‘ಮದ್ಯದಂಗಡಿ ಮುಚ್ಚದಿದ್ದರೆ ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ’: ಗ್ರಾಮಸ್ಥರ ಅಭಿಯಾನ
Team Udayavani, Sep 14, 2021, 11:28 AM IST
ಶಿವಮೊಗ್ಗ: ಗ್ರಾಮದಲ್ಲಿನ ಮದ್ಯದಂಗಡಿಯನ್ನು ಮುಚ್ಚದ ಹೊರತು ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮಸ್ಥರು ಅಭಿಯಾನ ಆರಂಭಿಸಿದ್ದಾರೆ.
ಗ್ರಾಮದಲ್ಲಿನ ಮದ್ಯದ ಮಳಿಗೆಯ ವಿರುದ್ಧ ಈ ಹಿಂದೆಯೂ ಪ್ರತಿಭಟನೆ ನಡೆಸಿದ್ದ ಪಡವಗೋಡು ಗ್ರಾಮ ಪಂಚಾಯತಿಯ ಬೆಳ್ಳಿಕೊಪ್ಪ ಗ್ರಾಮಸ್ಥರು ಇದೀಗ ಮತ್ತೊಂದು ಅಭಿಯಾನ ಆರಂಭಿಸಿದ್ದಾರೆ.
ಇದನ್ನೂ ಓದಿ:ಕನ್ನಡ ನಮ್ಮ ಪಾಲಿನ ಮಾತೃ ಸ್ವರೂಪಿಣಿ : ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಕಿಡಿ
ಮದ್ಯ ಮಳಿಗೆ ಬಂದ್ ಮಾಡದ ಹೊರತು ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರ ಹೋರಾಟ ನಡೆಸುತ್ತಿದ್ದಾರೆ.
ಕಳೆದ ಡಿಸೆಂಬರ್ ನಲ್ಲಿ ಮದ್ಯದಂಗಡಿ ವಿರೋಧಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದರು. ಈ ವೇಳೆ ಅಧಿಕಾರಿಗಳು ಮದ್ಯದಂಗಡಿ ಬಂದ್ ಮಾಡಿ, ಮತದಾನ ಮಾಡುವಂತೆ ಮನವೊಲಿಸಿದ್ದರು. ಇದೀಗ ಮತ್ತೇ ಗ್ರಾಮದಲ್ಲಿ ಎಂಎಸ್ಐಎಲ್ ಮಳಿಗೆ ಆರಂಭಿಸಿರುವ ಹಿನ್ನೆಲೆಯಲ್ಲಿ ಬೆಳ್ಳಿಕೊಪ್ಪ ಗ್ರಾಮಸ್ಥರು ಹೊಸ ರೀತಿಯ ಹೋರಾಟ ಆರಂಭಿಸಿದ್ದಾರೆ. ಮದ್ಯದಂಗಡಿ ಬಂದ್ ಮಾಡದ ಹೊರತು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್