ಮಳೆ ಬರುತ್ತಿದ್ದರೂ ಟಾರ್ಪಲ್ ಬಳಸದೆ ಪಡಿತರ ಅಕ್ಕಿ ಸಾಗಾಟ !
Team Udayavani, Jul 13, 2022, 8:54 PM IST
ಶಿವಮೊಗ್ಗ: ಮಳೆ ಇದ್ದರೂ ಪಡಿತರ ಅಕ್ಕಿಯನ್ನು ಯಾವುದೇ ಮುನ್ನೆಚ್ಚರಿಕೆ ಕ್ರಮವಹಿಸದೇ ಸಾಗಿಸುತ್ತಿದ್ದ ಲಾರಿ ಚಾಲಕನಿಗೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ತರಾಟೆ ತೆಗೆದುಕೊಂಡ ಘಟನೆ ಬುಧವಾರ ಅರಸೀಕೆರೆಯಲ್ಲಿ ನಡೆದಿದೆ.
ಆದಿಚುಂಚನಗಿರಿಯಿಂದ ಶಿವಮೊಗ್ಗಕ್ಕೆ ಬರುತ್ತಿರುವ ವೇಳೆ ಲಾರಿಯಲ್ಲಿ ಯಾವುದೇ ಟಾರ್ಪಲ್ ಇಲ್ಲದೆ ಪಡಿತರ ಅಕ್ಕಿ ಸಾಗಿಸುತ್ತಿದ್ದದ್ದು ಕಣ್ಣಿಗೆ ಬಿದ್ದಿದೆ. ತಕ್ಷಣ ಲಾರಿಯನ್ನು ಪಕ್ಕಕ್ಕೆ ನಿಲ್ಲಿಸಿ ಚಾಲಕನಿಗೆ ತರಾಟೆಗೆ ತೆಗೆದುಕೊಂಡು ಟಾರ್ಪಲ್ ಹಾಕಿಕೊಂಡು ಹೋಗುವಂತೆ ತಿಳಿ ಹೇಳಿದ್ದಾರೆ. ಜತೆಗೆ ಘಟನೆಯನ್ನು ಹಾಸನ ಜಿಲ್ಲಾಧಿಕಾರಿ ಗಮನಕ್ಕೂ ತಂದಿದ್ದಾರೆ.
ರೈತರು ವರ್ಷವಿಡೀ ಕಷ್ಟಪಟ್ಟು ದುಡಿದು ಲಾಭ ನಷ್ಟದ ಕುರಿತು ಯೋಚಿಸದೆ ಬೆಳೆದ ಬೆಳೆಯನ್ನು ಮಾರಾಟ ಮಾಡುತ್ತಾರೆ. ಆದರೆ ಅದನ್ನು ಸರಿಯಾದ ಕ್ರಮದಲ್ಲಿ ಸಂಸ್ಕರಣೆ ಮಾಡಿ ಸೊಸೈಟಿಗೆ ತಲುಪಿಸಬೆಕಾದ ದಲ್ಲಾಳಿಗಳ ಸೋಮಾರಿತನದಿಂದ ಇಂತಹ ಘಟನೆ ಸಂಭವಿಸಿದೆ. ಇಂದು ದೇಶದ ರೈತರಿಗೆ ಮಾಡುವ ಅವಮಾನ ಹಾಗೂ ಸರಕಾರಕ್ಕೆ ಮಾಡುವ ಮೋಸ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿ ಅರಸೀಕೆರೆಯಿಂದ ಕುರುವಂಕ ಸೊಸೈಟಿಗೆ ಹೋಗುತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ