ಐಟಿಐಗೆ ಆನ್ಲೈನ್ ಪರೀಕ್ಷೆ ಬೇಡ
Team Udayavani, Jan 3, 2020, 3:33 PM IST
ಶಿವಮೊಗ್ಗ: ಐಟಿಐ ವಿದ್ಯಾರ್ಥಿಗಳಿಗೆ ಏಕಾಏಕಿ ಆನ್ಲೈನ್ ಪರೀಕ್ಷೆ ನಡೆಸುತ್ತಿರುವುದನ್ನು ರದ್ದುಪಡಿಸುವಂತೆ ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ಯಾವುದೇ ಪೂರ್ವಭಾವಿ ತಯಾರಿ ಇಲ್ಲದೇ ಐಟಿಐ ವಿದ್ಯಾರ್ಥಿಗಳಿಗೆ ಏಕಾಏಕಿಯಾಗಿ ಸಂಯೋಜನೆಯಡಿ ಆನ್ಲೈನ್ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ. ಸಾಮಾನ್ಯವಾಗಿ ಐಟಿಐ ಕೋರ್ಸ್ಗಳಿಗೆ ಪ್ರವೇಶ ಪಡೆಯುವುದು ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳೇ ಹೆಚ್ಚು. ಅಲ್ಲದೇ ಪ್ರೌಢಶಾಲೆಗಳಲ್ಲಿ ಅತ್ಯಂತ ಕಡಿಮೆ ಅಂಕ ಗಳಿಸಿದವರೇ ಹೆಚ್ಚಾಗಿ ಐಟಿಐ ಕೋರ್ಸ್ಗಳಿಗೆ ಆಯ್ಕೆಯಾಗಿರುತ್ತಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಯಾವುದೇ ಪೂರ್ವಭಾವಿ ತಯಾರಿಯಿಲ್ಲದೇ ಐಟಿಐ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಲು ಮುಂದಾಗಿರುವುದು ಅವರ ಕಲಿಕೆಯ ಮಟ್ಟಕ್ಕಿಂತ ಹೆಚ್ಚಿನ ಪರೀಕ್ಷೆ ನಡೆಸಿದಂತಾಗುತ್ತದೆ. ಆನ್ಲೈನ್ ಪರೀಕ್ಷೆ ಎದುರಿಸಲು ಸತತವಾಗಿ ಕಂಪ್ಯೂಟರ್ ಮತ್ತು ಸ್ಮಾರ್ಟ್ ಫೋನ್ಗಳಲ್ಲಿ ಅಭ್ಯಾಸ ನಡೆಸಬೇಕು. ಆದರೆ ಐಟಿಐ, ವಿದ್ಯಾರ್ಥಿಗಳಿಗೆ ಈ ಬಗ್ಗೆ ಯಾವುದೇ ತರಬೇತಿ ನೀಡದೇ ಪರೀಕ್ಷೆ ಎದುರಿಸುವುದು ಕಷ್ಟವಾಗಲಿದೆ ಎಂದರು.
ಅಭ್ಯಾಸ ನಡೆಸಲು ಬಡ, ಮಧ್ಯಮ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಗುಣಮಟ್ಟದ ಕಂಪ್ಯೂಟರ್, ಸ್ಮಾರ್ಟ್ ಫೋನ್ ಖರೀದಿಸಲು ಆಗುವುದಿಲ್ಲ. ಅಲ್ಲದೆ, ಆನ್ಲೈನ್ ಪರೀಕ್ಷೆ ಎದುರಿಸುವ ತರಬೇತಿಯೂ ದೊರೆತಿಲ್ಲ. ಆದ್ದರಿಂದ ಏಕಾಏಕಿ ವಿದ್ಯಾರ್ಥಿಗಳ ಮೇಲೆ ಪ್ರಯೋಗ ನಡೆಸದೇ ಹಿಂದಿನೆ ಪದ್ಧತಿಯಲ್ಲೇ ಪರೀಕ್ಷೆ ನಡೆಸಲು ತಾಂತ್ರಿಕ ಶಿಕ್ಷಣ ಇಲಾಖೆಗೆ ಆದೇಶ ನೀಡಬೇಕೆಂದು ಆಗ್ರಹಿದರು.
ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ರಾಜ್ಯ ಉಪಾದ್ಯಕ್ಷ ಚೇತನ್ ಕೆ., ಜಿಲ್ಲಾಧ್ಯಕ್ಷ ಬಾಲಾಜಿಮ ಕಾರ್ಯಾಧ್ಯಕ್ಷ ವಿನಯ್, ನಗರ ಅಧ್ಯಕ್ಷ ವಿಜಯ್, ಪ್ರಮುಖರಾದ ರವಿ, ಪ್ರದೀಪ, ರಘು, ನಿತೀನ್, ರವಿ, ಆಲ್ವಿನ್, ವಿನ್ಯಾಸ್ ಚಂದ್ರೋಜಿ ರಾವ್, ಅಬ್ದುಲ್ಲ, ಆಕಾಶ, ಸಂದೀಪ, ದರ್ಶನ್ ಹೇಮಂತ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ