ಜಾತ್ರೆ ಸಂದರ್ಭ ಮಳೆ-ಶುಭಸೂಚನೆ
Team Udayavani, Apr 6, 2022, 4:14 PM IST
ಸಾಗರ: ಮಹಾಗಣಪತಿ ದೇವರು ನಮ್ಮೂರಿನ ಆರಾಧ್ಯ ಧೈವ. ಗಣಪತಿ ಜಾತ್ರೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ನಡೆದಿದ್ದು, ಸಹಸ್ರಾರು ಜನರ ಸಮ್ಮುಖದಲ್ಲಿ ಮಹಾಗಣಪತಿ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆದಿದೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಇಲ್ಲಿನ ಮಹಾಗಣಪತಿ ಜಾತ್ರೋತ್ಸವ ಅಂಗವಾಗಿ ಮಂಗಳವಾರ ನೆರವೇರಿದ ಮಹಾಗಣಪತಿ ಮಹಾಸ್ಯಂದನ ರಥೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಹಾಗಣಪತಿ ಜಾತ್ರೆ ಪ್ರಾರಂಭವಾಗಿದೆ ಎಂದರೆ ಭೂಮಿಗೆ ಮೊದಲ ಮಳೆ ಬರುತ್ತದೆ ಎಂಬ ವಾಡಿಕೆ ಮಾತಿತ್ತು. ಅದೇ ರೀತಿ ಎರಡು ದಿನಗಳಿಂದ ಉತ್ತಮ ಮಳೆ ಸಹ ಆಗಿದ್ದು ಇದು ಶುಭ ಸೂಚನೆಯಾಗಿದೆ.
ಗಣಪತಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಪ್ರತಿದಿನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಬುಧವಾರದಿಂದ ಪ್ರತಿದಿನ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಸಹ ಆಯೋಜಿಸಲಾಗಿದೆ. ಭಕ್ತಾದಿಗಳು ಶಾಂತಿ ಮತ್ತು ಸೌಹಾರ್ದತೆ ಕಾಯ್ದುಕೊಳ್ಳುವ ಮೂಲಕ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್