ಸಮಾಜಕ್ಕೆ ಸಾಧುಸಂತರ ಕೊಡುಗೆ ಅಪಾರ
Team Udayavani, Nov 16, 2020, 8:21 PM IST
ಭದ್ರಾವತಿ: ಜಗತ್ತಿಗೆ ಅನಾದಿ ಕಾಲದಿಂದಲೂ ಆಧ್ಯಾತ್ಮಿಕ ಮೌಲ್ಯ ಮತ್ತು ಸಂಸ್ಕೃತಿಯನ್ನು ಕೊಡುಗೆಯಾಗಿ ನೀಡಿದವರು ಸಾಧು ಸಂತರು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶುಕ್ರವಾರ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಶ್ರೀ ಮಠದ ಲಿಂಗೈಕ್ಯ ರಾಚೋಟೇಶ್ವರ ಶಿವಾಚಾರ್ಯರ ಮತ್ತುಲಿಂಗೈಕ್ಯ ಶ್ರೀ ಗುರುಸಿದ್ದ ಶಿವಾಚಾರ್ಯರ ಸ್ಮರಣೋತ್ಸವಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಸಂತರ ಸ್ಮರಣೆಯಿಂದ ಸಮಾಜದಲ್ಲಿ ಸಾಮರಸ್ಯ ಮೂಡಿಸಲುಸಾಧ್ಯ. ಹಿಂದೆ ಅವರ ಅನುಗಹ್ರದಿಂದ ಪರಿಸರ ಸೇರಿದಂತೆಸಮಾಜವು ಸುಸ್ಥಿತಿಯಲ್ಲಿತ್ತು. ಈಗಲೂ ಅಂತಹ ಪುಣ್ಯ ಪುರುಷರ ನಾಮ ಸ್ಮರಣೆಯಿಂದ ಶಾಂತಿ ನೆಮ್ಮದಿ ಕಾಣಲು ಸಾಧ್ಯವಾಗಿದೆ ಎಂದು ಹೇಳಿದರು.
ಬಿಳಿಕಿ ಶ್ರೀಮಠದ ಪೀಠಾಧ್ಯಕ್ಷ ಶ್ರೀ ರಾಚೋಟೇಶ್ವರಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಮಠದ ಕಾರ್ಯಾಧ್ಯಕ್ಷ ಟಿ.ವಿ. ಈಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು.ತಾವರೆಕೆರೆ ಶಿಲಾಮಠದ ಡಾ| ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ಶ್ರೀಮಠದಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಇದ್ದರು. ಸುರೇಶ್ ಶಾಸ್ತ್ರಿ, ಲೋಕೇಶ್ರಾವ್, ಅರ್ಜುನ್ರಾವ್, ಬಸವರಾಜ್, ಕುಮಾರ್, ಮೋಹನ್ ಮತ್ತಿತರ ಗ್ರಾಮದ ಮುಖಂಡರು ಇದ್ದರು.
ಬೆಳಗ್ಗೆ ಲೋಕ ಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಹಾಗು ಕೋವಿಡ್ ಮುಕ್ತಿಗಾಗಿ ಮಹಾರುದ್ರಾ ಭಿಷೇಕ, ರುದ್ರಹೋಮ, ಗಣಹೋಮ, ಶಾಂತಿ ಹೋಮಾದಿಗಳನ್ನು ಕೀರ್ತೀಕುಮಾರ್ ಶಾಸ್ತ್ರಿ, ಆನಂದ್ ಶಾಸ್ತ್ರಿ, ಗಿರೀಶ್ ಶಾಸ್ತ್ರಿ, ಮಂಜುನಾಥ ಶಾಸ್ತ್ರಿ ನೆರವೇರಿ ಸಿದರು. ಮಠದ ವ್ಯವಸ್ಥಾಪಕ ಚಿದಾನಂದ ಸ್ವಾಮಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ