ಧರ್ಮಾಧಾರಿತ ರಾಷ್ಟ್ರಗಳು ಉದ್ಧಾರವಾಗೊಲ್ಲ; ಪ್ರೊ|ರಾಚಪ್ಪ

ಬಹುತ್ವ ಭಾರತ ನಿರ್ಮಾಣ ಮಾಡದಿದ್ದರೆ ದೇಶಕ್ಕೆ ಭವಿಷ್ಯವೇ ಇಲ್ಲ.

Team Udayavani, Mar 28, 2022, 6:44 PM IST

ಧರ್ಮಾಧಾರಿತ ರಾಷ್ಟ್ರಗಳು ಉದ್ಧಾರವಾಗೊಲ್ಲ; ಪ್ರೊ|ರಾಚಪ್ಪ

ಶಿವಮೊಗ್ಗ: ಧರ್ಮ ಆಧಾರಿತ ರಾಷ್ಟ್ರಗಳು ಉದ್ಧಾರವಾಗುವುದಿಲ್ಲ ಎಂದು ಡಿವಿಎಸ್‌ ಕಾಲೇಜು ನಿವೃತ್ತ ಉಪನ್ಯಾಸಕ ಪ್ರೊ|ರಾಚಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಕರ್ನಾಟಕ ಸಂಘದಲ್ಲಿ ಜನಪರ ಚಳವಳಿ, ಸಂಘಟನೆ ಮತ್ತು ವ್ಯಕ್ತಿಗಳ ವೇದಿಕೆ ವತಿಯಿಂದ ಭಾನುವಾರ ಆಯೋಜಿಸಿದ್ದ “ಧರ್ಮ ಸಮನ್ವಯ-ಕುವೆಂಪು ವಿಚಾರಧಾರೆ’ ಕುರಿತ ಸಂವಾದ ಮತ್ತು ಚಿಂತನ ಮಂಥನ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಧರ್ಮ ಆಧಾರಿತ ಚಟುವಟಿಕೆಗಳು ದೇಶದಲ್ಲಿ ಕಂಡುಬಂದರೆ ಸರಕಾರ ಅದನ್ನು ಮೊಳಕೆಯಲ್ಲಿಯೇ ಚಿವುಟಬೇಕು. ಇಲ್ಲದಿದ್ದರೆ ಇಡೀ ದೇಶವೇ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ರಾಷ್ಟ್ರ ಕವಿ ಕುವೆಂಪು ಅವರು ದೇವರಿಗಿಂತ “ದೇಶ’ಕ್ಕೆ ಹಾಗೂ ಧರ್ಮಕ್ಕಿಂತ “ಲೋಕದ ಹಿತ’ಕ್ಕೆ ಒತ್ತು ನೀಡಿದ್ದರು. ಅವರೂ ಸಹ ಹಿಂದೂ ಅನುಯಾಯಿಯೇ ಆಗಿದ್ದರು ಎಂದು ತಿಳಿಸಿದರು.

ಭಾರತ ವಿಶಿಷ್ಟ ರಾಷ್ಟ್ರವಾಗಿದೆ. ಬಹುತ್ವ ಭಾರತ ನಿರ್ಮಾಣ ಮಾಡದಿದ್ದರೆ ದೇಶಕ್ಕೆ ಭವಿಷ್ಯವೇ ಇಲ್ಲ. ಪಾಕಿಸ್ತಾನ ಸೇರಿದಂತೆ ಕೆಲವು ರಾಷ್ಟ್ರಗಳು ಧರ್ಮ ಆಧಾರಿತವಾಗಿವೆ. ಅಲ್ಲಿಯ ರಾಜ್ಯಭಾರವೂ ಧರ್ಮ ಕೇಂದ್ರಿತವೇ ಆಗಿದೆ. ಹೀಗಾಗಿಯೇ ಆ ದೇಶಗಳು ಜಾಗತಿಕ ಮಟ್ಟದಲ್ಲಿ ತಮ್ಮನ್ನು ತಾನು ಪ್ರತಿನಿ ಧಿಸುವಲ್ಲಿ ಸಾಧ್ಯವಾಗಿಲ್ಲ. ಮನ್ನಣೆಯೂ ಇಲ್ಲ ಎಂದು ಹೇಳಿದರು.

ಧರ್ಮ ಮತ್ತು ದೇವರು ಎಲ್ಲಿರಬೇಕೋ ಅಲ್ಲಿಯೇ ಇರಲಿ. ಯಾವುದೇ ಕಾರಣಕ್ಕೂ ಧರ್ಮದ ಹೆಸರಿನಲ್ಲಿ ಬೀದಿ ರಂಪಾಟ ಮಾಡುವುದು, ಹತ್ಯೆಯಂತಹ ಘೋರ ಕೃತ್ಯಗಳು ನಡೆಯಬಾರದು ಎಂದರು. ಸಮಾಜವಾದಿ ಅಧ್ಯಯನ ಕೇಂದ್ರದ ಪ್ರಕಾಶ್‌ ಕಮ್ಮರಡಿ ಮಾತನಾಡಿ, ವಿದ್ಯಾರ್ಥಿಗಳನ್ನು ಧರ್ಮ ಮತ್ತು ಆಚರಣೆಗಳ ಹೆಸರಿನಲ್ಲಿ ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಒಡಕು ಮೂಡಿಸಲಾಗುತ್ತಿದೆ. ಇದ್ಯಾವುದೇ ಕಾರಣಕ್ಕೂ ಆಗಬಾರದು ಎಂದರು.

ಧರ್ಮದ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಬರುವ ದಿನಗಳಲ್ಲಿ ತಾಯಿ ಮಗನನ್ನು ಕಳೆದುಕೊಳ್ಳಬಾರದು. ಅದಕ್ಕೆ ನಾವು ಅವಕಾಶವನ್ನೂ ನೀಡುವುದಿಲ್ಲ. ಈ ಉದ್ದೇಶದಿಂದಲೇ ಕಾರ್ಯಕ್ರಮ ಆಯೋಜಿಸಲಾಗಿದೆ. ಮಲೆನಾಡಿನ ಸಂಸ್ಕೃತಿ ಇಲ್ಲಿಯ ವಿಚಾರಧಾರೆಗಳ ಕುರಿತು ತಿಳಿಹೇಳಲಾಗುವುದು ಎಂದು ತಿಳಿಸಿದರು.

ರಾಮ ಎಲ್ಲರಿಗೂ ಆದರ್ಶ. ಆದರೆ, ನಾವು ಯಾವ ರಾಮನನ್ನು ಹಿಂಬಾಲಿಸುತ್ತಿದ್ದೇವೆ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬರಿಗೂ “ಮರ್ಯಾದಾ ಪುರುಷೋತ್ತಮ ರಾಮ’ ಮಾದರಿಯಾಗಿದ್ದಾರೆ. ಕುವೆಂಪು ಅವರೂ ತಮ್ಮ ಶ್ರೀರಾಮಾಯಣ ದರ್ಶನಂ ಕೃತಿಯಲ್ಲಿ ಇದನ್ನು ಬಣ್ಣಿಸಿದ್ದಾರೆ ಎಂದು ಹೇಳಿದರು.

ಕೋಮು ಗಲಭೆಯಲ್ಲಿ ಮೃತಪಟ್ಟ ವಿಶ್ವನಾಥ್‌ ಶೆಟ್ಟಿ ಅವರ ತಾಯಿ ಮೀನಾಕ್ಷಮ್ಮ, ಬಜೀಉಲ್ಲಾ ಅವರು ಕಾರ್ಯಕ್ರಮವನ್ನು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಉದ್ಘಾಟಿಸಿದರು. ಪ್ರಮುಖರಾದ ಬಾನು ಮುಷ್ತಾಕ್‌, ಬಿ.ಗೋಪಾಲ್‌, ದೇವುಕುಮಾರ್‌, ತೇಜಸ್ವಿ ಪಟೇಲ್‌, ಕೆ.ಟಿ.ಗಂಗಾಧರ್‌, ಚನ್ನವೀರಪ್ಪ ಗಾಮನಗಟ್ಟಿ ಇತರರಿದ್ದರು. ಕೆ.ಪಿ.ಶ್ರೀಪಾಲ್‌ ಸ್ವಾಗತಿಸಿದರು. ಪ್ರೊ| ಸಿರಾಜ್‌ ಅಹಮದ್‌ ನಿರೂಪಿಸಿದರು. ಜಿ.ಎಲ್‌.ಜನಾರ್ಧನ್‌ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.