ಕೋವಿಡ್ ನಿರ್ಮೂಲನೆಗಾಗಿ ಪೂಜೆ
Team Udayavani, Jun 14, 2020, 1:18 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಿಪ್ಪನ್ಪೇಟೆ: ಕೋವಿಡ್ ರೋಗ ನಿರ್ಮೂಲನೆಗಾಗಿ ಕೋಣಂದೂರು ಬೃಹನ್ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ ಹಾಗೂ ಲೋಕಕಲ್ಯಾಣಾರ್ಥಾವಾಗಿ ಮಹಾರುದ್ರಾಭಿಷೇಕ, ಲಿಂಗೈಕ್ಯ ಶ್ರೀಗಳ ಪುಣ್ಯಾರಾಧಾನೆ ಪ್ರಯುಕ್ತ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಕಾರ್ಯಕ್ರಮಗಳನ್ನು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನೇರವೇರಿಸಿದರು.
ನಂತರ ಆಶೀರ್ವಚನ ನೀಡಿದ ಅವರು, ವಿಶ್ವವನ್ನು ತಲ್ಲಣಗೊಳಿಸಿರುವ ಮಾರಕ ರೋಗ ಕೋವಿಡ್ ಮುಕ್ತವಾಗಲು ಮನುಷ್ಯ ಜಾಗೃತನಾಗಿ ಮೊತ್ತೂಬ್ಬರನ್ನು ಜಾಗೃತಗೊಳಿಸುವ ಕಾರ್ಯದಲ್ಲಿ ತೊಡಗುವಂತೆ ಕರೆ ನೀಡಿದರು. ಸರ್ಕಾರ, ಸಂಘ-ಸಂಸ್ಥೆಗಳು, ಆಶಾ, ಆರೋಗ್ಯ ರಕ್ಷಣಾ ಇಲಾಖೆ ಅನೇಕ ರೀತಿಯಿಂದ ಮಾರಕ ರೋಗ ನಿರ್ಮೂಲನೆಗಾಗಿ ಪಣ ತೊಟ್ಟಿರುವುದು ಶ್ಲಾಘನೀಯವಾಗಿದೆ. ಪ್ರಧಾನ ಮಂತ್ರಿ ಮೋದಿ ಹಾಗೂ ರಾಜ್ಯ ಸರ್ಕಾರಗಳು ಸಹ ಪಕ್ಷಭೇದ ಮರೆತು ರೋಗ ನಿಯಂತ್ರಣದಲ್ಲಿ ತೊಡಗಿಕೊಂಡಿರುವುದು ಪ್ರಶಂಸನೀಯವೆಂದರು. ಇದೇ ಸಂದರ್ಭದಲ್ಲಿ ಹಿರಿಯಜ್ಜಿಯನ್ನು ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು.
ಬಿರೂರು ರಂಭಾಪುರಿ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮೀಜಿ, ಧಮರಾಜ್ಗೌಡ ರಿಪ್ಪನ್ಪೇಟೆ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’