ಅಸಮರ್ಪಕ ಕಸ ವಿಲೇವಾರಿ ಹಾಗೂ ಅಶುದ್ಧ ಕುಡಿಯುವ ನೀರು ಪೂರೈಕೆ ವಿರುದ್ಧ ಗ್ರಾ.ಪಂ ಎದುರು ಧರಣಿ!
Team Udayavani, Jul 27, 2021, 7:05 PM IST
ತೀರ್ಥಹಳ್ಳಿ: ಪಟ್ಟಣಕ್ಕೆ ಕೂಗಳತೆಯ ದೂರದಲ್ಲಿರುವ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇಲಿನ ಕುರುವಳ್ಳಿ ಹಾಗೂ ಅಕ್ಕಪಕ್ಕ ಗ್ರಾಮದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡುವಂತೆ ಕಿರಣ್ ಕುಮಾರ್ ಹಾಗೂ ದರ್ಶನ್ರವರು ಇಂದು ಬೆಳಿಗ್ಗೆ ಗ್ರಾಮ ಪಂಚಾಯತಿ ಎದುರು ಧರಣಿ ಕುಳಿತಿದ್ದಾರೆ.
ಅಶುದ್ಧ ಕುಡಿಯುವ ನೀರಿನ ಪೂರೈಕೆ ಆಗುತ್ತಿದೆ. ತಿಂಗಳಿಗೆ ೬೦ ರೂಪಾಯಿ ವಸೂಲಿ ಮಾಡುತ್ತಾರೆ ಆದರೆ ನೀರು ಶುದ್ಧೀಕರಣ ಘಟಕ ಕೆಟ್ಟು ನಿಂತಿದೆ. ಹಾಗೆ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಡೀ ಪಟ್ಟಣದ ಕಸ ವಿಲೇವಾರಿ ಮಾಡಲು ಕಸ ವಿಲೇವಾರಿ ಘಟಕ ಇದೆ. ಪಟ್ಟಣ ಪೂರ್ಣ ಪ್ರಮಾಣದಲ್ಲಿ ಸ್ವಚ್ಛ ಮಾಡುವುದಕ್ಕೆ ಕಸ ವಿಲೇವಾರಿ ಮಾಡಲು ಮೇಲಿನ ಕುರುವಳ್ಳಿ ಬೇಕು ಆದರೆ ಮೇಲಿನ ಕುರುವಳ್ಳಿ ಗ್ರಾಮದ ಸ್ವಚ್ಛತೆಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಪಟ್ಟಣ ಪಂಚಾಯತಿಯವರು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯವರೊಂದಿಗೆ ವಾರಕ್ಕೊಂದು ಬಾರಿ ಕಸ ತೆಗೆದುಕೊಂಡು ಹೋಗುವ ಗಾಡಿ ಕಳುಹಿಸಿ ಸ್ವಚ್ಛ ಮಾಡಿಸುವುದಾಗಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಪಿಡಿಒ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹೇಳುತ್ತಾರೆ ಆದರೆ ಒಪ್ಪಂದ ಮಾಡಿಕೊಂಡ ಸ್ವಲ್ಪ ಸಮಯ ಸ್ವಚ್ಛತೆಯನ್ನು ಮಾಡಿದ್ದಾರೆ.
ನಂತರ ಇಲ್ಲಿಯವರೆಗೆ ಯಾವುದೇ ರೀತಿಯಾಗಿ ಸಮರ್ಪಕವಾಗಿ ಸ್ವಚ್ಛತೆಯನ್ನು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
-ಶ್ರೀಕಾಂತ್ ವಿ ನಾಯಕ್, ತೀರ್ಥಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?