ರಾಗಿಗುಡ್ಡ ಜೈವಿಕ ವೈವಿಧ್ಯತಾ ತಾಣವಾಗಿ ಉಳಿಸಿ

ಪರಿಸರ ಆಸಕ್ತರು-ಹೋರಾಟಗಾರರಿಂದ ಸಚಿವ ಈಶ್ವರಪ್ಪ ಭೇಟಿ

Team Udayavani, Aug 1, 2020, 1:57 PM IST

ರಾಗಿಗುಡ್ಡ ಜೈವಿಕ ವೈವಿಧ್ಯತಾ ತಾಣವಾಗಿ ಉಳಿಸಿ

ಶಿವಮೊಗ್ಗ: ರಾಗಿಗುಡ್ಡ ಪರಭಾರೆ ವಿರೋ ಧಿಸಿ ಪರಿಸರ ಹೋರಾಟಗಾರರು ಸಚಿವ ಕೆ.ಎಸ್‌. ಈಶ್ವರಪ್ಪಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ: ನಗರದ ರಾಗಿಗುಡ್ಡ ಪ್ರದೇಶವನ್ನು ಜೈವಿಕ ವೈವಿಧ್ಯತಾ ತಾಣವಾಗಿ ಉಳಿಸಿಕೊಳ್ಳುವ ಕುರಿತು ಪರಿಸರ ಆಸಕ್ತರು ಹಾಗೂ ಹೋರಾಟಗಾರರು ಶುಕ್ರವಾರ ಸಚಿವ ಕೆ. ಎಸ್‌. ಈಶ್ವರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಶಿವಮೊಗ್ಗವೂ ಒಂದಾಗಿದ್ದು, ದಿನೇ ದಿನೇ ಹೊಸ ಹೊಸ ಬಡಾವಣೆಗಳು ನಗರ ಪ್ರದೇಶವನ್ನು ವಿಸ್ತರಿಸುತ್ತಿವೆ. ನಗರದೊಳಗಿನ ಹಲವಾರು ಕೆರೆಗಳು ನಾಶವಾಗಿ ಹೋಗಿವೆ. ಹೆಚ್ಚಾಗುತ್ತಿರುವ ವಾಹನ ದಟ್ಟಣೆ ಕಡಿಮೆ ಮಾಡಲು ಇಕ್ಕೆಲಗಳ ಮರಗಳನ್ನು ಬಲಿ ತೆಗೆದುಕೊಂಡು ರಸ್ತೆಗಳು ಅಗಲಗೊಂಡಿವೆ. ಆದರೆ
ಸಂಚಾರ ದಟ್ಟಣೆ ಇನ್ನೂ ಹೆಚ್ಚಾಗುತ್ತಿದೆ. ಜನಸಂಖ್ಯೆಯೂ ವೃದ್ಧಿಯಾಗುತ್ತಿದೆ.

ಪರಿಣಾಮ ವಾಯುಮಾಲಿನ್ಯ ಹೆಚ್ಚಾಗುತ್ತಿದೆಯಲ್ಲದೆ ಬಿಸಿಲಿನ ತಾಪ ವಿಪರೀತವಾಗಿ ಮಲೆನಾಡಿನ ಹೆಬ್ಟಾಗಿಲಾದ ಶಿವಮೊಗ್ಗ ನಗರ  ರುಭೂಮಿಯಂತಾಗುತ್ತಿದೆ. ಈ ನಡುವೆ ಇರುವ ಒಂದಿಷ್ಟು ಹಸಿರನ್ನು ಯಾರ ಅರಿವಿಗೂ ಬಾರದೆ ನಾಶ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರಾಗಿಗುಡ್ಡದ ಹಸಿರೀಕರಣದಲ್ಲಿ ಮೊದಲ ಬಾರಿಗೆ ಅಂದರೆ 2016-17 ರಲ್ಲಿ 110 ಗಿಡಗಳನ್ನು ನೆಡುವುದರೊಂದಿಗೆ ಪ್ರಾರಂಭವಾಗಿ ನಂತರ ನಗರದ ಹತ್ತಾರು ಶಾಲೆಗಳ ಶಾಲಾ ಮಕ್ಕಳು, ಶಾಲಾ ಸಿಬ್ಬಂದಿ ಸಹಕಾರದೊಂದಿಗೆ 2017-18 ರಲ್ಲಿ 480 ಗಿಡಗಳು, 2018-19 ರಲ್ಲಿ 5600 ಗಿಡಗಳು ಹಾಗೂ 2019-20 ರ ಪ್ರಸ್ತುತ ವರ್ಷದಲ್ಲಿ ಈಗಾಗಲೇ 2300 ಗಿಡಗಳನ್ನು ನೆಟ್ಟು ಇನ್ನೂ 1000 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಯೋಜನೆ ಜಾರಿಯಲ್ಲಿದೆ. ಮತ್ತು ರಾಗಿಗುಡ್ಡದ ನಿರ್ದಿಷ್ಟ ಪ್ರದೇಶದಲ್ಲಿ ವಿವಿಧ ಔಷಧೀಯ ಗುಣಗಳುಳ್ಳ ಸಸ್ಯ ಪ್ರಬೇಧಗಳನ್ನು ಬೆಳೆಸುವ ಮೂಲಕ ಅತ್ಯುತ್ತಮ ಔಷಧ ವನವನ್ನಾಗಿ ಮಾರ್ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ನಗರದೊಳಗೆ ಹಸಿರುಕ್ಕಿಸುವ ಗುಡ್ಡ ಪ್ರದೇಶ ಇರುವ ಸಾಧ್ಯತೆ ಎಲ್ಲ ನಗರಗಳಿಗೆ ದೊರಕುವುದಿಲ್ಲ. ಅದೃಷ್ಟವಶಾತ್‌ ಅಂತಹ ಭಾಗ್ಯ ನಮ್ಮ ಶಿವಮೊಗ್ಗಕ್ಕೆ ದೊರೆತಿದೆ. ಈ ಹಸಿರುವನ ನಗರದ ಸೌಂದರ್ಯಕ್ಕೆ ಕಿರೀಟಪ್ರಾಯವಾಗುವುದಲ್ಲದೆ, ಸಕಲ ಜನತೆಗೂ ವಿಹಾರದ ತಾಣವಾಗುತ್ತದೆ ಎಂದರು. ಆದ್ದರಿಂದ ರಾಗಿಗುಡ್ಡವನ್ನು ಪೂರ್ಣ ಪ್ರಮಾಣದ ಜೈವಿಕ ವೈವಿಧ್ಯತಾ ತಾಣವಾಗಿ ಉಳಿಸಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಕೆ.ಎಸ್‌. ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಜಾಗವನ್ನು ಜೈವಿಕ ಪ್ರದೇಶವನ್ನಾಗಿ ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ.

ಸುಂದರ ಪರಿಸರವನ್ನು ಕಾಪಾಡಬೇಕಿದೆ. ಜಾಗ ಪರಭಾರೆಯಾಗಿದ್ದರೆ ಅದನ್ನು ರದ್ದುಪಡಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು. ಸಚಿವರ
ಭೇಟಿ ಸಂದರ್ಭದಲ್ಲಿ ಪ್ರಮುಖರಾದ ನವ್ಯಶ್ರೀ ನಾಗೇಶ್‌, ಶ್ರೀಧರ್‌, ಬಿ.ಎಂ. ಕುಮಾರಸ್ವಾಮಿ, ನಂದನ್‌, ಬಾಲಕೃಷ್ಣ ನಾಯ್ಡು ಮತ್ತಿತರ ಪರಿಸರ ಆಸಕ್ತರು ಹಾಗೂ ಹೋರಾಟಗಾರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.