Sagar;ಶಾಲೆ ಮೇಲ್ಛಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ
Team Udayavani, Jun 26, 2023, 4:15 PM IST
ಸಾಗರ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಸಣ್ಣ ಮಳೆಗೆ ನಗರದ ಅರಳೀಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕೋಣೆಯೊಂದರ ಮೇಲ್ಛಾವಣಿ ಭಾನುವಾರ ಕುಸಿದಿದ್ದು, ಶಾಲೆಗೆ ರಜೆಯಿದ್ದ ಹಿನ್ನೆಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ಕಳೆದ ಭಾನುವಾರ ಬೆಳಗಿನ ಜಾವ ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದು, ಹೆಂಚು, ಪಕಾಸಿ ಧ್ವಂಸಗೊಂಡಿವೆ. ಶಾಲೆ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದೇ ಆದರೆ ಸಾಕಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಅರಳೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದಾರು ಕೋಣೆಗಳು ಶಿಥಿಲಗೊಂಡು ಮಳೆಯಿಂದ ಸೋರುತ್ತಿವೆ. ಈ ಬಗ್ಗೆ ಶಾಲಾ ಸಿಬ್ಬಂದಿ, ಎಸ್ಡಿಎಂಸಿ ಸದಸ್ಯರು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಎಸ್ಡಿಎಂಸಿ ಅಧ್ಯಕ್ಷ ರಹಮತ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಕೆಜಿಯಿಂದ 7ನೇ ತರಗತಿ ಇದ್ದರೂ, ಮೂರು ಕೋಣೆಗಳಲ್ಲಿ ಮಾತ್ರ ಪಾಠ ಪ್ರವಚನ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ಕಲಿಕೆಗೆ ಸಾಕಷ್ಟು ತೊಂದರೆಯಾಗುತ್ತಿದೆ. ಕೂಡಲೇ ಶಾಲೆಯ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೆ ಮುಂದಾಗುವ ಅನಾಹುತಕ್ಕೆ ತಾಲೂಕು ಆಡಳಿತ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆ ಕೋಣೆಯ ಮೇಲ್ಛಾವಣಿ ಕುಸಿದ ವಿಷಯ ತಿಳಿದ ತಕ್ಷಣ ಸಹಾಯಕ ಆಯುಕೆ ಪಲ್ಲವಿ ಸಾತೇನಹಳ್ಳಿ ಸ್ಥಳಕ್ಕೆ ಆಗಮಿಸಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಮತ್ತು ಇಸಿಒ ಅವರಿಗೆ ಹಾನಿಗೀಡಾದ ಕುರಿತು ವರದಿ ಸಲ್ಲಿಸಲು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿ ಸಮಿತಿಯ ಎಂ.ಟಿ.ಎಸ್ ರಶೀದ್, ರಫೀವುದ್ದೀನ್, ಡಿ.ಕೆ.ಎಸ್. ಅಕ್ಬರ್, ರಿಯಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ