ನೀರಿಗಾಗಿ ಕಲ್ಲೂರು ಗ್ರಾಮಸ್ಥರ ಪರದಾಟ


Team Udayavani, Mar 20, 2020, 1:25 PM IST

20-March-12

ರಿಪ್ಪನ್‌ಪೇಟೆ: ಕಳೆದ ಹದಿನೆಂಟು ವರ್ಷಗಳ ಹಿಂದೆ ಗ್ರಾಮಸ್ಥರಿಗೆ ನೀರಿನ ಬವಣೆ ನೀಗಿಸಲು ಸರಕಾರದಿಂದ ಕೊರೆಸಲಾದ ಬೋರ್‌ ವೆಲ್‌ ಶಿಥಿಲಗೊಂಡು ನೀರೆತ್ತಲು ಅಳವಡಿಸಲಾಗಿದ್ದ ಪಂಪ್‌ ಮೋಟಾರ್‌ ಹಾಳಾದ ಪರಿಣಾಮ ಕಲ್ಲೂರು ಗ್ರಾಮಸ್ಥರು ನೀರಿಗಾಗಿ ಪರದಾಡುವಂತಾಗಿದೆ.

ಗ್ರಾಮಸ್ಥರ ಬೇಡಿಕೆಯಂತೆ 2005-06 ನೇ ಸಾಲಿನಲ್ಲಿ ಸ್ವಜಲಧಾರ ಯೋಜನೆಯಡಿ ಅನುಷ್ಠಾನಗೊಂಡ ನೀರು ಸಬರಾಜು ಯೋಜನೆ ಯಾವುದೇ ತೊಂದರೆಯಿಲ್ಲದೆ ನಿರಾತಂಕವಾಗಿ ನಡೆಯುತ್ತಿತ್ತು. ಕಳೆದ ಮುಂಗಾರಿನಲ್ಲಿ ಸುರಿದ ಭಾರೀ ಮಳೆಯಿಂದ ಬೋರ್‌ವೆಲ್‌ಗೆ ನೀರು ನುಗ್ಗಿತ್ತು. ನೀರಿನ ಜೊತೆಗೆ ಅಪಾರ ಪ್ರಮಾಣದ ಮಣ್ಣು ಸಹಿತ ಕೊಳವೆಯೊಳಗೆ ಸೇರಿತ್ತು. ಪರಿಣಾಮ ಕೆಲದಿನಗಳಲ್ಲಿಯೇ ನೀರೆತ್ತುವ ಮೋಟಾರ್‌ ಕೆಟ್ಟು ನಿಂತಿತ್ತು. ಈ ಸಂದರ್ಭದಲ್ಲಿ ಗ್ರಾಮಾಡಳಿತ ಹಾಗೂ ಸರ್ಕಾರಕ್ಕೆ ನೀರಿಗಾಗಿ ಮನವಿ ಮಾಡಿದ ಗ್ರಾಮಸ್ಥರು ಖಾಸಗಿ ವ್ಯಕ್ತಿಗಳ ಬೋರ್‌ವೆಲ್‌ನಿಂದ ಕೆಲ ತಿಂಗಳಿನವರೆಗೆ ಸಂಪರ್ಕ ಕಲ್ಪಿಸಿಕೊಂಡು ನೀರು ಪಡೆಯುತ್ತಿದ್ದರು.

ಬಿರು ಬೇಸಿಗೆ ಹೆಚ್ಚಾದಂತೆಲ್ಲಾ ರೈತರ ಅಡಕೆ ಬೆಳೆಗೆ ನೀರು ಹೆಚ್ಚು ಬಿಡಬೇಕಾದ ಅನಿವಾರ್ಯತೆಯಿಂದ ಸಾರ್ವಜನಿಕರಿಗೆ ನೀರು ಕೊಡುತ್ತಿದ್ದ ರೈತ ನೀರು ನೀಡುತ್ತಿದ್ದುದನ್ನು ಸ್ಥಗಿತಗೊಳಿಸಿದ್ದಾರೆ. ಈ ಕಾರಣದಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇದೊಂದೇ ಬೋರಿನಿಂದ ಕಲ್ಲೂರು ಹಾಗೂ ಮಜರೆ ಗ್ರಾಮಗಳಾದ ಯಲಕ್ಕಿಕೊಪ್ಪ, ತೊರೆಗದ್ದೆ, ಬಿಕ್ಕಳ್ಳಿದಿಂಬ, ಹರಿಜನ ಕಾಲೋನಿ ಸೇರಿದಂತೆ ಸುಮಾರು 180 ಮನೆಗಳಿಗೆ ನೀರು ಪೂರೈಸಲಾಗುತ್ತಿತ್ತು. ಆದರೆ ಈಗ ಸಂಪರ್ಕ ಕಡಿತಗೊಂಡ ಪರಿಣಾಮ ಮಹಿಳೆಯರಾದಿಯಾಗಿ ಜನ- ಜಾನುವಾರುಗಳು ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಗ್ರಾಮಸ್ಥರು ಹಲವು ಬಾರಿ ಆಡಳಿತ ವ್ಯವಸ್ಥೆಯ ಗಮನಕ್ಕೆ ತಂದರೂ ಅ ಧಿಕಾರಿಗಳ ಬೇಜವಾಬ್ದಾರಿಯಿಂದ ಸಮರ್ಪಕ ಕುಡಿಯುವ ನೀರು ಪೂರೈಸಲು ಸಾಧ್ಯವಾಗಿಲ್ಲವೆಂಬುದು ಗ್ರಾಮಸ್ಥರ ಆರೋಪ. ನೀರಿನ ಸಮಸ್ಯೆಯ ಗಂಭೀರತೆಯನ್ನು ಸರಕಾರದ ಗಮನಕ್ಕೆ ತರಲು ಗ್ರಾಪಂ ಎದುರು ಧರಣಿ ಪ್ರತಿಭಟನೆಯನ್ನು ನಡೆಸಿದರು.

ಆಡಳಿತಗಾರರ ಭರವಸೆಯಂತೆ ತುರ್ತು ಅಗತ್ಯವಾಗಿ ನೂತನ ಬೋರ್‌ವೆಲ್‌ ಕೊರೆಸಿದರೂ ನೀರು ದೊರೆಯದೆ ಇದ್ದುದು ಜನರ ಆತಂಕಕ್ಕೆ ಕಾರಣವಾಗಿದೆ. ಶೀಘ್ರವಾಗಿ ಪರ್ಯಾಯ ವ್ಯವಸ್ಥೆಯೊಂದಿಗೆ ಗ್ರಾಮದ ಜನತೆಗೆ ಸಮಗ್ರ ನೀರು ಒದಗಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

„ನಾಗೇಶ್‌ ಎಸ್‌. ನಾಯಕ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.