತಾಲ್ಲೂಕು ತಹಶೀಲ್ದಾರ್ ಮತ್ತು ದಂಡಾಧಿಕಾರಿಗಳಾದ ಡಾಕ್ಟರ್ ಶ್ರೀಪಾದ ರವರಿಗೆ ನೀಡಲಾಗಿದೆ .ಇಂದಿನಿಂದ ತಕ್ಷಣ ಈ ಮರಳು
ಮಾಫಿಯಾವನ್ನು ನಿಲ್ಲಿಸದೇ ಇದ್ದರೆ ಮುಂದಿನ ಸೋಮವಾರ ಪುನಃ ತಾಲ್ಲೂಕು ಕಚೇರಿಯ ಎದುರು ಆವರಣದಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುವುದಾಗಿ ಪಟ್ಟಣ ಪಂಚಾಯಿತಿ ಸದಸ್ಯ ಯತಿರಾಜ್( ನವೀನ್) ಎಚ್ಚರಿಸಿದ್ದಾರೆ.
ಬಿಜೆಪಿ ಯುವ ಮುಖಂಡ ಹೋರಾಟಗಾರ ಆರಗ ಜ್ಞಾನೇಂದ್ರರ ಬಲಗೈ ಬಂಟ ಪಟ್ಟಣ ಪಂಚಾಯ್ತಿ ನೂತನ ಸದಸ್ಯ ಯತಿರಾಜ್ ರವರು ಆಡಳಿತ ಪಕ್ಷದವರಾಗಿ ಆಡಳಿತ ಪಕ್ಷದ ವಿರುದ್ಧ ಪ್ರತಿಭಟನೆಸತ್ಯಾಗ್ರಹ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಕುತೂಹಲ ಹುಟ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್