ವರ್ಗಾವಣೆಗೆ ಹಣ: ಸಾಬೀತುಪಡಿಸಿದ್ರೆ ರಿಸೈನ್
Team Udayavani, Oct 30, 2018, 6:00 AM IST
ಸೊರಬ: ಅಪ್ಪ-ಮಕ್ಕಳು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆಂದು ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿಯವರು ಪದೇಪದೆ ಹೇಳುತ್ತಿದ್ದಾರೆ. ಇದನ್ನು ಬಿಜೆಪಿಯವರು ಸಾಬೀತುಪಡಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಮುಖ್ಯಮಂತ್ರಿ
ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಬಂಗಾರ ಧಾಮದಲ್ಲಿ ಸೋಮವಾರ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು. ಸಮ್ಮಿಶ್ರ ಸರ್ಕಾರದಲ್ಲಿ ಅ ಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಇದರಲ್ಲಿ ಅಪ್ಪ- ಮಕ್ಕಳು ಹಣ ಸಂಪಾದನೆ ಮಾಡುತ್ತಿದ್ದಾರೆಂದು ಹಗುರವಾಗಿ ಮಾತನಾಡುತ್ತಿದ್ದಾರೆ.
ವರ್ಗಾವಣೆಗಾಗಿ ಯಾವುದೇ ಅಧಿಕಾರಿಯಿಂದ ಹಣ ಪಡೆದ ಬಗ್ಗೆ ಸಾಕ್ಷಿ ತೋರಿಸಿ ಸಾಬೀತುಪಡಿಸಿದರೆ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಈ ಬಗ್ಗೆ ಯಡಿಯೂರಪ್ಪ ಬಹಿರಂಗ ಚರ್ಚೆಗೆ ಬರುವುದಾದರೆ ತಾವು ಸಿದಟಛಿ ಎಂದು ಸವಾಲು ಹಾಕಿದರು. ಉಪಚುನಾವಣೆ ನಂತರ ನ. 6ರಂದು ನಾನು ಮನೆಗೆ ಹೋಗುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದಾರೆ.
ಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರು ಸಂಪೂರ್ಣ ಬೆಂಬಲ ನೀಡಿರುವಾಗ ಯಾರ ಭಯವೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ