ನ್ಯಾಯವಾದಿ ಸಂಜೀವ ಪುನಾಳೆಕರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

•ಸಿಬಿಐ ಅನೇಕ ಅಮಾಯಕ ಹಿಂದೂಗಳನ್ನು ಶಂಕಿತರೆಂದು ಬಂಧಿಸಿರುವ ಕ್ರಮ ಅವೈಜ್ಞಾನಿಕ

Team Udayavani, May 28, 2019, 12:29 PM IST

sm-tdy-2..

ಸಾಗರ: ಹಿಂದೂ ಜನಜಾಗೃತಿ ಸಮಿತಿ ಪ್ರಖರ ಹಿಂದೂವಾದಿ ಸಂಜೀವ ಪುನಾಳೆಕರ ಅವರ ಬಂಧನ ಖಂಡಿಸಿ ಎಸಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಸಾಗರ: ರಾಷ್ಟ್ರಪ್ರೇಮಿ ಹಾಗೂ ಪ್ರಖರ ಹಿಂದೂವಾದಿ ಸಂಜೀವ ಪುನಾಳೆಕರ ಅವರ ಬಂಧನ ಖಂಡಿಸಿ ಕೂಡಲೇ ಪುನಾಳೆಕರ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನಗರದ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸೋಮವಾರ ಉಪವಿಭಾಗಾಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮುಂಬೈನ ರಾಷ್ಟ್ರಪ್ರೇಮಿ, ಪ್ರಖರ ಹಿಂದುತ್ವನಿಷ್ಟ ಹಾಗೂ ಹಿಂದೂ ವಿಜ್ಞ ಪರಿಷತ್ತಿನ ರಾಷ್ಟ್ರೀಯ ಕಾರ್ಯದರ್ಶಿ ಪುನಾಳೆಕರ ಹಾಗೂ ಮಾಹಿತಿಹಕ್ಕು ಕಾರ್ಯಕರ್ತ ವಿಕ್ರಮ ಭಾವೆ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆ ಮೇ 25ರಂದು ದಾಬೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಬಂಧಿಸಿದೆ. ಡಾ| ನರೇಂದ್ರ ದಾಬೋಲ್ಕರ್‌ ಇವರ ಹತ್ಯೆಯ ತನಿಖೆಯು ಕೇಂದ್ರೀಯ ತನಿಖಾ ತಂಡವು ನಡೆಸುತ್ತಿದೆ.

ಈ ಪ್ರಕರಣದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಿಬಿಐ ಅನೇಕ ಅಮಾಯಕ ಹಿಂದೂಗಳನ್ನು ಶಂಕಿತರೆಂದು ಬಂಧಿಸಿರುವ ಕ್ರಮ ಅವೈಜ್ಞಾನಿಕವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಕರಣದಲ್ಲಿ ನ್ಯಾಯವಾದಿ ಪುನಾಳೆಕರ ಇವರನ್ನು 10 ತಿಂಗಳ ಹಿಂದಿನ ಓರ್ವ ಶಂಕಿತ ಆರೋಪಿ ನೀಡಿದ ಹೇಳಿಕೆಯ ಮೇಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಬಿಐನ ಈ ಕ್ರಮ ಅತ್ಯಂತ ತಪ್ಪು ನಿರ್ಧಾರ. ಈ ಎಲ್ಲ ಪ್ರಕರಣಗಳಲ್ಲಿ ಸಿಬಿಐ ನಡೆ ಸಂದೇಹಾಸ್ಪದ ಹಾಗೂ ಹಿಂದುತ್ವವಾದಿಗಳ ಮೇಲೆ ಒತ್ತಡ ತರುವ ಪ್ರಯತ್ನವಾಗಿದೆ. ಹಿಂದುತ್ವವಾದಿ ಎಂದು ಹೇಳಿಕೊಳ್ಳುವ ಸರ್ಕಾರ ಅಧಿಕಾರದಲ್ಲಿರುವಾಗಲೇ ಇಂತಹ ಘಟನೆಗಳು ನಡೆಯುತ್ತಿರುವುದು ಹಿಂದೂಗಳಿಗೆ ಆಘಾತವನ್ನು ತಂದೊಡ್ಡಿದೆ ಎಂದು ತಿಳಿಸಲಾಗಿದೆ.

ಡಾ| ದಾಬೋಲಕರ, ಡಾ| ಗೋವಿಂದ ಪಾನಸಾರೆ, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಗಳ ತನಿಖೆ ನಡೆಸುವ ಸಿಬಿಐ ಅಧಿಕಾರಿ ನಂದಕುಮಾರ ನಾಯರ್‌ ಅವರ ಕುಕೃತ್ಯಗಳ ಬಗ್ಗೆ ಕೇರಳ ಉಚ್ಛನ್ಯಾಯಾಲಯವು ಈ ಅಕಾರಿ ಸಿಬಿಐಗೆ ಕಳಂಕವಾಗಿದ್ದಾರೆ ಎಂದು ಮಾತುಗಳಲ್ಲಿ ಚಾಟಿ ಬೀಸಿತ್ತು ಎಂಬುದನ್ನು ನ್ಯಾಯವಾದಿ ಪುನಾಳೆಕರ ಬಯಲಿಗೆ ಎಳೆದು ಇಂತಹ ಕಳಂಕಿತ ಅಧಿಕಾರಿಗಳು ಹಿಂದುತ್ವವಾದಿಗಳನ್ನು ಯಾವ ರೀತಿ ಸಿಲುಕಿಸುತ್ತಿದ್ದಾರೆ ಎಂಬ ಸಂಚನ್ನು ಬಯಲಿಗೆ ಎಳೆದಿತ್ತು ಎಂದು ಮನವಿಯಲ್ಲಿ ಹೇಳಲಾಗಿದೆ.

ವಿಕ್ರಮ ಭಾವೆಯವರು ಮಾಲೇಗಾಂವ್‌ ಸೋಟದ ಹಿಂದಿರುವ ಅದೃಶ್ಯ ಕೈ ಎಂಬ ಪುಸ್ತಕ ಬರೆದು ಮಾಲೇಗಾಂವ್‌ ಸೋಟದ ನಿಜವಾದ ಸ್ವರೂಪವನ್ನು ಬಯಲಿಗೆ ಎಳೆದಿದ್ದರು. ಅನೇಕ ಸ್ಥಳೀಯ ಸಹಕಾರ ಸಂಸ್ಥೆಗಳಲ್ಲಿ ಭ್ರಷ್ಟಾಚಾರಗಳನ್ನು ಮಾಹಿತಿ ಹಕ್ಕು ಅಧಿಕಾರದ ಮೂಲಕ ಬಯಲಿಗೆ ಎಳೆದಿದ್ದರು. ಇದೆಲ್ಲವನ್ನೂ ಸಹಿಸಿಕೊಳ್ಳಲು ಆಗದೆ ಪುನಾಳೆಕರ ಮತ್ತು ವಿಕ್ರಮ ಭಾವೆ ಅವರ ಧ್ವನಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ತಕ್ಷಣ ಇಬ್ಬರನ್ನೂ ಬಿಡುಗಡೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಮಿತಿಯ ಶಾಂತಾ, ಆಶಾ, ಶೈಲಾ, ಪ್ರಮುಖರಾದ ಸುದರ್ಶನ್‌ ಕೆ.ಎಚ್., ಕೆ.ವಿ. ಪ್ರವೀಣಕುಮಾರ್‌, ರಾಜು ಬಿ. ಮಡಿವಾಳ, ಶ್ರೀಧರ ಸಾಗರ, ಕುಮಾರ್‌, ರಾಜು ಇತರರು ಉಪಸ್ಥಿತರಿದ್ದರು.

ಹಿಂದುತ್ವ ನಿಷ್ಟ ನ್ಯಾಯವಾದಿ ಸಂಜೀವ ಪುನಾಳೆಕರ ಅವರ ಬಂಧನ ಖಂಡಿಸಿ, ಅವರ ಬಿಡುಗಡೆಗೆ ಒತ್ತಾಯಿಸಿ ಸೋಮವಾರ ಹಿಂದು ಜನ ಜಾಗೃತಿ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಜೀವ ಪುನಾಳೇಕರ ಅವರು ಹಿಂದು ವಿಜ್ಞ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿ ಆಗಿದ್ದವರು, ರಾಷ್ಟ್ರಪ್ರೇಮಿಯೂ ಹೌದು. ಇವರ ಜೊತೆಗೆ ಮಾಹಿತಿ ಹಕ್ಕು ಕಾರ್ಯಕರ್ತ ವಿಕ್ರಮ ಬಾವೆ ಇವರನ್ನು ಕೇಂದ್ರೀಯ ತನಿಖಾ ತಂಡ (ಸಿಬಿಐ) ದಾಬೋಲರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 25 ರಂದು ಬಂಧಿಸಿದೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಮೂರು ವರ್ಷಗಳಲ್ಲಿ ಸಿಬಿಐ ಅನೇಕ ಅಮಾಯಕ ಹಿಂದುಗಳನ್ನು ಶಂಕಿತರೆಂದು ಬಂಧಿಸುತ್ತಿದೆ. ಹಿಂದುತ್ವವಾದಿ ಎಂದು ಹೇಳಿಕೊಳ್ಳುವ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಈ ರೀತಿ ನಡೆಯುತ್ತಿರುವುದು ಹಿಂದುಗಳಿಗೆ ಅಘಾತವಾಗಿದೆ. ಕೂಡಲೇ ಇವರನ್ನು ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಜಯರೇವಣಕರ್‌, ವೆಂಕಟೇಶ್‌, ಪವನ್‌, ಅಶ್ವಿ‌ನಿ, ಸೌಮ್ಯಾ, ಮುಕುಂದ್‌, ಬಾಲಸುಬ್ರಮಣ್ಯ, ಶಿವು ಇತರರಿದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.