ಸಾಗರ: ಮಳೆಗೆ ಬೆದರಿ ಶಾಲೆಯಷ್ಟೇ ಅಲ್ಲ, ಹಾಸ್ಟೆಲ್ಗೂ ರಜೆ!
Team Udayavani, Jul 9, 2022, 11:44 AM IST
ಸಾಗರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸತತ ಮೂರು ದಿನದಿಂದ ಪ್ರಾಥಮಿಕ ಶಾಲೆ, ಪ್ರೌಢಶಾಲೆ. ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದರೂ, ತಾಲೂಕಿನ ಉಳ್ಳೂರಿನ ವಿದ್ಯಾರ್ಥಿನಿಯರ ಹಾಸ್ಟೆಲ್ಗೂ ಬಲವಂತದ ರಜೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ!
ಉಳ್ಳೂರಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ದೊಡ್ಡ ಪ್ರಮಾಣದಲ್ಲಿ ಸೋರುತ್ತಿದ್ದು, ಇದರೊಳಗೆ ಮಕ್ಕಳು ಉಳಿಯಲಾಗದ ಸ್ಥಿತಿ ನಿರ್ಮಾಣವಾಗಿದೆ. ನೀರು ಸೋರುವುದನ್ನು ಹಿಡಿಯಲು ಸ್ಟೀಲ್ ಪಾತ್ರೆ, ಪ್ಲಾಸ್ಟಿಕ್ ಟಬ್ಗಳನ್ನು ಇಡಲಾಗಿದೆ.
ಈ ಮಾಹಿತಿಯನ್ನು ಪಡೆದು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಇತ್ತೀಚೆಗೆ ನಿರ್ಮಾಣವಾದ ಈ ಹಾಸ್ಟೆಲ್ನ ಕಳಪೆ ಕಾಮಗಾರಿಯ ಕಾರಣದಿಂದ ಎಲ್ಲೆಡೆ ನೀರು ಸೋರುತ್ತಿದೆ. ವಿದ್ಯಾರ್ಥಿನಿಯರು ಮಲಗುವ ಸ್ಥಳ, ಅಡುಗೆ ಮನೆಯಲ್ಲಿಯೂ ದೊಡ್ಡ ಪ್ರಮಾಣದ ಸೋರಿಕೆ ಇದೆ. ಇಂತಹ ಸಂದರ್ಭದಲ್ಲಿ ಸೋರಿಕೆಯನ್ನು ತಡೆಯಲು ತಕ್ಷಣದ ಕ್ರಮಕ್ಕೆ ಆಡಳಿತ, ಶಾಸಕರು ಮುಂದಾಗಬೇಕಿತ್ತು. ಅದರ ಬದಲು ಮಕ್ಕಳನ್ನೇ ಮನೆಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು.
ಮಕ್ಕಳ ಹಾಸಿಗೆಗಳೆಲ್ಲ ನೀರಿನಿಂದ ಥಂಡಿಯಾಗಿವೆ. ಇಲ್ಲಿನ ಮಂಚಗಳನ್ನು ಕಬ್ಬಿಣದಿಂದ ನಿರ್ಮಿಸಲಾಗಿದ್ದು, ಕಟ್ಟಡದಲ್ಲಿನ ಆರ್ದತೆಯಿಂದ ವಿದ್ಯುತ್ ಶಾಕ್ ಸಂಭವಿಸುವ ಎಲ್ಲ ಸಾಧ್ಯತೆಗಳಿವೆ. ಈಗಾಗಲೇ ಹಲವು ಶಾಲೆಗಳು ಬೀಳುವ ಪರಿಸ್ಥಿತಿ ಇದೆ. ಇವುಗಳನ್ನು ಗಮನಿಸದಿರುವ ಸರ್ಕಾರ ಸತ್ತಿದೆಯೇ ಎಂಬ ಅನುಮಾನ ಕಾಡುತ್ತದೆ ಎಂದು ಬೇಳೂರು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’