ಮತ್ತೆ ಕುಸಿದ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಸೇತುವೆ: ಶಿವಮೊಗ್ಗ- ಉಡುಪಿ ಸಂಚಾರ ಸ್ಥಗಿತ
Team Udayavani, Oct 15, 2020, 1:01 PM IST
ಶಿವಮೊಗ್ಗ: ಕಳೆದ 20 ದಿನಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಕುಸಿತವಾಗಿದ್ದ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಸೇತುವೆ ಈಗ ಮತ್ತೆ ಕುಸಿದಿದ್ದು, ಶಿವಮೊಗ್ಗ ಮತ್ತು ಉಡುಪಿ ನಡುವಿನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಭಾರಿ ಮಳೆಯಿಂದಾಗಿ ಸಪ್ಟೆಂಬರ್ 24ರಂದು ಸೇತುವೆಯ ಒಂದು ಕಡೆ ಬಿರುಕಿ ಕಂಡುಬಂದಿತ್ತು. ಸೇತುವೆಯ ಕೆಳಭಾಗದಲ್ಲಿ ಬಿರುಕುಗಳು ಉಂಟಾಗಿದ್ದ ಕಾರಣಕ್ಕೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಮಣಿಪಾಲ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿತ್ತು.
ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಈ ತಾತ್ಕಾಲಿಕ ಸೇತುವೆಯೂ ಕುಸಿದಿದ್ದು ಮತ್ತೆ ಸಂಚಾರ ಸ್ಥಗಿತಗೊಂಡಿದೆ.
ತೀರ್ಥಹಳ್ಳಿ ಹೆದ್ದಾರಿ ಬದಲಿ ಮಾರ್ಗಗಳು
1. ಉಡುಪಿ, ಆಗುಂಬೆ, ಸಾಗರ, ಶಿವಮೊಗ್ಗ ಹೋಗುವವರು ತೀರ್ಥಹಳ್ಳಿ ಮಾರ್ಗದಲ್ಲಿ ಕಲ್ಮನೆ, ಉಂಟೂರುಕಟ್ಟೆ ಕೈಮರ ನಂತರ ಸಿಗುವ ಬಿಳುಕೊಪ್ಪ ಇಲ್ಲಿ ಶಾಲಾ ಸಮೀಪ ಇರುವ ರಸ್ತೆಯಲ್ಲಿ ಸಾತ್ಗೋಡು (7 KM) ಸಂಚರಿಸಿ ಅಲ್ಲಿಂದ ಬಲಭಾಗದಿಂದ ಮುಕ್ತಿಹರಿಹರಪುರ, ಬೊಬ್ಬಿ ಮಾರ್ಗವಾಗಿ ತೀರ್ಥಹಳ್ಳಿ ಮಾರ್ಗ ಸಂಪರ್ಕಿಸಬಹುದು.
2 ಆಗುಂಬೆ, ಕಮ್ಮರಡಿ, ರಾಮಕೃಷ್ಣಪುರ, ದೇವಂಗಿ, ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದು.
3 ಆಗುಂಬೆ ಕೊಪ್ಪ, ಶಿವಮೊಗ್ಗ ಮಾರ್ಗವಾಗಿ ಸಂಚರಿಸಬಹುದು.
4. ಉಡುಪಿ, ಹುಲಿಕಲ್, ಮಾಸ್ತಿಕಟ್ಟೆ, ಯಡೂರು, ಕವಲೇದುರ್ಗ, ಕೊಂಡ್ಲೂರು, ತೀರ್ಥಹಳ್ಳಿ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು