ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಿ


Team Udayavani, Jun 19, 2018, 11:41 AM IST

shivamoga-1.jpg

ಸಾಗರ/ಶಿವಮೊಗ್ಗ: ಪ್ರಸಿದ್ಧ ಪ್ರವಾಸಿ ತಾಣ ಜೋಗದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಹಾಗೂ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಲೋಕೇಶ್‌, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಜೋಗ ಜಲಪಾತ ತಾಣಕ್ಕೆ ಭೇಟಿ ನೀಡಿದ ಅವರು ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿ ಪ್ರವಾಸಿಗರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.

ಪ್ರವಾಸಿಗರ ವಾಹನಗಳಿಗೆ ಈಗಾಗಲೇ ಸೂಕ್ತ ತಂಗುದಾಣ ನಿರ್ಮಿಸಲಾಗಿದೆ. ದ್ವಿಚಕ್ರ ವಾಹನ ಹಾಗೂ ಲಘು ವಾಹನಗಳು ಪ್ರತ್ಯೇಕ ಸ್ಥಳಗಳಲ್ಲಿ ಪಾರ್ಕಿಂಗ್‌ ಮಾಡುವಂತೆ ನೋಡಿಕೊಳ್ಳಬೇಕು. ಈ ಸ್ಥಳವನ್ನು ಸಮರ್ಪಕವಾಗಿ
ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು. ಜೋಗ ಪರಿಸರವನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತಗೊಳಿಸಲು ಹಲವು ಬಾರಿ ಸೂಚನೆ ನೀಡಲಾಗಿದೆ.

ಆದರೂ ಪ್ರವಾಸಿಗರು ಪ್ಲಾಸ್ಟಿಕ್‌ ತ್ಯಾಜ್ಯ ಹಾಕುತ್ತಿರುವುದು ಕಂಡು ಬಂದಿದೆ. ಜೋಗ ಸುತ್ತಮುತ್ತಲಿನ ಪ್ರದೇಶದಲ್ಲಿ,
ಶೌಚಾಲಯ ಬಳಿ, ತೂಗು ಸೇತುವೆ ಬಳಿ, ಪ್ರವಾಸಿಗರ ಪಾದಚಾರಿ ಮಾರ್ಗ, ಜೋಗ ವೀಕ್ಷಣಾಲಯದ ರಸ್ತೆಯ
ಅಕ್ಕಪಕ್ಕದಲ್ಲಿರುವ ಅನುಪಯುಕ್ತ ತ್ಯಾಜ್ಯಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್‌ ಸೇರಿದಂತೆ ಪರಿಸರಕ್ಕೆ
ಹಾನಿಕಾರಕ ವಸ್ತುಗಳನ್ನು ಎಸೆಯದಂತೆ ಪ್ರವಾಸಿಗರಿಗೆ ನಿರಂತರ ಸೂಚನೆ ನೀಡಲು ವ್ಯವಸ್ಥೆ ಮಾಡಬೇಕು.
ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಉಪವಿಭಾಗಾಧಿಕಾರಿಗೆ ತಿಳಿಸಿದರು.

ಪ್ರಸ್ತುತ ಮೂರು ತಿಂಗಳ ಅವಧಿಯಲ್ಲಿ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಅವಘಡ ಸಂಭವಿಸಿದಂತೆ ಮುನ್ನಚ್ಚರಿಕೆ ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದರು. 

ಪ್ರವಾಸಿಗರಿಗೆ ಜಿಲ್ಲೆಯ ಇತರ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಜೋಗ್‌ ಪ್ರದೇಶದಲ್ಲಿ
ಅಳವಡಿಸಬೇಕು. ಜೋಗ್‌ನ ಕೆಳಭಾಗಕ್ಕೆ ತೆರಳಲು ಇರುವ ಮೆಟ್ಟಿಲುಗಳನ್ನು ಸ್ವಚ್ಚವಾಗಿಡುವಂತೆ ಪ್ರವಾಸೋದ್ಯಮ
ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. 

ಜೋಗ್‌ಗೆ ಸೇರುವ ರಸ್ತೆಯ ಮಾರ್ಗ ಮಧ್ಯದಲ್ಲಿ ಮಳೆಗೆ ಗುಡ್ಡದ ಮಣ್ಣು ಕುಸಿದು ಬಿದ್ದು, ಕೆಲವು ಮರ ಸಹ ಬಿದ್ದಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಣ್ಣು ಕುಸಿತ ಸಾಧ್ಯತೆ ಇದೆ. ಈಗಾಗಲೇ ಬಿದ್ದ ಮಣ್ಣು ಹಾಗೂ ಮರಗಳನ್ನು ತೆರವುಗೊಳಿಸಬೇಕು ಹಾಗೂ ಬೀಳುವ ಸಾಧ್ಯತೆ ಇರುವ ಮರಗಳನ್ನು ಸಹ ತೆಗೆಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾಗರ ಉಪವಿಭಾಗಾಧಿಕಾರಿ ನಾಗರಾಜ ಸಿಂಗ್ರೇರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮದ್ಯಪಾನ ಹಾಗೂ ಧೂಮಪಾನ ವಿರುದ್ಧ ಎಚ್ಚರಿಕೆ ಹಾಗೂ ಪ್ಲಾಸ್ಟಿಕ್‌ ಮುಕ್ತ ವಲಯದ ಕುರಿತು ಸೂಕ್ತ ಪ್ರಚಾರ ಫಲಕ ಅಳವಡಿಸಬೇಕು. ಪ್ರವಾಸಿಗರು ತಿಂಡಿ ತಿನಿಸುಗಳನ್ನು ಎಲ್ಲಿಂದರಲ್ಲಿ ಎಸೆದು ಪರಿಸರ ಹಾಳುಗೆಡವದಂತೆ ನೋಡಿಕೊಳ್ಳಬೇಕು.
 ಡಾ| ಎಂ.ಲೋಕೇಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.