ಕರ್ತವ್ಯನಿರತ ತಹಶೀಲ್ದಾರ್ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ
Team Udayavani, Jan 31, 2022, 1:26 PM IST
ಸೊರಬ: ಕರ್ತವ್ಯ ನಿರತ ಹುಮನಾಬಾದ ತಾಲೂಕಿನ ತಹಶೀಲ್ದಾರ್ ಡಾ. ಪ್ರದೀಪ ಕುಮಾರ ಹಿರೇಮಠ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರು ಒತ್ತಡಗಳ ನಡುವೆ ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸುವಂತೆ ಆಗಿದೆ. ಇಂತಹ ಘಟನೆಯಿಂದ ನೌಕರರ ಮನೋಬಲ ಕುಗ್ಗಿ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತದೆ. ನೌಕರರ ಮುಕ್ತವಾಗಿ ಸೇವೆ ಸಲ್ಲಿಸಲು ಉತ್ತಮ ವಾತಾವರಣ ನಿರ್ಮಿಸಬೇಕು ಇಂತಹ ಘಟನೆ ಮರು ಕಳುಹಿಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರ ಅಗತ್ಯ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಗುಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದರು.
ನೌಕರರ ಸಂಘದ ಕಾರ್ಯದರ್ಶಿ ಸಿ.ಪಿ. ಸದಾನಂದ, ರಾಜ್ಯ ಪರಿಷತ್ ಸದಸ್ಯ ಸರ್ವಜ್ಞ ಮೂರ್ತಿ, ಟಿಎಚ್ಒ ಡಾ. ವಿನಯ ಪಾಟೀಲ್, ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಎಸ್. ವಿಜಯಕುಮಾರ್, ಶಿರಸ್ತೆದಾರ್ ನಿರ್ಮಲಾ, ಸಿ.ಎಚ್. ವಿಶ್ವನಾಥ್, ಆರ್. ನಟೇಶ್, ಪಿ. ಸಂತೋಷ್ ಕುಮಾರ್, ಎಸ್.ಸಿ. ಶಿವಕುಮಾರ್, ಪ್ರಶಾಂತ್ ಕುಮಾರ್, ಬಿ.ಜೆ. ವಿನೋದ್, ಸೇರಿದಂತೆ ವಿವಿಧ ಇಲಾಖೆಯ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ