ರಾಘವೇಂದ್ರ ಗೆಲುವು ನಿಶ್ಚಿತ: ಕೆ.ಎಸ್.ಈಶ್ವರಪ್ಪ
Team Udayavani, Oct 16, 2018, 6:20 AM IST
ಶಿವಮೊಗ್ಗ: ಲೋಕಸಭೆ ಉಪಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರದ ಸಾಧನೆ, ಬಿಜೆಪಿ ಸಂಘಟನೆ ಹಾಗೂ ಹಿಂದುತ್ವದ ಆಧಾರದ ಮೇಲೆ ಚುನಾವಣೆ ನಡೆಸಿ ಯಶಸ್ವಿಯಾಗಿದ್ದೆವು. ಈ
ಚುನಾವಣೆಯಲ್ಲಿಯೂ ಇದೇ ಅಂಶಗಳನ್ನಿಟ್ಟುಕೊಂಡು ಪ್ರಚಾರ ನಡೆಸಲಾಗುತ್ತಿದೆ ಎಂದರು.
ಶಿವಮೊಗ್ಗ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳರಲ್ಲಿ ಬಿಜೆಪಿ ಶಾಸಕರಿದ್ದು ಈ ಚುನಾವಣೆಯಲ್ಲಿ
ಅನುಕೂಲವಾಗಲಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಒಂದಾಗಿ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಿವೆ ಎಂದು ಕ್ಷೇತ್ರದ ಜನ ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳು ಹೇಳುತ್ತಿವೆ ಎಂದರು.
ರಾಹುಕೇತು ಬಗ್ಗೆ ತಿಳಿಸಿ: ಸಿದ್ದರಾಮಯ್ಯನವರು ಈ ಹಿಂದೆ ತನ್ನನ್ನು ಸೋಲಿಸಿದ್ದು ರಾಹುಕೇತುಗಳೆಂದು ಹೇಳಿದ್ದರು. ನಾಳೆ ನಾಮಪತ್ರ ಸಲ್ಲಿಕೆಗೆ ಮೈತ್ರಿ ಪಕ್ಷದವರು ಬರುತ್ತಿದ್ದಾರೆ. ಯಾರ ಜತೆ ಬರ್ತಿದ್ದಾರೆ ಗೊತ್ತು. ಈಗಲಾದರೂ ರಾಹುಕೇತು ಯಾರು ಅಂಥ ಸಿದ್ದರಾಮಯ್ಯ ಹೇಳಬೇಕು ಎಂದು ಈಶ್ವರಪ್ಪ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ