Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

ರವೆ ಉಪ್ಪಿಟ್ಟು ತಿನ್ನಲು ಪುಟಾಣಿ ಮಕ್ಕಳ ನಕಾರ

Team Udayavani, Mar 26, 2024, 11:28 AM IST

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

ತೀರ್ಥಹಳ್ಳಿ: ಅಂಗನವಾಡಿ ಮಕ್ಕಳ ಊಟಕ್ಕೆ ಅಕ್ಕಿ ಪೂರೈಕೆಯನ್ನು ಸರಕಾರ 3 ತಿಂಗಳಿನಿಂದ ಸ್ಥಗಿತ ಮಾಡಿದೆ. ಸರಕಾರದ ನಿರ್ಧಾರದ ಪರಿಣಾಮ ಮಲೆನಾಡು ಭಾಗದ ಅಂಗನವಾಡಿಯಲ್ಲಿ ಮಕ್ಕಳಿಗೆ ಅನ್ನ ಸಾಂಬಾ‌ರ್ ಊಟ ಇಲ್ಲವಾಗಿದೆ.
ರಾಜ್ಯಕ್ಕೆ ಏಕರೂಪ ನಿಯಮ ಜಾರಿಗೊಳಿಸಿ ಅಂಗನವಾಡಿ ಕೇಂದ್ರಕ್ಕೆ ಗೋಧಿ, ರವೆ ವಿಶೇಷ ಪೂರೈಸಬೇಕು ಎಂದು ಸರಕಾರ ಸೂಚನೆ ನೀಡಿದೆ.

ಮಲೆನಾಡು ಭಾಗದಲ್ಲಿ ಅಕ್ಕಿಯನ್ನು ಪ್ರಧಾನ ಆಹಾರವಾಗಿ ಬಳಸಲಾಗುತ್ತಿದ್ದು ಮಧ್ಯಾಹ್ನ ಗೋಧಿ ರವೆ ಉಪ್ಪಿಟ್ಟು ತಿನ್ನಲು ಬಹುತೇಕ ಮಕ್ಕಳು ಇಚ್ಛಿಸುತ್ತಿಲ್ಲ. ಏತನ್ಮಧ್ಯೆ, ತಾಲೂಕಿನಲ್ಲಿ ಮಾರ್ಚ್ ತಿಂಗಳು ಪೂರೈಕೆ ಆದ ಗೋಧಿ ರವೆ ಕಳಪೆ ಎಂಬ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ತಿರಸ್ಕಾರಕ್ಕೀಡಾಗಿದ್ದು ವಾಪಸ್ ಮಾಡಲಾಗುತ್ತಿದೆ. ಸರಕಾರದ ನಿರ್ಧಾರ ಮತ್ತು ಕಳಪೆ ಗೋಧಿ ರವೆ ನಡುವೆ ಮಕ್ಕಳು ಅನ್ನ ಸಾಂಬಾರ್ ಭಾಗ್ಯದಿಂದ ವಂಚಿತರಾಗಿದ್ದಾರೆ.

ನಿಯಮ ರಗಳೆ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಆಹಾರ ಪೂರೈಕೆ ಕ್ರಮವನ್ನು ಕೇಂದ್ರ ಸರಕಾರ ಪರಿಷ್ಕರಣೆಗೊಳಿಸಿರುವ ಕಾರಣ ರಾಜ್ಯ ಸರಕಾರ ಹೊಸ ನಿಯಾಮವಳಿ ಜಾರಿಗೊಳಿಸಿದೆ. ಅಂಗನವಾಡಿ ಮಕ್ಕಳಲ್ಲಿ ಅಪೌಷ್ಟಿಕತೆ ಉಂಟಾಗದಂತೆ ಆಹಾರ ಪೂರೈಕೆಗೆ ಕೇಂದ್ರ, ರಾಜ್ಯ ಸರಕಾರ ಸಮಾನವಾಗಿ ಅನುದಾನ ವೆಚ್ಚ ಮಾಡುತ್ತಿವೆ. ಪ್ರತಿದಿನ ಮನೆಯಲ್ಲಿ ಬಳಸುವ ಆಹಾರಕ್ಕೆ ಪೂರಕವಾಗಿ ಪೌಷ್ಟಿಕಾಂಶದ ಆಹಾರವನ್ನು ಪೂರೈಸುವ ಉದ್ದೇಶದಲ್ಲಿ ಸರಕಾರ ಪರಿಷ್ಕೃತ ನಿಯಮ ಅನುಷ್ಠಾನಗೊಳಿಸಿದೆ.

3 ವರ್ಷದಿಂದ 6 ವರ್ಷದ ಅಂಗನವಾಡಿ ಮಕ್ಕಳಿಗೆ ಈ ಹಿಂದೆ ನೀಡುತ್ತಿದ್ದ ಚಿತ್ರಾನ್ನ, ರವೆ ಲಾಡು, ಅನ್ನ ಕಿಚಡಿ, ಮೊಳಕೆ ಬರಿಸಿದ ಹೆಸರು ಕಾಳು, ಅನ್ನ ಸಾಂಬಾರ್, ಶೇಂಗಾ ಚಿಕ್ಕಿ, ಪೂರೈಕೆಯನ್ನು ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಅಪೌಷ್ಟಿಕ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ 6 ದಿನ ಹಾಲು ನೀಡಲಾಗುತ್ತಿದೆ. ಆದರೆ, ಆಹಾರ ನೀಡುವ ಕ್ರಮವನ್ನು ಬದಲಾಯಿಸಿದ ಸರಕಾರ ಮಕ್ಕಳಿಗೆ ಗೋಧಿ ರವೆ, ಪೌಷ್ಟಿಕಾಂಶ ತುಂಬಿರುವ ಪುಷ್ಟಿ ಪೌಡರ್, ಮೊಟ್ಟೆ ಹಾಲು ಮಾತ್ರ ನೀಡುತ್ತಿದೆ.

ಮನೆಯಿಂದ ಬುತ್ತಿ: ಮಕ್ಕಳ ಆರೋಗ್ಯದಲ್ಲಿ ಪೌಷ್ಟಿಕಾಂಶದ ಮಟ್ಟ ಹೆಚ್ಚಿಸುವ ಜತೆಗೆ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆಗೆ ಭದ್ರವಾದ ಅಡಿಪಾಯ ಒದಗಿಸುವುದು ಸಮಗ್ರ ಪೌಷ್ಟಿಕ ಆಹಾರ ಪೂರೈಸುವ ಯೋಜನೆಯ ಉದ್ದೇಶವಾಗಿದೆ. ಇಂತಹ ಮಹತ್ವದ ಚಿಂತನೆಯಲ್ಲಿ ಸರಕಾರ ಸಮಗ್ರ ಪೌಷ್ಟಿಕಾಂಶ ಆಹಾರ ಪೂರೈಕೆ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ, ಪ್ರಾದೇಶಿಕವಾಗಿ ಬಳಸಲಾಗುವ ಆಹಾರ ಪದ್ಧತಿ ಜಾರಿಗೆ ಪೂರಕವಾಗಿ ಸರಕಾರ ಗಮನಿಸಿಲ್ಲ. ಇದರ ಪರಿಣಾಮ ಮಲೆನಾಡು ಭಾಗದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಅನ್ನ ಸಾಂಬಾರ್ ಇಲ್ಲದಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮಕ್ಕಳು ಈಗ ಮನೆಯಿಂದ ಬುತ್ತಿ ಹೊರುವಂತಹ ಸನ್ನಿವೇಶ ಉದ್ಭವಿಸಿದೆ.

ಅಂಗನವಾಡಿಗೆ ಪೂರೈಕೆ ಆಗುತ್ತಿರುವ ಗೋಧಿ ರವೆ ಉಪ್ಪಿಟ್ಟು ತಿನ್ನಲು ಮಕ್ಕಳು ಒಪ್ಪುತ್ತಿಲ್ಲ. ಅನ್ನ ಸಾಂಬಾರ್ ಬೇಡಿಕೆ ಹೆಚ್ಚಿದ್ದು ಸರಕಾರಕ್ಕೆ ಮಾಹಿತಿ ನೀಡಲಾಗಿದೆ.

ಮಾರ್ಚ್ ತಿಂಗಳಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಕ್ಕೆ ಕಳಪೆ ಮಟ್ಟದ ಗೋಧಿ ರವೆ ಪೂರೈಕೆ ಆಗಿದ್ದು ವಾಪಸ್ ಮಾಡಲಾಗುತ್ತಿದೆ. ತಕ್ಷಣವೇ ಈ ಸಮಸ್ಯೆ ಬಗೆ ಹರಿಸುತ್ತೇವೆ.
– ಪ್ರವೀಣ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೀರ್ಥಹಳ್ಳಿ

ಇದನ್ನೂ ಓದಿ: Lok Sabha Poll 2024: ಉತ್ತರ ಕನ್ನಡದಲ್ಲಿ 10 ಬಾರಿ ಕಾಂಗ್ರೆಸ್‌, 6 ಬಾರಿ ಕಮಲಕ್ಕೆ ಮಣೆ

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.