ಸಾಗರ : ದಾಖಲಾಗದ ಎಫ್‌ಐಆರ್ ; ಪೊಲೀಸ್ ವೈಫಲ್ಯದ ವಿರುದ್ಧ ಜು. 14 ರಂದು ಪ್ರತಿಭಟನೆ


Team Udayavani, Jul 12, 2022, 4:30 PM IST

ಸಾಗರ : ದಾಖಲಾಗದ ಎಫ್‌ಐಆರ್ ; ಪೊಲೀಸ್ ವೈಫಲ್ಯದ ವಿರುದ್ಧ ಜು. 14 ರಂದು ಪ್ರತಿಭಟನೆ

ಸಾಗರ : ಮಾರ್ಚ್ 13ರಂದು ಶ್ರೀಪಾದ ಹೆಗಡೆ ಮತ್ತು ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲು ಮಾಡದ ಪೊಲೀಸ್ ವೈಫಲ್ಯವನ್ನು ಖಂಡಿಸಿ ಜು. 14 ರಂದು ಬ್ರಾಹ್ಮಣ ಮತ್ತು ವೀರಶೈವ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯವಾದಿ ಕೆ.ಎನ್.ಶ್ರೀಧರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೊಂದವರಿಗೆ ನ್ಯಾಯ ಕೊಡಬೇಕಾಗಿದ್ದ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಕಂಡಿದೆ. ಹಿಂಸೆಯನ್ನು ವಿರೋಧಿಸುವ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಎಂಡಿಎಫ್ ಉಳಿಸಿ, ಶ್ರೀಪಾದ ಹೆಗಡೆ ಬಂಧಿಸಿ ಎಂದು ಒಂದು ಗುಂಪು ಕರಪತ್ರ ಹಂಚುವ ಮೂಲಕ ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ. ಶ್ರೀಪಾದ ಹೆಗಡೆ ಮಾಡಿರುವ ತಪ್ಪು ಏನೆಂದು, ಅವರು ಕೆಲಸ ಮಾಡುತ್ತಿರುವ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತ ದಾಖಲೆ ಬಿಡುಗಡೆ ಮಾಡಲಿ. ಶ್ರೀಪಾದರ ಹಿಂದೆ ಮಾಜಿ ಶಾಸಕರೊಬ್ಬರಿದ್ದಾರೆಂದು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತಿದ್ದು, ಆ ಶಾಸಕರು ಯಾರೆಂದು ಕರಪತ್ರ ಹಂಚಿ, ಪ್ರತಿಭಟನೆ ನಡೆಸುತ್ತಿರುವವರು ಸಾರ್ವಜನಿಕರಿಗೆ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

2016ರಲ್ಲಿ ನಿಸ್ರಾಣಿ ಎಂಡಿಎಫ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಹಿಂದೆ ಕೆ.ಎಚ್.ಶ್ರೀನಿವಾಸ್ ಅಧ್ಯಕ್ಷರಾಗಿದ್ದರು. ಹರನಾಥ್‌ರಾವ್ ಉಪಾಧ್ಯಕ್ಷರಾಗಿದ್ದರು. ಆಗಲೇ ಹೊಸ ಸದಸ್ಯರನ್ನು ತಲಾ 25 ಸಾವಿರ ರೂಪಾಯಿ ಶುಲ್ಕ ವಸೂಲಿ ಮಾಡಿ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ಸದಸ್ಯತ್ವ ಮಾಡಲು ಸಿ.ಎಂ.ಎನ್.ಶಾಸ್ತ್ರಿ 10 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಶ್ರೀಪಾದ ಹೆಗಡೆ ಕಾನೂನಾತ್ಮಕವಾಗಿ ಇದ್ದಾರೆಂದು ಕೆಲವರು ಕರಪತ್ರ ಹಂಚುವುದು, ಪ್ರತಿಭಟನೆ ನಡೆಸುತ್ತೇವೆಂದು ಬ್ಲಾಕ್‌ಮೇಲ್ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ. ಶ್ರೀಪಾದ ಹೆಗಡೆ ವಿರುದ್ಧ ಅಪಪ್ರಚಾರದ ಕರಪತ್ರ ಹಂಚಿರುವ ನಾಲ್ಕು ಜನರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

ಇದನ್ನೂ ಓದಿ : ರೈಲ್ವೆ ಸವಾಲು ಪರಿಹಾರಕ್ಕಾಗಿ ನವೋದ್ಯಮಕ್ಕೆ ಉತ್ತೇಜನ

ಶ್ರೀಪಾದ ಹೆಗಡೆ ನಿಸ್ರಾಣಿ ಮಾತನಾಡಿ, ನಾನು ಎಂಡಿಎಫ್ ಉಪಾಧ್ಯಕ್ಷನಾಗಿ ಮಾಡಿದ ಅಭಿವೃದ್ಧಿಗೆ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಲಾಗುತ್ತಿದೆ. ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಕುಮ್ಮಕ್ಕಿನಿಂದಲೇ ಇದೆಲ್ಲಾ ನಡೆಯುತ್ತಿದೆ. ಹರನಾಥ್‌ರಾವ್ ನೇತೃತ್ವದ ಸಮಿತಿಯೇ ಅಧಿಕೃತ ಎಂದು ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು. ಆದರೆ ನ್ಯಾಯಾಲಯ ಮೂರು ವಾರದಲ್ಲಿ ಅಧಿಕೃತ ಆಡಳಿತ ಮಂಡಳಿ ತೀರ್ಮಾನ ಮಾಡಲು ಜಿಲ್ಲಾ ನೊಂದಣಾಧಿಕಾರಿಗಳಿಗೆ ಸೂಚನೆ ನೀಡಿದೆ. ನನ್ನ ಮೇಲೆ ಮತ್ತು ಜಗದೀಶ್‌ಗೌಡ ಅವರ ಮೇಲೆ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯಕ್ಕೆ ನ್ಯಾಯ ಕೇಳುವುದು ತಪ್ಪಾ ಎಂದು ಪ್ರಶ್ನಿಸಿದ ಅವರು, ಈತನಕ ಎಫ್‌ಐಆರ್ ಸಹ ದಾಖಲು ಮಾಡದೆ ಇರುವುದು ಖಂಡನೀಯ ಎಂದರು.

ನನ್ನ ಮೇಲೆ ಆಗಿರುವ ದೌರ್ಜನ್ಯ ಕುರಿತು ತಾಲೂಕಿನ ಮನೆಮನೆಗೆ ಪಾದಯಾತ್ರೆ ಮೂಲಕ ತೆರಳಿ ಜನರಿಗೆ ತಿಳಿಸುವ ಕೆಲಸ ಮಾಡುತ್ತೇನೆ. ನನ್ನ ಮೇಲೆ ಆರೋಪ ಮಾಡುವವರು ಬಹಿರಂಗ ಚರ್ಚೆಗೆ ಬರಲಿ. ನೆಹರೂ ಮೈದಾನದಲ್ಲಿ ಇದಕ್ಕಾಗಿ ವೇದಿಕೆ ತಯಾರಿಸಲು ಸಿದ್ಧನಿದ್ದೇನೆ. ಶಾಸಕರು ಬಂದು ನೇರವಾಗಿ ಚರ್ಚೆ ನಡೆಸಲಿ. ಹಿಂದೆ ಸಹ ಹರತಾಳು ಹಾಲಪ್ಪ ಸೊರಬ ಶಾಸಕರಾಗಿದ್ದಾಗ ಮಹಾಬಲೇಶ್ವರ ಹೆಗಡೆ ಮತ್ತು ಉಮಾಪತಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಈಚೆಗೆ ಆವಿನಹಳ್ಳಿಯ ಶಶಿಗೌಡ ಎಂಬುವವರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಅಪಪ್ರಚಾರದ ಕರಪತ್ರ ಹಂಚಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದರು.

ಗೋಷ್ಠಿಯಲ್ಲಿ ಅರುಣಕುಮಾರ್, ಚಂದ್ರಶೇಖರ್ ಎನ್.ಎಚ್., ದಳವಾಯಿ ದಾನಪ್ಪ, ಪ್ರದೀಪ್ ಬರಿಗೆ, ರಜನೀಶ್ ಹೆಗಡೆ, ನಟರಾಜ್, ಕೃಷ್ಣಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.