ತಾಪಂ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ
ತಮಟೆ ಬಡಿದು ಅಡುಗೆ ಮಾಡಿ ಊಟ ಬಡಿಸಿ ಆಕ್ರೋಶ
Team Udayavani, Apr 7, 2022, 2:55 PM IST
ಸಾಗರ: ತ್ಯಾಗರ್ತಿ ಗ್ರಾಪಂ ಅಭಿವೃದ್ಧಿ ಅಧಿಕಾರಿಯನ್ನು ಬೇರೆ ಕಡೆ ವರ್ಗಾಯಿಸುತ್ತೇವೆ ಎಂದು ಭರವಸೆ ನೀಡಿ, ಮಾತು ತಪ್ಪಿದ ತಾಪಂ ಅಧಿಕಾರಿಗಳ ಕ್ರಮ ಖಂಡಿಸಿ ಬುಧವಾರ ರೈತಸಂಘದ ಡಾ| ಎಚ್.ಗಣಪತಿಯಪ್ಪ ಬಣದ ವತಿಯಿಂದ ತಾಲೂಕು ಕಚೇರಿ ಎದುರು ತಮಟೆ ಬಡಿದು, ಅಡುಗೆ ಮಾಡಿ ಊಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತಸಂಘದ ತಾಲೂಕು ಅಧ್ಯಕ್ಷ ದಿನೇಶ್ ಶಿರವಾಳ, ತ್ಯಾಗರ್ತಿ ಗ್ರಾಪಂ ಪಿಡಿಒ ಅವರ ಸ್ವಜನ ಪಕ್ಷಪಾತ, ಸಾಕ್ಷಿನಾಶ, ಹಲ್ಲೆ ಇನ್ನಿತರ ಕೃತ್ಯ ಖಂಡಿಸಿ ದಾಖಲೆ ಸಹಿತವಾಗಿ ಕಳೆದ ಮಾ. 24ರಂದು ತಾಪಂ ಎದುರು ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಜಿಪಂ ಸಿಇಒ, ತಾಪಂ ಇಒ ಪುಷ್ಪಾ ಎಂ. ಕಮ್ಮಾರ್ ಏ. 1ರಂದು ಪಿಡಿಒ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡುವ ಭರವಸೆ ನೀಡಿದ್ದರು. ಭರವಸೆ ಹಿನ್ನೆಲೆಯಲ್ಲಿ ರೈತಸಂಘ ಅಹೋರಾತ್ರಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿತ್ತು. ಆದರೆ ಈತನಕ ಪಿಡಿಒ ಅವರನ್ನು ವರ್ಗಾವಣೆ ಮಾಡುವತ್ತ ಅಧಿಕಾರಿಗಳು ಗಮನ ಹರಿಸದೆ ವಚನಭ್ರಷ್ಟರಾಗಿದ್ದಾರೆ. ರೈತಸಂಘ ಮತ್ತು ಸಾರ್ವಜನಿಕರನ್ನು ಅಧಿಕಾರಿಗಳು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ತಾಪಂ ಇಒ ಪ್ರತಿ ಪಿಡಿಒನಿಂದ ಪ್ರತಿ ತಿಂಗಳು 15 ಸಾವಿರ ರೂ. ಮಾಮೂಲಿ ಪಡೆಯುತ್ತಿದ್ದಾರೆ. ತ್ಯಾಗರ್ತಿ ವ್ಯಾಪ್ತಿಯಲ್ಲಿ ಬೃಹತ್ ಲೇಔಟ್ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಅಧಿಕಾರಿಗಳಿಗೆ ಪಿಡಿಒ ಅವರನ್ನು ವರ್ಗಾವಣೆ ಮಾಡಲು ಮನಸ್ಸಿದ್ದಂತೆ ಕಾಣುತ್ತಿಲ್ಲ. ತಾಲೂಕಿನ ಅಧಿಕಾರಿಗಳ ಭ್ರಷ್ಟಾಚಾರ ಮಿತಿಮೀರಿದೆ. ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಸಹ ಕಮಿಷನ್ ಪಡೆಯುತ್ತಾರೆ ಎನ್ನುವ ದೂರುಗಳಿವೆ. ಶಾಸಕರು ಅಧಿಕಾರಿಗಳನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ವಿಫಲವಾಗಿದ್ದು, ವಿಪಕ್ಷ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ರೈತರ ಸಮಸ್ಯೆ ಸಂಬಂಧ ಪ್ರತಿಭಟನೆ ಮಾಡುತ್ತಿಲ್ಲ. ರೈತಸಂಘ ಪಿಡಿಒ ಅವರನ್ನು ವರ್ಗಾವಣೆ ಮಾಡುವ ತನಕ ತನ್ನ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಹೊಯ್ಸಳ ಗಣಪತಿಯಪ್ಪ, ದೇವರಾಜ್, ರವಿ ಬೆಳಂದೂರು, ಭದ್ರೇಶ್ ಬಾಳಗೋಡು, ನಿತ್ಯಾನಂದ, ಕನ್ನಪ್ಪ, ಚಂದ್ರು, ಮಹೇಂದ್ರ, ಕಿರಣ್, ಟಿ.ವಿ. ಮಲ್ಲೇಶಪ್ಪ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು