ಸಾಗರ : ಅಡಿಕೆ ಕಳ್ಳರ ಬಂಧನ : 8.35 ಲಕ್ಷ ರೂ. ಮೌಲ್ಯದ ಸೊತ್ತು ವಶ
Team Udayavani, Jun 5, 2022, 9:17 PM IST
ಸಾಗರ: ತಾಲೂಕಿನ ತಾಳಗುಪ್ಪ ಹೋಬಳಿ ಸೇರಿದಂತೆ ಗ್ರಾಮಾಂತರ ಪ್ರದೇಶದ ವಿವಿಧ ಕಡೆಗಳಲ್ಲಿನ 7 ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಭಾನುವಾರ 7 ಜನ ಆರೋಪಿಗಳನ್ನು ವಶಪಡಿಸಿಕೊಂಡು, ಕದ್ದ ಮಾಲನ್ನು ಮತ್ತು ಕಳ್ಳತನಕ್ಕೆ ಬಳಸಲಾಗಿದ್ದ ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಡಿಕೆ ಕಳ್ಳತನ ಪ್ರಕರಣ ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಟಾಕಾರಿ ಲಕ್ಷ್ಮಿ ಪ್ರಸಾದ್ ಹಾಗೂ ಎಎಸ್ಪಿ ಡಾ. ವಿಕ್ರಂ ಅಮಾತೆ ಮಾರ್ಗದರ್ಶನದಲ್ಲಿ ಎಸ್ಎಸ್ಪಿ ರೋಹನ್ ಜಗದೀಶ್ ಮೇಲುಸ್ತುವಾರಿಯಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಮತ್ತು ಅಪರಾಧ ವಿಭಾಗದ ಸುಜಾತ ನೇತೃತ್ವದ ವಿಶೇಷ ತಂಡ ರಚಿಸಲಾಗಿತ್ತು. ಪ್ರೊಬೆಷನರಿ ಅಧಿಕಾರಿ ರಘುವೀರ್, ಸಿಬ್ಬಂದಿ ತಾರಾನಾಥ, ರಘು ಶೆಟ್ಟಿ, ಅಶೋಕ್, ರವಿಕುಮಾರ್, ಈರಯ್ಯ ಮಠಪತಿ, ವಿನಾಯಕ, ಮಾಲತೇಶ್, ನರೇಂದ್ರ ಮತ್ತಿತರು ಕಾರ್ಯಾಚರಣೆ ನಡೆಸಿದ್ದರು.
ಬಂಧಿತ ಆರೋಪಿಗಳಿಂದ 8.35 ಲಕ್ಷ ರೂ. ಮೌಲ್ಯದ ಸಿಪ್ಪೆಗೋಟು, ಚಾಲಿ ಹಾಗೂ ಕೆಂಪು ಅಡಕೆ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಓಮ್ನಿ, 2 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ : ಮಳೆ-ಗಾಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ ಗಳ ನಡುವೆ ಅಪಘಾತ : ಓರ್ವನ ಸ್ಥಿತಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ