ಕ್ವಾರಂಟೈನ್ ವಿರೋಧಿಸಿ ಪ್ರತಿಭಟನೆ
Team Udayavani, May 21, 2020, 6:20 AM IST
ಶಿವಮೊಗ್ಗ: ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬಂದವರನ್ನು ತಮ್ಮ ಏರಿಯಾದ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದರು. ಅಲ್ಲದೆ ಹಾಸ್ಟೆಲ್ ಒಳಗಿದ್ದ ಚೇರ್, ಟೇಬಲ್, ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸ ಮಾಡಿದ್ದಾರೆ.
ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿ ಘಟನೆ ನಡೆದಿದೆ. ಇಲ್ಲಿನ ಸರ್ಕಾರಿ ಹಾಸ್ಟೆಲ್ನಲ್ಲಿ ಜಿಲ್ಲಾಡಳಿತ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿದೆ. ಇವತ್ತು ಕೆಲವರನ್ನು ಕ್ವಾರಂಟೈನ್ ಮಾಡಲು ಬಸ್ಸಿನಲ್ಲಿ ಕರೆತರಲಾಗಿತ್ತು. ಈ ವೇಳೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಹಾಸ್ಟೆಲ್ ಒಳನುಗ್ಗಿದ ಸ್ಥಳೀಯರು ದಾಂಧಲೆ ನಡೆಸಿದರು. ಯಾವುದೇ ಕಾರಣಕ್ಕೂ ಕ್ವಾರಂಟೈನ್ಗೆ ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಹಾಸ್ಟೆಲ್ ಒಳಗಿನ ಚೇರು, ಟೇಬಲ್, ಸಿಸಿ ಕ್ಯಾಮೆರಾ, ಗಿಡಗಳ ಪಾಟ್ಗಳನ್ನು ಒಡೆದು ಹಾಕಿದ್ದಾರೆ. ಕೆಲವರು ಹಾಸ್ಟೆಲ್ನತ್ತ ಕಲ್ಲು ತೂರಿದ್ದಾರೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೊನೆಗೆ ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಿದರು.
ಹಾಸ್ಟೆಲ್ ಒಳಗಿನಿಂದ ಸ್ಥಳೀಯರನ್ನು ಹೊರಗೆ ಕಳುಹಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಹೆಚ್ಚುವರಿಯಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಮೇಯರ್ ಸುರೇಖಾ ಮುರಳೀಧರ್ ಅವರು ಸ್ಥಳೀಯರ ಜೊತೆ ಧ್ವನಿಗೂಡಿಸಿದರು. ಇದರಿಂದ ಪರಿಸ್ಥಿತಿ ಬಿಗಡಾಯಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್