ಕರ್ತವ್ಯದ ಮಧ್ಯೆಯೇ ರಕ್ತದಾನ
Team Udayavani, Apr 25, 2020, 5:44 PM IST
ಸಾಗರ: ಕರ್ತವ್ಯದ ನಡುವೆಯೇ ರಕ್ತದಾನ ಮಾಡಿದ ರತ್ನಾಕರ್ರಿಗೆ ಸಾಕ್ಷಿಪತ್ರ ನೀಡಲಾಯಿತು.
ಸಾಗರ: ತಾಲೂಕಿನ ಪಕ್ಕದ ಸಿದ್ಧಾಪುರದ ಮಹಿಳೆಯೋರ್ವಳ ಶಸ್ತ್ರಚಿಕಿತ್ಸೆಗೆ ಬೇಕಾಗಿದ್ದ ಓ ನೆಗೆಟಿವ್ ರಕ್ತವನ್ನು ನಗರದ ಪೊಲೀಸ್ ದಫೇದಾರ್ ಓರ್ವರು ನೀಡಿ ಮಾನವೀಯತೆಯ ಮತ್ತೊಂದು ಮಗ್ಗುಲನ್ನು ಪರಿಚಯಿಸಿದ ಘಟನೆ ಶುಕ್ರವಾರ ನಡೆದಿದೆ.
ಕೋವಿಡ್ ಹಿನ್ನೆಲೆಯಲ್ಲಿ ಲಾಕ್ಡೌನ್ ಇರುವುದರಿಂದ ರಕ್ತದಾನಿಗಳನ್ನು ತಕ್ಷಣ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲು ಮಹಿಳೆಯ ಕುಟುಂಬದವರಿಗೆ ಸಾಧ್ಯವಾಗಿಲ್ಲ. ಇಂತಹ ಅನಿವಾರ್ಯ ಸ್ಥಿತಿಯಲ್ಲಿ ನಗರದ ರೆಡ್ಕ್ರಾಸ್ ಬ್ಲಿಡ್ ಬ್ಯಾಂಕ್ ಸಂಸ್ಥೆ ತಮ್ಮ ದಾಖಲೆಗಳಲ್ಲಿ ಇರುವ ಡಿವೈಎಸ್ಪಿ ಕಚೇರಿಯ ದಫೇದಾರ್ ರತ್ನಾಕರ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.
ಕರ್ತವ್ಯ ನಿರತರಾಗಿದ್ದೂ ಸ್ವಲ್ಪ ಸಮಯದ ಬಿಡುವು ಪಡೆದು ಧಾವಿಸಿದ ರತ್ನಾಕರ್ ರಕ್ತದಾನ ಮಾಡಿದ್ದಾರೆ. ಪೊಲೀಸರು ಜನರನ್ನು ಕೊರೊನಾದಿಂದ ರಕ್ಷಿಸುವ ಹಿನ್ನೆಲೆಯಲ್ಲಿ ಕೆಲಸ ಮಾಡುವುದರ ಜೊತೆಗೆ ಈ ರೀತಿಯಲ್ಲಿಯೂ ಆರೋಗ್ಯ ರಕ್ಷಣೆಗೆ ಮುಂದಾಗಿರುವುದು ಜನರಲ್ಲಿ ಪೊಲೀಸರ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತವಾಗಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್