ವಸತಿಗೃಹ ಖಾಲಿ ಮಾಡಿಸದಿರಲು ಆಗ್ರಹ
Team Udayavani, Sep 17, 2019, 2:30 PM IST
ಭದ್ರಾವತಿ: ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಂಘ ಕಾರ್ಖಾನೆಯ ನ್ಯೂಟೌನ್ ನೋಟಿಫೈಡ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಭದ್ರಾವತಿ: ವಿಐಎಸ್ಎಲ್ ಕಾರ್ಖಾನೆಗೆ ಸೇರಿದ ಕಾರ್ಮಿಕ ವಸತಿ ಗೃಹಗಳಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರನ್ನು ಮನೆ ಖಾಲಿ ಮಾಡುವಂತೆ ಆಡಳಿತ ಮಂಡಳಿ ನೋಟಿಸ್ ನೀಡುವ ಪ್ರಕ್ರಿಯೆಗೆ ಮುಂದಾಗಿರುವುದನ್ನು ಖಂಡಿಸಿ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಂಘ ಸೋಮವಾರ ಕಾರ್ಖಾನೆಯ ನ್ಯೂಟೌನ್ ನೋಟಿಫೈಡ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಮಾತನಾಡಿ, ನಿವೃತ್ತ ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು, ಅನಾರೋಗ್ಯದಿಂದ ನರಳುತ್ತಿದ್ದಾರೆ. ಮಕ್ಕಳು ಕೆಲಸವಿಲ್ಲದೆ ಅವರ ಆಶ್ರಯದಲ್ಲಿದ್ದಾರೆ. ಕೆಲವು ಮಕ್ಕಳು ತಂದೆ, ತಾಯಿಯರನ್ನು ಬಿಟ್ಟು ಬೇರೆಡೆ ವಾಸವಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಿವೃತ್ತ ಕಾರ್ಮಿಕರನ್ನು ಕಾರ್ಖಾನೆಯ ಆಡಳಿತ ಮಂಡಳಿ ಮನೆ ಖಾಲಿಮಾಡಿಸಲು ಹೊರಟಿರುವ ಕ್ರಮ ಸರಿಯಲ್ಲ. ಕಾರ್ಖಾನೆ ಸಂಕಷ್ಟದಲ್ಲಿದೆ. ಅದನ್ನು ಉಳಿಸಲು ಆಡಳಿತ ಮಂಡಳಿ ಪ್ರಯತ್ನಿಸಬೇಕಿದೆ. ಆದರೆ ಅದರ ಬದಲು ನಿವೃತ್ತ ಕಾರ್ಮಿಕರನ್ನು ಮನೆ ಖಾಲಿ ಮಾಡಿಸಲು ನೋಟಿಸ್ ನೀಡುತ್ತಿರುವುದು ಸರಿಯಲ್ಲ. ಖಾಲಿ ಮಾಡಿಸಿ ಏನು ಮಾಡುತ್ತೀರಿ? ಅಲ್ಲಿ ಅವರು ವಾಸವಿರುವುದರಿಂದ ಮನೆಗಳು ಸುವ್ಯವಸ್ಥೆಯಲ್ಲಿ ಉಳಿದಿವೆ. ಇಲ್ಲವಾಗಿದ್ದರೆ ಆ ಮನೆಗಳೂ ಸಹ ಉಳಿದ ಖಾಲಿ ವಸತಿಗೃಹಗಳಂತೆ ಹಾಳಾಗಿ ಹೋಗಿರುತ್ತಿದ್ದವು. ನಿವೃತ್ತ ಕಾರ್ಮಿಕರು ಯಾವುದೇ ಕಾರಣಕ್ಕೂ ಮನೆ ಖಾಲಿ ಮಾಡಬಾರದು ಎಂದು ಹೇಳಿದರು.
ಶಾಸಕ ಬಿ.ಕೆ.ಸಂಗಮೇಶ್ ಮಾತನಾಡಿ, ಕಾರ್ಖಾನೆಯ ಉಳಿವಿಗೆ ರಾಜ್ಯ ಸರ್ಕಾರ ಅಗತ್ಯ ಅದಿರಿನ ಗಣಿಯನ್ನು ಒದಗಿಸಿದರೂ ಕೇಂದ್ರ ಸರ್ಕಾರ ಅದನ್ನು ಉಳಿಸುವ ಪ್ರಯತ್ನ ಮಾಡುತ್ತಿಲ್ಲ. ಸೈಲ್ ಅಥಾರಿಟಿ ಬಗ್ಗೆ ಗಮನಹರಿಸದೆ ನಿವೃತ್ತ ಕಾರ್ಮಿಕರನ್ನು ಮನೆ ಖಾಲಿ ಮಾಡಿಸುವ ಕಡೆ ಹೆಚ್ಚಿನ ಗಮನ ಹರಿಸುತ್ತಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ನಿವೃತ್ತ ಕಾರ್ಮಿಕರು ಮನೆ ಖಾಲಿ ಮಾಡುವುದಿಲ್ಲ ಎಂದ ಅವರು, ಪ್ರತಿಭಟನಾ ಸ್ಥಳಕ್ಕೆ ಕಾರ್ಖಾನೆಯ ಕಾರ್ಯಪಾಲ ನಿರ್ದೇಶಕ ಕೆ.ಎಲ್.ಎಸ್.ರಾವ್ ಅವರನ್ನು ಕರೆಸಿ ಮಾತನಾಡಿದರು.
ಪ್ರತಿಭಟನಾಕಾರರು ಕಾರ್ಯಪಾಲ ನಿರ್ದೇಶಕರಿಗೆ ಮನವಿ ಸಲ್ಲಿಸಿ ನಿವೃತ್ತ ಕಾರ್ಮಿಕರು ಸದರಿ ವಸತಿ ಗೃಹಗಳನ್ನು 2ರಿಂದ 3 ಲಕ್ಷದವರೆಗೆ ಖರ್ಚು ಮಾಡಿ ವಾಸಕ್ಕೆ ಯೋಗ್ಯವನ್ನಾಗಿ ಮಾಡಿ ಅಭಿವೃದ್ಧಿಪಡಿಸಿ ಕೊಂಡಿರುತ್ತೇವೆ. ನಿವೃತ್ತಿ ನಂತರ ಅನಾರೋಗ್ಯದಿಂದ ಬಳಲುತ್ತಿರುವ ನಮ್ಮನ್ನು ವಸತಿ ಗೃಹದಿಂದ ಖಾಲಿ ಮಾಡಿಸಬಾರದು. ಈಗಿರುವ ಭೋಗ್ಯದ ಅವಧಿಯನ್ನು 33 ತಿಂಗಳಿಗೆ ನವೀಕರಣಗೊಳಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯಪಾಲ ನಿರ್ದೇಶಕ ಕೆ.ಎಲ್.ಎಸ್.ರಾವ್ ಮನವಿಯನ್ನು ಕಾರ್ಖಾನೆಯ ಸೈಲ್ ಆಡಳಿತದ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಸಂಘದ ಅಧ್ಯಕ್ಷ ನಾಗಭೂಷಣ, ಮುಖಂಡರಾದ ಎಸ್.ಎನ್.ಬಾಲಕೃಷ್ಣ, ಭೈರಪ್ಪಗೌಡ, ನರಸಿಂಹಾಚಾರ್, ಕೃಷ್ಣೇಗೌಡ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್