ಸಾಗರ: ಗಂಡು ಕರುಗಳನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು
Team Udayavani, Jul 2, 2023, 3:58 PM IST
ಸಾಗರ: ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಶನಿವಾರ ಸಂಜೆ ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ.
ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ. ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು. ವರದಪುರದ ಶ್ರೀಧರಾಶ್ರಮದಲ್ಲಿ ಸ್ಥಳಾವಕಾಶದ ಕೊರತೆ ಇದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ತ್ಯಾಗರ್ತಿಯ ದೊಡ್ಡಿ ಮೊದಲಾದವುಗಳ ಬಗ್ಗೆ ವಿಚಾರಿಸಿದರು.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಇಂದುಧರ ವರದಹಳ್ಳಿ ಹಾಗೂ ಶ್ರೀಧರಗೌಡ, ಕರುಗಳನ್ನು ರಸ್ತೆಯಲ್ಲಿಯೇ ಅನಾಥವಾಗಿ ಬಿಟ್ಟರೆ ನಾಯಿಗಳು ದಾಳಿ ಮಾಡಬಹುದು. ಆಹಾರದ ಕೊರತೆಯೂ ಕರುಗಳಿಗೆ ಕಾಡಬಹುದು. ಈ ಹಂತದಲ್ಲಿ ಶ್ರೀಧರ ಸೇವಾ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಧರರಾವ್ ಕಾನಲೆ ಅವರ ಸೂಚನೆಯಂತೆ ಅಂತಿಮವಾಗಿ ಕುಂಟಗೋಡಿನ ಪುಣ್ಯಕೋಟಿ ಗೋ ಶಾಲೆಗೆ ಈ ಹೋರಿ ಕರುಗಳನ್ನು ತೆಗೆದುಕೊಂಡು ಹೋಗಿ ಬಿಡಲಾಯಿತು. ಕರುಗಳ ಪೋಷಣೆಗೆ ಶ್ರೀಧರಾಶ್ರಮ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ ಎಂದರು.
ಕರುಗಳ ರವಾನೆಯಲ್ಲಿ ತೀರ್ಥೇಶ್ ವರಹಳ್ಳಿ, ಸಚಿನ್ ಕರ್ಕಿಕೊಪ್ಪ, ಶ್ರೀಧರ, ಉಮೇಶ, ಸಂಕೇತ ಕರ್ಕಿಕೊಪ್ಪ, ರಾಘು ಹುಲಿಸರ, ಅಪ್ಪು ಇತರರು ಸಹಕಾರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ