Sagara;ನಾಯಿ ಕಚ್ಚಿ ಗಾಯ: ನಾಡಿಗೆ ಬಂದಿದ್ದ ಜಿಂಕೆ ಹೃದಯಾಘಾತದಿಂದ ಸಾವು
Team Udayavani, Aug 23, 2023, 10:28 PM IST
ಸಾಗರ: ಆಹಾರ ಹುಡುಕಿ ಕಾಡಿನಿಂದ ನಾಡಿಗೆ ಬಂದಿದ್ದ 2 ವರ್ಷದ ಜಿಂಕೆಗೆ ನಾಯಿ ಕಚ್ಚಿದ್ದು, ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ.
ತಾಲೂಕಿನ ಹೊರವಲಯದ ಮಾಲ್ವೆ ಕಾನುಗೋಡು ಗ್ರಾಮದಲ್ಲಿ ಕಾಣಿಸಿಕೊಂಡ ಜಿಂಕೆಯನ್ನು ನಾಯಿ ಕಚ್ಚಿ ಗಾಯಗೊಳಿಸಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ನಾಯಿಯನ್ನು ಓಡಿಸಿ, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಉಪವಲಯ ಅರಣ್ಯ ಅಧಿಕಾರಿ ಅಣ್ಣಪ್ಪ ನೇತೃತ್ವದ ತಂಡ ಜಿಂಕೆಯನ್ನು ಸುರಕ್ಷಿತವಾಗಿ ಸಾಗರದ ಪಶು ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಜಿಂಕೆಗೆ ಜ್ವರ ಕಾಣಿಸಿಕೊಂಡಿದ್ದರಿಂದ ಹೃದಯಾಘಾತವಾಗಿ ಮೃತಪಟ್ಟಿದೆ.
ಈ ಕಾರ್ಯಾಚರಣೆಯಲ್ಲಿ ಬೀಟ್ ಫಾರೆಸ್ಟರ್ ಯುವರಾಜ್, ಪಶು ವೈದ್ಯಾಧಿಕಾರಿ ಡಾ. ಅರವಿಂದ್ ಇದ್ದರು. ಗ್ರಾಮಸ್ಥರು ಅರಣ್ಯ ಇಲಾಖಾ ಸಿಬ್ಬಂದಿಗೆ ಸಹಕಾರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ